Get Updates
Get notified of breaking news, exclusive insights, and must-see stories!

ಸರ್ಕಾರದ ವರ್ಗಾವಣೆ ಆದೇಶದ ಬಗ್ಗೆ ಐಪಿಎಸ್ ಅಧಿಕಾರಿ ಡಿ. ರೂಪಾ ಪ್ರಶ್ನೆ

ಬೆಂಗಳೂರು, ಜನವರಿ 01: ನಿರ್ಭಯ ಸೇಫ್ ಸಿಟಿ ಯೋಜನೆ ಟೆಂಡರ್ ಅಕ್ರಮ ಕುರಿತು ಧ್ವನಿಯೆತ್ತಿದ್ದಕ್ಕೆ ಗೃಹ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿರುವ ಬಗ್ಗೆ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟ್ವಿಟ್ಟರ್ ಖಾತೆಯಲ್ಲಿ ರೂಪಾ ಅವರು ಬೇಸರ ತೋಡಿಕೊಂಡಿದ್ದಾರೆ.

ನಿರ್ಭಯ ಸೇಫ್ ಸಿಟಿ ಯೋಜನೆ ಟೆಂಡರ್ ಅಕ್ರಮಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಐ ಅಂಡ್ ವೈ ಕಂಪನಿಗೆ ಕರೆ ಮಾಡಿ ದಾಖಲೆಗಳನ್ನು ರೂಪಾ ಅವರು ಕೇಳಿದ್ದರು. ಸಂಬಂಧವಿಲ್ಲದ ವ್ಯಕ್ತಿ ಮೂಗು ತೂರಿಸುತ್ತಿದ್ದು, ಈ ಕುರಿತು ತನಿಖೆ ನಡೆಸುವಂತೆ ಕೋರಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.

ನಿಂಬಾಳ್ಕರ್ ಪತ್ರ ಹೊರ ಬರುತ್ತಿದ್ದಂತೆ ನಿರ್ಭಯ ಸೇಫ್ ಸಿಟಿ ಯೋಜನೆಯ ಟೆಂಡರ್ ಅಕ್ರಮ ಕುರಿತು ರೂಪಾ ಅವರು ಕೆಲ ದೂರುಗಳ ಮಾಹಿತಿ ಹೊರ ಹಾಕಿದರು. ಇದು ಇಬ್ಬರ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು. ಹೇಮಂತ್ ನಿಂಬಾಳ್ಕರ್ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರೂ ಕೂಡ ರೂಪಾ ಅವರು ಸುಮ್ಮನೆ ಕೂರಲಿಲ್ಲ. ಬದಲಿಗೆ ನಿಂಬಾಳ್ಕರ್ ಸಾರ್ವಜನಿಕರಿಗೆ ಮತ್ತು ಮಾಧ್ಯಮಗಳಿಗೆ ತಪ್ಪು ಹೇಳಿಕೆ ನೀಡಿದ್ದಾರೆ ಎಂದು ಉಲ್ಲೇಖಿಸಿ ಟೆಂಡರ್ ನಲ್ಲಿ ಆಗಿದ್ದ ನಿಯಮ ಉಲ್ಲಂಘನೆ ಅಂಶಗಳನ್ನು ಬಹಿರಂಗಪಡಿಸಿದ್ದರು.

Nirbhaya tender row: IPS officer D. Roopa expressed outrage over the govt transfer order

ಇಬ್ಬರು ಐಪಿಎಸ್ ಗಳ ಕಚ್ಚಾಟ ಸರ್ಕಾರದ ಮಟ್ಟದಲ್ಲಿ ಮುಜುಗರಕ್ಕೆ ಈಡು ಮಾಡಿತ್ತು. ರೂಪಾ ಅವರಿಗೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ನೋಟಿಸ್ ನೀಡಿದ್ದರು. ಹೇಮಂತ್ ನಿಂಬಾಳ್ಕರ್ ಅವರಿಗೆ ಯಾಕೆ ನೋಟಿಸ್ ನೀಡಿಲ್ಲ. ನನಗೆ ಮಾತ್ರ ಯಾಕೆ ಕೊಟ್ಟಿದ್ದೀರಿ ಎಂದು ರೂಪಾ ಪ್ರಶ್ನಿಸಿದ್ದರು. ಇದು ಕೂಡ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗಿತ್ತು. ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಮುಜುಗರದಿಂದ ಪಾರಾಗಲು ಪ್ರಯತ್ನಿಸಿತ್ತು.

ಹೀಗಿರುವಾಗಲೇ ಗೃಹ ಕಾರ್ಯದರ್ಶಿ ಹುದ್ದೆಯಿಂದ ರೂಪಾ ಅವರನ್ನು ಎತ್ತಂಗಡಿ ಮಾಡಿ ಡಿಸೆಂಬರ್ 31 ರಂದು ರಾತ್ರಿ ವರ್ಗಾವಣೆ ಆದೇಶ ಹೊರ ಬಿದ್ದಿತ್ತು. ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದ್ದು, ಇಂದು ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮತ್ತೊಂದಂಡೆ ಬೆಂಗಳೂರು ಆಡಳಿತ ವಿಭಾಗದ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಸರ್ಕಾರದ ಈ ವರ್ಗಾವಣೆ ಆದೇಶದ ಬಗ್ಗೆ ರೂಪಾ ಅಸಮಾಧಾನ ಹೊರ ಹಾಕಿದ್ದಾರೆ.

Nirbhaya tender row: IPS officer D. Roopa expressed outrage over the govt transfer order

ನನ್ನ ವರ್ಗಾವಣೆ ಬಂದಿದೆ. ಕರಕುಶಲ ನಿಗಮದ ಎಂಡಿ ಎಂದು. ಸಿಬಿಐ ಈಗಾಗಲೇ ದೋಷಾರೋಪಣೆ ಸಲ್ಲಿಸಿ ನಿಂಬಾಳ್ಕರ್ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಿ ಎಂದು ಹೇಳಿ ಡಿಸೆಂಬರ್ ( ಒಂದು ವರ್ಷದ ಹಿಂದೆ) ಶಿಫಾರಸು ಮಾಡಿದ್ದರೂ, ಇನ್ನೂ ಶಿಸ್ತು ಕ್ರಮ ತೆಗೆದುಕೊಂಡಿಲ್ಲ. ಈ ವರ್ಗಾವಣೆ ನನ್ನನ್ನೂ ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನು ಒಂದೇ ತಕ್ಕಡಿಯಲ್ಲಿ ಅಳೆದಂತೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದಾದ ಬಳಿಕ ನಾನು ಕರಕುಶಲ ನಿಗಮದ ಎಂಡಿ ಯಾಗಿ ಅಧಿಕಾರ ಸ್ವೀಕರಿಸುತ್ತೇನೆ. ಭ್ರಷ್ಟಾಚಾರದ ಬಗ್ಗೆ ಧ್ವನಿಯೆತ್ತಿದ್ದೇ ತಪ್ಪಾ ಎಂದು ರೂಪಾ ಪ್ರಶ್ನಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+