ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿದ್ದ 'No Cycling' ಫಲಕ ತೆರವು
ಬೆಂಗಳೂರು, ಜುಲೈ 19: ಸಾಕಷ್ಟು ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಬ್ರಿಗೇಡ್ ರಸ್ತೆಯಲ್ಲಿರುವ ನೋ ಸೈಕ್ಲಿಂಗ್ ಫಲಕವನ್ನು ತೆರವುಗೊಳಿಸಲಾಗಿದೆ.
ಬ್ರಿಗೆಡ್ ರಸ್ತೆಯಲ್ಲಿ ಸೈಕಲ್ ಸವಾರರು ಸಂಚರಿಸುವಂತಿಲ್ಲ ಎನ್ನುವ ಫಲಕದ ಕುರಿತು ನಿಹಾರ್ ಥಕ್ಕರ್ ಎಂಬುವವರು ಸಾಮಾಜಿಕ ಜಾಲತಾಣಗಲ್ಲಿ ಅಭಿಯಾನ ನಡೆಸಿದ್ದರು.
ಅವರ ಅಭಿಯಾನಕ್ಕೆ ಸಾಕಷ್ಟು ಮಂದಿಯಿಂದ ಒಳ್ಳೆಯ ಪ್ರತಿಕ್ರಿಯೆ ಲಭ್ಯವಾಗಿತ್ತು. ಕೂಡಲೇ ಇದಕ್ಕೆ ಸ್ಪಂದಿಸಿರುವ ಸಂಸದ ಪಿಸಿ ಮೋಹನ್ ಕೂಡಲೇ ಫಲಕವನ್ನು ತೆರವುಗೊಳಿಸುವಂತೆ ಸೂಚಿಸಿದ್ದರು.

ಆದರೆ ಬ್ರಿಗೇಡ್ ರಸ್ತೆಯಲ್ಲಿ ಈ ಫಲಕವನ್ನು ಯಾರು ಹಾಕಿದ್ದಾರೆ ಎನ್ನುವ ಕುರಿತು ಮಾಹಿತಿ ಇಲ್ಲ, ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಈ ರಸ್ತೆಯನ್ನು ಅಭಿವೃದ್ಧಿಗೊಳಿಸಲಾಗಿತ್ತು.
ಭಾನುವಾರ ಬೆಳಗ್ಗೆ 11.30ರ ವೇಳೆಗೆ ನಿಹಾರ್ ಅವರು ಈ ಬೋರ್ಡ್ ನೋಡಿದ್ದರು. ಟ್ವಿಟ್ಟರ್ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದರು. "ನನಗೆ ಆ ಬೋರ್ಡ್ ನೋಡಿ ಆಶ್ಚರ್ಯವಾಗಿತ್ತು, ಪರಿಸರ ಮಾಲಿನ್ಯ ನಿಯಂತ್ರಿಸುವ ದೃಷ್ಟಿಯಿಂದ ಹೆಚ್ಚೆಚ್ಚು ಸೈಕಲ್ಗಳನ್ನು ಬಳಕೆ ಮಾಡಿ ಎಂದು ಹೇಳುವ ಬದಲು ಸೈಕಲ್ಗೆ ನಿಷೇಧ ಹೇರಿದ್ದು ವಿಚಿತ್ರ ಎನಿಸಿತ್ತು'' ಎಂದು ಹೇಳಿದ್ದಾರೆ.
ಈ ಕುರಿತು ಸಂಸದ ಪಿಸಿ ಮೋಹನ್ ಅವರು ವಿಚಾರಿಸಿದಾಗ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಈ ಬೋರ್ಡ್ನ್ನು ಹಾಕಲಾಗಿಲ್ಲ ಯಾರು ಹಾಕಿದ್ದಾರೆ ಎನ್ನುವ ಕುರಿತು ಮಾಹಿತಿ ಇಲ್ಲ ಎಂದುಬಿಎಸ್ಸಿಎಲ್ ಎಂಡಿ ಪಿ ರಾಜೇಂದ್ರ ಚೋಳನ್ ಸ್ಪಷ್ಟಪಡಿಸಿದ್ದರು.
Recommended Video
ಬಳಿಕ ಟ್ವಿಟ್ಟರ್ ಮೂಲಕವೇ, ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸಂಸದರು ಸೂಚಿಸಿದ್ದರು. ಭಾನುವಾರ ಸಂಜೆಯಷ್ಟೊತ್ತಿಗೆ ನೋ ಸೈಕ್ಲಿಂಗ್ ಬೋರ್ಡ್ ತೆರವುಗೊಳಿಸಲಾಗಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications