ಸಬ್ ಅರ್ಬನ್ ರೈಲಿನ ಬಗ್ಗೆ ನಿರ್ಮಲಾ ಸೀತಾರಾಮನ್ ಏನಂದ್ರು?
ಬೆಂಗಳೂರು, ಫೆಬ್ರವರಿ 17: ಸೋಮವಾರ ಜನಪರ ಮುಂಗಡಪತ್ರ ಕುರಿತಂತೆ ಉದ್ಯಮಿಗಳು ಹಾಗೂ ಆಯ್ದ ಗಣ್ಯರೊಂದಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನಲ್ಲಿ ಸಂವಾದ ನಡೆಸಿದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಬೆಂಗಳೂರು ಸಬ್ ಅರ್ಬನ್ ರೈಲ್ವೆಗೆ ಕೇಂದ್ರ ಸರ್ಕಾರ ಶೇಕಡಾ 20 ಹಾಗೂ ರಾಜ್ಯ ಸರ್ಕಾರ ಶೇಕಡಾ 20 ವೆಚ್ಚವಭರಿಸುತ್ತವೆ. ಉಳಿದ ಶೇಕಡಾ 60ರಷ್ಟನ್ನು ಹೊರ ಸಾಲದ ಮೂಲಕ ಹೊಂದಾಣಿಕೆ ಮಾಡಲಾಗುತ್ತದೆ ಅದಕ್ಕೂ ಕೂಡ ಕೇಂದ್ರ ಸರ್ಕಾರ ಗ್ಯಾರಂಟಿ ಕೊಡಲು ಸಿದ್ದವಿದೆ' ಎಂದು ಹೇಳಿದರು.
ಮುಂಗಡಪತ್ರ ಕುರಿತಂತೆ ಉದ್ಯಮಿಗಳು ಹಾಗೂ ಆಯ್ದ ಗಣ್ಯರೊಂದಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ನಡೆಸಿದ ಸಂವಾದ ಸಭೆಯಲ್ಲಿ ಬೆಂಗಳೂರಿನ ಅನೇಕ ಉದ್ಯಮಿಗಳು ಪಾಲ್ಗೊಂಡು ಸಲಹೆ ನೀಡಿದರು

ಕೆಲಸ ಮಾಡಬೇಕಾಗಿರುವುದು ನನ್ನ ಜವಾಬ್ದಾರಿ
"ಮಾರ್ಚ್ 31ರಂದು ಲೋಕಸಭೆಯಲ್ಲಿ ಅನುಮೋದನೆಗೊಂಡ ಬಳಿಕ ಕೇಂದ್ರ ಹಣಕಾಸು ಸಚಿವಾಲಯ ಹಂತ ಹಂತವಾಗಿ ಹಣ ಬಿಡುಗಡೆ ಮಾಡುತ್ತದೆ. ಹಿಂದಿನ ಬಜೆಟ್ ಗಳಲ್ಲಿ ಇದರ ಬಗ್ಗೆ ಯಾವ ಭರವಸೆ ನೀಡಲಾಗಿತ್ತೋ ನನಗೆ ಗೊತ್ತಿಲ್ಲ. ಆದರೆ ನನ್ನ ಬಜೆಟ್ ನಲ್ಲಿ ಘೋಷಿತವಾಗಿರುವ ಯೋಜನೆ ಜಾರಿಯಾಗುವಂತೆ ಮಾಡಬೇಕಾಗಿರುವುದು ನನ್ನ ಜವಾಬ್ದಾರಿ' ಎಂದರು.

ಲಕ್ಷ ಕೋಟಿ ರೂ ಹಣ ಬಿಡುಗಡೆ ಮಾಡಲಾಗಿದೆ
"ಜಿಎಸ್ ಟಿ ಸೇರಿದಂತೆ ರಾಜ್ಯಗಳ ತೆರಿಗೆ ಪಾಲು ಬಾಕಿಯನ್ನು ಎರಡು ಕಂತುಗಳಲ್ಲಿ ವಿತರಿಸಲಾಗುತ್ತದೆ. 15 ನೇ ಹಣಕಾಸು ಆಯೋಗದಲ್ಲೂ ಕರ್ನಾಟಕಕ್ಕೆ ನೀಡಿರುವ ಅನುದಾನದ ಪ್ರಮಾಣ ನಿಶ್ಚಿತವಾಗಿ ಹೆಚ್ಚಳವಾಗಿದೆ. ನರೇಗಾ ಯೋಜನೆಯಡಿ ಯಾವುದೇ ಹಣ ಬಾಕಿ ಉಳಿಸಿಕೊಂಡಿಲ್ಲ. ಕರ್ನಾಟಕಕ್ಕೆ 2 ಲಕ್ಷ ಕೋಟಿ ರೂ ಹಣ ಬಿಡುಗಡೆ ಮಾಡಲಾಗಿದೆ' ಎಂದರು.

ಬ್ಯಾಂಕಿಂಗ್ ರೆಗ್ಯೂಲೇಷನ್ ಆಕ್ಟ್
"ಬ್ಯಾಂಕಿಂಗ್ ರೆಗ್ಯೂಲೇಷನ್ ಆಕ್ಟ್ ತಿದ್ದುಪಡಿಯಲ್ಲಿ ಸಹಕಾರ ಬ್ಯಾಂಕ್ ಗಳನ್ನೂ ತರಲಾಗುತ್ತಿದೆ. ಬ್ಯಾಂಕ್ ಎಂದು ಹೆಸರಿಟ್ಟುಕೊಂಡಿರುವ ಎಲ್ಲ ಹಣಕಾಸು ಸಂಸ್ಥೆಗಳೂ ಈ ಕಾಯ್ದೆಯ ವ್ಯಾಪ್ತಿಗೆ ಬರುತ್ತವೆ. ಇದರಿಂದಾಗಿ ಆ ಬ್ಯಾಂಕ್ ಗಳಲ್ಲಿ ಠೇವಣಿ ಇಟ್ಟಿರುವ ಗ್ರಾಹಕರು ಆತಂಕ ಪಡಬೇಕಾಗಿಲ್ಲ. ಅವರ ಠೇವಣಿ ಹಣದ ಜವಾಬ್ದಾರಿ ಆರ್ ಬಿಐ ನಿರ್ವಹಿಸುತ್ತದೆ. ಬಿಎಸ್ ಎನ್ ಎಲ್ ಖಾಸಗೀಕರಣದ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ' ಎಂದರು.

ಬೆಲೆ ಏರಿಕೆ ನಿಯಂತ್ರಣದಲ್ಲಿದೆ
"ದೇಶಾದ್ಯಂತ ಬಜೆಟ್ ಬಗ್ಗೆ ಸಂವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ. ಪ್ರಮುಖವಾಗಿ ಬಜೆಟ್ ನ ಧ್ಯೇಯೋದ್ದೇಶಗಳನ್ನು ಉದ್ಯಮಿಗಳು ಹಾಗೂ ಪ್ರಮುಖರಿಗೆ ತಲುಪಿಸುವುದು ಆಗಿದೆ. ಗ್ರಾಮೀಣ ಪ್ರದೇಶದಲ್ಲಿ ಹಣದುಬ್ಬರ ನಿಯಂತ್ರಣಕ್ಕೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಶೀಘ್ರ ಹಾಳಾಗುವ ಕೆಲವು ಕೃಷಿ ಉತ್ಪನ್ನಗಳನ್ನು ಹೊರತುಪಡಿಸಿದರೆ ಉಳಿದೆಲ್ಲ ಉತ್ಪನ್ನಗಳ ಬೆಲೆ ಏರಿಕೆ ನಿಯಂತ್ರಣದಲ್ಲಿದೆ' ಎಂದು ಹೇಳಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications