ಸರಳ ಸಮಾರಂಭದಲ್ಲಿ ನಿರ್ಮಲಾ ಸೀತಾರಾಮನ್ ಪುತ್ರಿ ಮದುವೆ, ರಾಜಕೀಯ ನಾಯಕರಿಗಿಲ್ಲ ಆಹ್ವಾನ!
ಬೆಂಗಳೂರು, ಜೂನ್. 09: ಸರಳ ಸಮಾರಂಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಪರಕಾಲ ವಂಗಮಾಯಿ ಬುಧವಾರ ಬೆಂಗಳೂರಿನ ತಮ್ಮ ಮನೆಯಲ್ಲಿ ವಿವಾಹವಾಗಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಮದುವೆಯಲ್ಲಿ ಆಪ್ತರು ಮತ್ತು ಸಂಬಂಧಿಕರು ಭಾಗವಹಿಸಿದ್ದರು. ಯಾವುದೇ ರಾಜಕೀಯ ನಾಯಕರನ್ನು ಆಹ್ವಾನಿಸಲಾಗಿಲ್ಲ.
ಗುಜರಾತ್ ಮೂಲದ ಪ್ರತೀಕ್ ಅವರೊಂದಿಗೆ ಪರಕಾಲ ವಂಗಮಾಯಿ ಅವರ ವಿವಾಹವು ಬ್ರಾಹ್ಮಣ ಸಂಪ್ರದಾಯದಂತೆ ನಡೆದಿದ್ದು, ಉಡುಪಿ ಅದಮಾರು ಮಠದ ಶ್ರೀಗಳು ವಧು-ವರರನ್ನು ಆಶೀರ್ವದಿಸಿದ್ದಾರೆ. ಅದಮಾರು ಮಠದ ವೈದಿಕ ಪದ್ಧತಿಯಲ್ಲಿ ವಿವಾಹ ನೆರವೇರಿದೆ ಎಂದು ವರದಿಯೊಂದು ತಿಳಿಸಿದೆ.

ವರದಿಗಳ ಪ್ರಕಾರ ಬೆಂಗಳೂರಿನ ನಲ್ಲಿ ನಡೆದ ವಿವಾಹ ಸಮಾರಂಭಕ್ಕೆ ಯಾವುದೇ ರಾಜಕೀಯ ಅತಿಥಿಗಳನ್ನು ಆಹ್ವಾನಿಸಲಾಗಿಲ್ಲ. ನಿಕಟ ಸಂಬಂಧಿಗಳನ್ನು ಮಾತ್ರ ಆಹ್ವಾನಿಸಲಾಗಿದೆ ಎಂದು ವರದಿ ತಿಳಿಸಿದೆ. ವಧು ಪರಕಾಲ ವಂಗಮಾಯಿ ಮದುವೆಯಲ್ಲಿ ಗುಲಾಬಿ ಬಣ್ಣದ ಸೀರೆಯನ್ನು ಧರಿಸಿದ್ದರು ವರನು ಬಿಳಿ ಪಂಚೆ ಮತ್ತು ಶಾಲು ಧರಿಸಿದ್ದರು. ವಧುವಿನ ತಾಯಿ ಸೀತಾರಾಮನ್ ಮೊಳಕಾಲ್ಮೂರು ಸೀರೆ ಉಟ್ಟಿದ್ದರು.
ಸೀತಾರಾಮನ್ ಅವರ ಮಗಳು ಪರಕಾಲ ವಂಗಮಾಯಿ ಮಿಂಟ್ ಲೌಂಜ್ನಲ್ಲಿ ಫಿಚರ್ಸ್ ವಿಭಾಗದ ಪುಸ್ತಕಗಳು ಮತ್ತು ಸಂಸ್ಕೃತಿ ವಿಭಾಗದಲ್ಲಿ ಕೆಲಸ ಮಾಡುತ್ತಾರೆ. ಅವರು ಇದಕ್ಕೂ ಮೊದಲು ದಿ ಹಿಂದೂ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ನಾರ್ತ್ ವೆಸ್ಟರ್ನ್ ಮೆಡಿಲ್ ಸ್ಕೂಲ್ ಆಫ್ ಜರ್ನಲಿಸಂನಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್ ವಿಭಾಗದಿಂದ ಸ್ನಾತಕೋತ್ತರ ಪದವಿಯನ್ನು ಹೊಂದಿದ್ದಾರೆ.

ಸೀತಾರಾಮನ್ ಅವರ ಪತಿ ಪರಕಾಲ ಪ್ರಭಾಕರ್ ಅವರು ರಾಜಕೀಯ ಅರ್ಥಶಾಸ್ತ್ರಜ್ಞರಾಗಿದ್ದು. ಅವರು ಸಂವಹನ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಜುಲೈ 2014 ಮತ್ತು ಜೂನ್ 2018 ರ ನಡುವೆ ಆಂಧ್ರ ಪ್ರದೇಶ ಸರ್ಕಾರದಲ್ಲಿ ಕ್ಯಾಬಿನೆಟ್ ದರ್ಜೆಯ ಸ್ಥಾನವನ್ನು ಹೊಂದಿದ್ದರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ










Click it and Unblock the Notifications