ಅಮೂಲ್ಯಳ ಪಾಕ್ ಪರ ಘೋಷಣೆ; ಬೆಂಗಳೂರು ವಕೀಲರ ನಿರ್ಧಾರ ಏನು?
ಬೆಂಗಳೂರು ಫೆಬ್ರವರಿ 25: ಬೆಂಗಳೂರಿನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನಳ ಪರ ಕೋರ್ಟ್ನಲ್ಲಿ ವಾದಿಸದಿರಲು ಬೆಂಗಳೂರು ವಕೀಲರ ಸಂಘ (ದಿ ಅಡ್ವೋಕೇಟ್ ಅಸೋಸಿಯೇಷನ್ ಬೆಂಗಳೂರು) ನಿರ್ದಾರ ತೆಗೆದುಕೊಂಡಿದೆ.
ಈ ಕುರಿತು ಪ್ರಕಟಣೆ ನೀಡಿರುವ ಬೆಂಗಳೂರು ವಕೀಲರ ಸಂಘ, "ಕುಮಾರಿ ಅಮೂಲ್ಯ ಲಿಯೋನಾ ಎಂಬ ವಿದ್ಯಾರ್ಥಿನಿ ಪಾಕಿಸ್ತಾನ್ ಜಿಂದಾಬಾದ್ ಎಂದು ದೇಶ ವಿರೋಧಿ ಹೇಳಿಕೆ ನೀಡಿದ್ದು, ಸದ್ಯ ಆರೋಪಿಯಾಗಿದ್ದಾಳೆ. ಅಮೂಲ್ಯಳ ಪರವಾಗಿ ಯಾವ ವಕೀಲರು ಕೋರ್ಟ್ನಲ್ಲಿ ವಾದಿಸಬಾರದು ಎಂದು ಬೆಂಗಳೂರು ವಕೀಲರ ಸಂಘ ಮನವಿ ಮಾಡುತ್ತದೆ' ಎಂದಿದ್ದಾರೆ.
ಈ ಬಗ್ಗೆ ವಕೀಲರ ಸಂಘದ ಅಂತಿಮ ತೀರ್ಮಾನ ಬಂದಿಲ್ಲವಾದರೂ ವಕೀಲರು ವಾದಿಸಬಾರದು ಎಂದು ಮನವಿ ಮಾಡುತ್ತೇವೆ ಎಂದು ದಿ ಅಡ್ವೋಕೇಟ್ ಅಸೋಸಿಯೇಷನ್ ಬೆಂಗಳೂರು ಮನವಿ ಮಾಡಿದೆ.

ಮೊದಲು ಕೋರ್ಟ್ಗೆ ಕರೆ ತನ್ನಿ
ನ್ಯಾಯಾಂಗ ಬಂಧನದಲ್ಲಿರುವ ಅಮೂಲ್ಯ ಲಿಯೋನಾಳನ್ನು ಹೆಚ್ಚಿನ ವಿಚಾರಣೆ ನಡೆಸಲು ಪಶ್ಚಿಮ ವಿಭಾಗದ ಪೊಲೀಸರು ಇಂದು ಕೋರ್ಟ್ ಗೆ ಮನವಿ ಮಾಡಿದರು. ಪೊಲೀಸ್ ಕಸ್ಟಡಿಗೆ ನೀಡಿ ಎಂದು ಮನವಿ ಮಾಡಿದರು. ವಿಡಿಯೋ ಕಾನ್ಪರೆನ್ಸ ಮೂಲಕ ವಿಚಾರಣೆಗೆ ತೆಗೆದುಕೊಳ್ಳಿ ಎಂದು ಕೇಳಿಕೊಂಡಿದ್ದರು. ಆದರೆ, ಹೈಕೋರ್ಟ್ ಇದಕ್ಕೆ ನಿರಾಕರಿಸಿದ್ದು, ಅಮೂಲ್ಯ ಲಿಯೋನಾಳನ್ನು ಕೋರ್ಟ್ಗೆ ಹಾಜರುಪಡಿಸಿ ಮೊದಲು ಎಂದು ಹೇಳಿದೆ.

ಕೋರ್ಟ್ಗೆ ಕರೆ ತರಲು ಹಿಂದೇಟು
ಪರಪ್ಪನ ಅಗ್ರಹಾರದಲ್ಲಿರುವ ಅಮೂಲ್ಯ ಲಿಯೋನಾಳನ್ನು ಪಶ್ಚಿಮ ವಿಭಾಗದ ಪೊಲೀಸರು ಭದ್ರತೆ ದೃಷ್ಠಿಯಿಂದ ಕೋರ್ಟ್ಗೆ ಕರೆ ತರಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಅಮೂಲ್ಯಳನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವ ಸಂಬಂಧ ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆ ನಡೆಸಿ ಎಂದು ಪೊಲೀಸರು ಮನವಿ ಮಾಡಿದ್ದರು.

ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ
ಕಳೆದ ಗುರುವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಿಂದೂ ಮುಸ್ಲಿಂ ಸಿಖ್ ಇಸಾಯಿ ಫೌಂಡೇಶನ್ ಆಯೋಜಿಸಿದ್ದ ಸಿಎಎ ವಿರೋಧಿ ಸಮಾವೇಶದಲ್ಲಿ ಮೈಕ್ ತೆಗೆದುಕೊಂಡು ಭಾಷಣ ಮಾಡುವ ವೇಳೆ ಚಿಕ್ಕಮಗಳೂರು ಮೂಲದ ಜಯನಗರ ಖಾಸಗಿ ಕಾಲೇಜು ಒಂದರ ವಿದ್ಯಾರ್ಥಿನಿ ಅಮೂಲ್ಯ ಲಿಯೋನಾ, ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಳು.

ಸಂಘಟಕರ ವಿಚಾರಣೆ
ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾ ಅವರನ್ನು ಪಶ್ಚಿಮ ವಿಭಾಗ ಪೊಲೀಸರು ಮತ್ತೆ ವಿಚಾರಣೆ ನಡೆಸಿದ್ದಾರೆ. ಅಮೂಲ್ಯ ಎನ್ನುವ ಯುವತಿ ನೀವು ಆಯೋಜಿಸಿದ್ದ ಸಮಾವೇಶದಲ್ಲಿ ಏಕೆ ದೇಶ ವಿರೋಧಿ ಹೇಳಿಕೆ ನೀಡಿದ್ದು? ಅವಳಿಗೆ ಕಾರ್ಯಕ್ರಮಕ್ಕೆ ಆಹ್ವಾನವಿತ್ತಾ? ಇನ್ನೂ ಯಾವೆಲ್ಲ ಸಂಘಟನೆಗಳು ಸಮಾವೇಶಕ್ಕೆ ಕೈ ಜೋಡಿಸಿದ್ದವು ಎಂದು ಪೊಲೀಸರು ಇಮ್ರಾನ್ ಪಾಷಾ ಅವರನ್ನು ಪ್ರಶ್ನಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications