ಐಪಿಎಸ್ ಅಧಿಕಾರಿ ಡಿ. ರೂಪಾ ಕೊಟ್ಟ ಐದು ಪುಟಗಳ ವರದಿಯಲ್ಲಿ ಏನಿತ್ತು ?
ಬೆಂಗಳೂರು, ಡಿಸೆಂಬರ್ 28: ನಿರ್ಭಯ ಸೇಫ್ ಸಿಟಿ ಯೋಜನೆ ಟೆಂಡರ್ ಅಕ್ರಮಕ್ಕೆ ಸಂಬಂಧಪಟ್ಟಂತೆ ಅಪರ ಮುಖ್ಯ ಕಾರ್ಯದರ್ಶಿ ಅವರು ನೀಡಿದ್ದ ನೋಟಿಸ್ ಗೆ ಗೃಹ ಇಲಾಖೆ ಕಾರ್ಯದರ್ಶಿ ಡಿ. ರೂಪಾ ಮುದ್ಗಿಲ್ ಉತ್ತರ ನೀಡಿದ್ದಾರೆ. ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಐದು ಪುಟಗಳ ಉತ್ತರ ನೀಡಿದ್ದಾರೆ.
ನಿರ್ಭಯಾ ನಿಧಿ ಬಳಸಿ ರೂಪಿಸಿರುವ ಸೇಫ್ ಸಿಟಿ ಟೆಂಡರ್ ನಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗೃಹ ಕಾರ್ಯದರ್ಶಿ ಡಿ. ರೂಪಾ ಅವರು ದೆಹಲಿ ಮೂಲದ ಐ ಅಂಡ್ ವೈ ಕಂಪನಿಗೆ ಕರೆ ಮಾಡಿ ಮಾಹಿತಿ ಕೇಳಿದ್ದರು. ಈ ವಿಷಯ ಟೆಂಡರ್ ಪರಿಶೀಲನಾ ಮತ್ತು ಭದ್ರತಾ ಸಮಿತಿ ಅಧ್ಯಕ್ಷರಾಗಿರುವ ಹೇಮಂತ್ ನಿಂಬಾಳ್ಕರ್ ಅವರಿಗೆ ಗೊತ್ತಾಗಿತ್ತು. ಮೂರನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಆಕ್ಷೇಪಿಸಿ ಹೇಮಂತ್ ನಿಂಬಾಳ್ಕರ್ ಅಪರ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದರು. ನಿಂಬಾಳ್ಕರ್ ಪತ್ರ ಬಹಿರಂಗವಾಗುತ್ತಿದ್ದಂತೆ, ನಿಂಬಾಳ್ಕರ್ ಅವರೇ ಟೆಂಡರ್ ನಲ್ಲಿ ಅಕ್ರಮ ಎಸಗಿದ್ದಾರೆ. ಐಎಂಎ ಪ್ರಕರಣದಲ್ಲಿ ಆರೋಪಿಯಾಗಿರುವ ಅವರನ್ನು ಟೆಂಡರ್ ಪರಿಶೀಲನಾ ಸಮಿತಿ ಅಧ್ಯಕ್ಷ ಸ್ಥಾನದಿಂದ ಹೊರಗಿಟ್ಟು ಅಕ್ರಮ ಬಗ್ಗೆ ತನಿಖೆ ನಡೆಸಬೇಕು ಎಂದು ಹಿರಿಯ ಐಪಿಎಸ್ ಅಧಿಕಾರಿ ರೂಪಾ ಅವರು ಹೇಳಿಕೆ ನೀಡಿದ್ದರು. ಇದು ಇಬ್ಬರ ಅಧಿಕಾರಿಗಳ ನಡುವೆ ಜಟಾಪಟಿಗೆ ಕಾರಣವಾಗಿತ್ತು.
ರೂಪಾ ಅವರ ಹೇಳಿಕೆ ಆಧರಿಸಿ ಮಾಧ್ಯಮಗಳು ಮಾಡಿರುವ ಸುದ್ದಿ ನಿರಾಧಾರ. ಸುಳ್ಳು ಆಪಾದನೆ ಮಾಡಲಾಗಿದೆ. ಈ ಬಗ್ಗೆ ನಾನು ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಅದು ವಿಚಾರಣೆ ಹಂತದಲ್ಲಿದೆ ಎಂದು ನಿಂಬಾಳ್ಕರ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದರು. ಸುದ್ದಿಗೋಷ್ಠಿ ಮುಗಿದ ಕೆಲವೇ ಕ್ಷಣಗಳಲ್ಲಿ ಪ್ರತಿಕ್ರಿಯೆ ನೀಡಿದ್ದ ರೂಪಾ ಅವರು, ಮೂರನೇ ಟೆಂಡರ್ ನಲ್ಲಿ ಪಾರದರ್ಶಕ ನಿಯಮ ಗಾಳಿಗೆ ತೂರಲಾಗಿದೆ ಎಂದು ವಿವರಿಸಿದ್ದರು. ನಿಂಬಾಳ್ಕರ್ ಅವರ ಪತ್ರದ ಹಿನ್ನೆಲೆಯಲ್ಲಿ ರೂಪಾ ಅವರಿಗೆ ದಾಖಲೆ ಸಮೇತ ಉತ್ತರ ನೀಡುವಂತೆ ಕೋರಿ ಅಪರ ಮುಖ್ಯ ಕಾರ್ಯದರ್ಶಿಗಳು ಸೂಚಿಸಿದ್ದರು. ಅದಕ್ಕೆ ರೂಪಾ ಅವರು ಸಮರ್ಥ ಉತ್ತರ ನೀಡಿದ್ದಾರೆ ಎನ್ನಲಾಗಿದೆ.

ಅಪರ ಮುಖ್ಯ ಕಾರ್ಯದರ್ಶಿಗಳು ಕೇಳಿದ್ದ ಏಳು ಪ್ರಶ್ನೆಗಳಿಗೆ ಉತ್ತರಿಸಿರುವ ರೂಪಾ ಅವರು, ಟೆಂಡರ್ ರದ್ದು ಗೊಳಿಸಿ ಅಕ್ರಮ ಎಸಗಿದ ಬಗ್ಗೆ ಬಿಇಎಲ್ ಸಂಸ್ಥೆ ಪ್ರಧಾನಿ ಕಚೇರಿಗೆ ನೀಡಿದ್ದ ದೂರು ಹಾಗೂ ಅಖಿಲ ಭಾರತ ಭ್ರಷ್ಟಾಚಾರ ವಿರೋಧಿ ಒಕ್ಕೂಟ ಪ್ರಧಾನ ಕಾರ್ಯದರ್ಶಿ ಗೃಹ ಇಲಾಖೆಗೆ ನೀಡಿದ್ದ ದೂರನ್ನು ಉಲ್ಲೇಖಿಸಿ ಉತ್ತರಿಸಿದ್ದಾರೆ ಎಂದು ಗೊತ್ತಾಗಿದೆ. ಇ ಅಂಡ್ ವೈ ಕಂಪನಿಗೆ ಪ್ರಶ್ನಿಸಲು ನಿಮ್ಮ ಬಳಿ ಇದ್ದ ಮಾಹಿತಿ ಏನು ಎಂದು ಕೇಳಿದ್ದ ಪ್ರಶ್ನೆಗೆ, ಸಾರ್ವಜನಿಕವಾಗಿ ಕೇಳಿ ಬಂದಿದ್ದ ದೂರುಗಳೇ ಆಧಾರ ಎಂದಿದ್ದಾರೆ. ಅಲ್ಲದೇ ಪ್ರಧಾನಿ ಕಚೇರಿಗೆ ಸಲ್ಲಿಸಿರುವ ದೂರಿನ ಪ್ರತಿಯನ್ನು ಉಲ್ಲೇಖಿಸಿ ಸಮುಜಾಯಿಷಿ ನೀಡಿದ್ದಾರೆ ಎಂದು ಗೊತ್ತಾಗಿದೆ.

ಉಳಿದಂತೆ ಕರ್ನಾಟಕ ಪಾರದರ್ಶಕ ನಿಯಮ ಹಾಗೂ ಟೆಂಡರ್ ಬಿಡ್ ದಾರರು ಪಾಲ್ಗೊಳ್ಳುವ ಬಗ್ಗೆ ಆರ್ಥಿಕ ಇಲಾಖೆ ನಿಗಧಿ ಪಡಿಸಿರುವ ಷರತ್ತುಗಳನ್ನು ಸಡಿಸಿಲಿ ಸೇಫ್ ಸಿಟಿ ಮೂರನೇ ಟೆಂಡರ್ ಕರೆಯಲಾಗಿದೆ. ಕರ್ನಾಟಕ ಪಾರದರ್ಶಕ ನಿಯಮಗಳನ್ನು ಉಲ್ಲಂಘಿಸಿ ಟೆಂಡರ್ ಕರೆದಿರುವ ಬಗ್ಗೆ ಎಂಟು ಅಂಶಗಳನ್ನು ಉಲ್ಲೇಖಿಸಿ ರೂಪಾ ಅವರು ಉತ್ತರ ನೀಡಿದ್ದಾರೆ. ನವರತ್ನ ಪಟ್ಟಿಗೆ ಸೇರಿರುವ ಬಿಇಎಲ್ ಕಂಪನಿ ಪಾಲ್ಗೊಂಡಿದ್ದ ಎರಡನೇ ಟೆಂಡರ್ ರದ್ದು ಪಡಿಸಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಬಳಿಕ ಕರೆದಿರುವ ಮೂರನೇ ಟೆಂಡರ್ ನಲ್ಲಿ ಆಗಿರುವ ಮಹಾ ಲೋಪಗಳು, ಕರ್ನಾಟಕ ಪಾರದರ್ಶಕ ನಿಯಮದ ಉಲ್ಲಂಘನೆ ಕುರಿತು ಅಂಶಗಳನ್ನು ಉಲ್ಲೇಖಿಸಿ ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಐದು ಪುಟಗಳ ಉತ್ತರ ರವಾನಿಸಿದ್ದಾರೆ ಎಂದು ಗೊತ್ತಾಗಿದೆ. ಅಪರ ಮುಖ್ಯ ಕಾರ್ಯದರ್ಶಿ ಅವರ ನೋಟಿಸ್ ಗೆ ಉತ್ತರ ನೀಡಿರುವ ಸಂಗತಿಯನ್ನು ರೂಪಾ ಅವರು ಒನ್ ಇಂಡಿಯಾ ಕನ್ನಡಕ್ಕೆ ಸ್ಪಷ್ಟಪಡಿಸಿದರು.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications