BWSSB: ತ್ಯಾಜ್ಯ ನೀರಿನ ಮರುಬಳಕೆ: 2 ದಿನ ರಾಷ್ಟ್ರೀಯ ಕಾರ್ಯಾಗಾರ, ಡಿಸಿಎಂ ಉದ್ಘಾಟನೆ
ಬೆಂಗಳೂರು, ಅಕ್ಟೋಬರ್ 24: ದೇಶದ ಪ್ರಮುಖ ನೀತಿ ನಿರೂಪಣಾ ಸಂಸ್ಥೆಯಾದ ನೀತಿ ಆಯೋಗವು, ಕರ್ನಾಟಕ ಸರ್ಕಾರ ಹಾಗೂ ಬೆಂಗಳೂರು ಜಲಮಂಡಳಿ ಸಹಯೋಗದಲ್ಲಿ 'ಶುದ್ಧೀಕರಿಸಿದ ತ್ಯಾಜ್ಯ ನೀರಿನ ಮರುಬಳಕೆ' ಕುರಿತು ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರ ಆಯೋಜಿಸಲಾಗಿದೆ. ಡಿಕೆ ಶಿವಕುಮಾರ್ ಅವರು ಈ ಕಾರ್ಯಾಗಾರಕ್ಕೆ ಚಾಲನೆ ನೀಡಲಿದ್ದಾರೆ.
ನವೆಂಬರ್ 6 ಮತ್ತು 7 ರಂದು ನಡೆಯಲಿರುವ ಎರಡು ದಿನಗಳ ಈ ಮಹತ್ವದ ಕಾರ್ಯಾಗಾರದಲ್ಲಿ ದೇಶದ ವಿವಿಧ ರಾಜ್ಯಗಳ ಉನ್ನತ ಅಧಿಕಾರಿಗಳು, ಜಲ ತಜ್ಞರು ಮತ್ತು ಕೈಗಾರಿಕಾ ಮುಖಂಡರು ಭಾಗವಹಿಸಲಿದ್ದು, ಶುದ್ಧೀಕರಿಸಿದ ನೀರನ್ನು ಗರಿಷ್ಠ ಪ್ರಮಾಣದಲ್ಲಿ ಮರುಬಳಕೆ ಮಾಡಲು ರಾಷ್ಟ್ರೀಯ ಯೋಜನೆಯನ್ನು ರೂಪಿಸುವ ನಿಟ್ಟಿನಲ್ಲಿ ಚರ್ಚೆ ನಡೆಯಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧ್ಯಕ್ಷ ಡಾ. ರಾಮ್ಪ್ರಸಾತ್ ಮನೋಹರ್ ಮಾಹಿತಿ ನೀಡಿದರು.

ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದ 'ಬ್ರಾಂಡ್ ಬೆಂಗಳೂರು' ಅಭಿಯಾನದ ಅಡಿಯಲ್ಲಿ ತ್ಯಾಜ್ಯ ನೀರಿನ ಸಮರ್ಪಕ ಬಳಕೆಗೆ ಒತ್ತು ನೀಡಲಾಗಿದೆ. ಈ ಮೂಲಕ ತ್ಯಾಜ್ಯ ನೀರಿನ ಬಳಕೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಏಷ್ಯಾ ಖಂಡಕ್ಕೆ ಬೆಂಗಳೂರು ಜಲಮಂಡಳಿ ಮಾದರಿಯಾಗಿದೆ. ಸರ್ಕ್ಯೂಲರ್ ವಾಟರ್ ಎಕಾಮನಿಯನ್ನು ಅಳವಡಿಸಿಕೊಂಡಿರುವ ಮಹಾನಗರಗಳ ಪೈಕಿ ಬೆಂಗಳೂರು ನಗರ ಮುಂಚೂಣಿಯಲ್ಲಿದೆ.
ಬೆಂಗಳೂರು ನಗರದಲ್ಲಿ ಶೇಕಡಾ 90 ರಷ್ಟು ಒಳಚರಂಡಿ ಶುದ್ದೀಕರಣ ಸಾಮರ್ಥ್ಯವನ್ನು ಹೊಂದಿದೆ.1,348 ಎಂ.ಎಲ್.ಡಿ ಯಷ್ಟು ನೀರನ್ನು ಶುದ್ದೀಕರಿಸಲಾಗುತ್ತಿದೆ. ಈ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಕೆರೆಗಳನ್ನು ತುಂಬಿಸಲಾಗುತ್ತಿದೆ. ಅಲ್ಲದೇ, ಪಾರ್ಕ್ ಮತ್ತು ಉದ್ಯಾನವಗಳ ನಿರ್ವಹಣೆ ಜೊತೆಯಲ್ಲಿಯೇ ಕೈಗಾರಿಕೆಗಳಿಗೂ ಪೂರೈಸಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಡಿ.ಕೆ. ಶಿವಕುಮಾರ್ ಅವರ ದೂರದೃಷ್ಟಿಯ ಕಾರಣದಿಂದ ಬೆಂಗಳೂರು ತ್ಯಾಜ್ಯ ನೀರನ್ನು ಆಸ್ತಿಯನ್ನಾಗಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಶುದ್ಧೀಕರಿಸಿದ ನೀರು ತ್ಯಾಜ್ಯವಲ್ಲ, ಇದು ನಗರದ ಸುಸ್ಥಿರತೆಯನ್ನು ಬಲಪಡಿಸುವ ಸಂಪನ್ಮೂಲ ಎಂದು ನಮ್ಮ ನಗರದ ಯಶಸ್ಸು ಸಾಬೀತುಪಡಿಸಿದೆ.
"ನೀತಿ ಆಯೋಗದ ಕಾರ್ಯಾಗಾರಕ್ಕೆ ಆತಿಥ್ಯ ವಹಿಸುವುದು ಕರ್ನಾಟಕಕ್ಕೆ ಹೆಮ್ಮೆಯ ವಿಚಾರ. ತ್ಯಾಜ್ಯ ನೀರು ಶುದ್ಧೀಕರಣದಲ್ಲಿ ನಮ್ಮ ಬೆಂಗಳೂರು ಪ್ರಗತಿಯನ್ನು ಪ್ರದರ್ಶಿಸಲು ಮತ್ತು ಅನುಭವಗಳನ್ನು ದೇಶದೊಂದಿಗೆ ಹಂಚಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ.ಬೆಂಗಳೂರು ನಗರ ತ್ಯಾಜ್ಯ ನೀರು ನಿರ್ವಹಣೆಯಲ್ಲಿ ಕೈಗೊಂಡಿರುವಂತಹ ಯೋಜನೆಗಳನ್ನು ಪ್ರದರ್ಶಿಸಲು ಉತ್ತಮ ವೇದಿಕೆ ಇದಾಗಿದೆ ಎಂದು ತಿಳಿಸಿದರು.
ಈ ವಿಧಾನದಿಂದ ಬೆಂಗಳೂರಿನಂತಹ ದೊಡ್ಡ ನಗರಗಳು ಕಾವೇರಿಯಂತಹ ಸಿಹಿನೀರಿನ ಮೂಲಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಿ, ಭವಿಷ್ಯದ ಬೆಳವಣಿಗೆಗೆ ನೆರವಾಗಲು ಸಾಧ್ಯವಾಗುತ್ತದೆ ಎಂದರು.
ಜಲ-ಸುಭದ್ರ ಭಾರತಕ್ಕಾಗಿ ಮಾರ್ಗಸೂಚಿ
ಮರುಬಳಕೆಯ ರಾಷ್ಟ್ರೀಯ ಯೋಜನೆಯನ್ನು ರೂಪಿಸಲು ಕಾರ್ಯಾಗಾರದಲ್ಲಿ ನೀತಿ ನಿಯಮಗಳು (Policy Frameworks)
ಹಣಕಾಸು ಮಾದರಿಗಳು (Financing Models), ನೂತನ ತಂತ್ರಜ್ಞಾನದ ಅಳವಡಿಕೆ (Technology Integration) ಈ ಮೂರು ಮುಖ್ಯ ವಿಷಯಗಳ ಮೇಲೆ ಗಮನ ಹರಿಸಲಾಗುತ್ತದೆ. ಶುದ್ಧೀಕರಿಸಿದ ತ್ಯಾಜ್ಯ ನೀರಿನ ಮರುಬಳಕೆಯನ್ನು ಭಾರತದಾದ್ಯಂತ ಕಡ್ಡಾಯಗೊಳಿಸಲು ಒಂದು ಸಮಗ್ರ ರಾಷ್ಟ್ರೀಯ ಯೋಜನೆಯನ್ನು ರೂಪಿಸುವುದು ಈ ಕಾರ್ಯಾಗಾರದ ಮುಖ್ಯ ಗುರಿಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications