Breaking: ಐಟಿ ಕಂಪೆನಿಗಳು ರಾಜಕಾಲುವೆ ಒತ್ತುವರಿ ಮಾಡಿದ್ದರೂ ತೆರವು: ಸಿಎಂ
ಬೆಂಗಳೂರು, ಸೆಪ್ಟೆಂಬರ್ 12: ಬೆಂಗಳೂರಿನಲ್ಲಿ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಯಾವುದೇ ಭೇದ ಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನಲ್ಲಿ ರಾಜಕಾಲುವೆ ಮೇಲೆ ಕಟ್ಟಡ, ಮನೆ ಕಟ್ಟಿ ಕಾಲುವೆಗೆ ನೀರು ಹರಿಯಲು ಅಡ್ಡಿ ಪಡಿಸಲಾಗಿದೆ. ಕೆಲವರು ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಮುಚ್ಚಿದ್ದಾರೆ. ಹೀಗಾಗಿ ಮಳೆ ನೀರು ಚರಂಡಿಗೆ ಹರಿಯಲು ಸಾಧ್ಯವಾಗುತ್ತಿಲ್ಲ. ಅಂತಹ ಒತ್ತುವರಿ ಗುರುತಿಸಿ ತೆರವುಗೊಳಿಸಲು ಸೂಚನೆ ನೀಡಲಾಗಿದೆ ಎಂದರು.
ಪ್ರವಾಹ ಬಂದಾಗ ಐಟಿ ಬಿಟಿ ಕ್ಷೇತ್ರ ಸೇರಿದಂತೆ ವಿವಿಧ ವರ್ಗದ ಎಲ್ಲರಿಗೂ ತೊಂದರೆಯಾಗಿದೆ. ಜನಸಾಮಾನ್ಯರಿಗೆ, ತಗ್ಗು ಪ್ರದೇಶದ ಮನೆಗಳಿಗೆ ತೊಂದರೆಯಾಗಿದೆ. ನಗರದ ಜನರ ಹಿತದೃಷ್ಟಿಯಿಂದ ಒತ್ತುವರಿಯನ್ನು ತೆರೆವುಗೊಳಿಸುವ ಕಾರ್ಯ ಪೂರ್ಣಗೊಳಿಸಲಾಗುವುದು. ಈ ತೆರವು ಕಾರ್ಯಾಚರಣೆಯಲ್ಲಿ ಯಾವುದೇ ಭೇದ ಬಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಒಂದು ವೇಳೆ ಐಟಿ ಕಂಪೆನಿಗಳು ರಾಜಕಾಲುವೆ ಒತ್ತುವರಿ ಮಾಡಕೊಂಡಿರುವ ಬಗ್ಗೆ ಕಂಡು ಬಂದರೆ ಅವುಗಳನ್ನೂ ಸಹ ತೆರವುಗೊಳಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಒತ್ತುವರಿ ತೆರವು ಕುರಿತು ಹಲವು ಪ್ರಕರಣಗಳಲ್ಲಿ ನ್ಯಾಯಾಲಯ ಮೂಲಕ ನಿರ್ದೇಶನ ಪಡೆಯಲಾಗಿದೆ. ನ್ಯಾಯಾಲಯದಲ್ಲಿ ಪ್ರವಾಹ ಪ್ರಕರಣಗಳ ಬಗ್ಗೆ ಮಾಹಿತಿ ಒದಗಿಸಲಾಗಿದೆ. ಹಲವು ನಿರ್ದೇಶನ ಮೇರೆಗೆ ಈ ಬಾರಿ ದೊಡ್ಡ ಪ್ರಮಾಣದಲ್ಲಿ ಅತಿಕ್ರಮಣ ತೆರೆವುಗೊಳಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

ಪಿಎಸ್ಐ ಅಕ್ರಮ ನೇಮಕಾತಿ ಆಡಿಯೋ ಬಗ್ಗೆ ಮಾಹಿತಿ ಇಲ್ಲ
ಪಿಎಸ್ಐ ಅಕ್ರಮ ನೇಮಕಾತಿ ಕುರಿತು ಬಿಜೆಪಿ ಶಾಸಕರು ಮಾತನಾಡಿರುವ ವೀಡಿಯೊ ಬಿಡುಗಡೆ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಆಡಿಯೋ, ವೀಡಿಯೋದ ಬಗ್ಗೆ ನನಗೆ ಮಾಹಿತಿ ಇಲ್ಲ. ಪ್ರಕರಣದ ಕುರಿತು ಪರಿಶೀಲಿಸಲಾಗುವುದು. ಹಾಗೇನಾದರೂ ತಪ್ಪು ಕಂಡುಬಂದಲ್ಲಿ ಸರ್ಕಾರ ತನಿಖೆಗೆ ಆದೇಶಿಸುತ್ತದೆ ಎಂದು ಹೇಳಿದರು.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಆಗಿ ಬದಲಾದ ಪೆರಿಫೆರಲ್ ರಿಂಗ್ ರೋಡ್: 2029ರ ವೇಳೆಗೆ ನಗರದ ಟ್ರಾಫಿಕ್ಗೆ ಸಿಗಲಿದೆ ಮುಕ್ತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications