ಆರಂಭವಾದ ಆರೇ ದಿನದಲ್ಲಿ ಭಕ್ತರಿಗೆ ನಿರ್ಬಂಧ ಹೇರಿದ ದೇವಾಲಯ
ಬೆಂಗಳೂರು, ಜುಲೈ 10: ಕಳೆದ ಸೋಮವಾರ (ಜುಲೈ 5) ಲಾಕ್ ಡೌನ್ ಬಹುತೇಕ ಸಡಿಲಗೊಳಿಸಿದ ನಂತರ, ಮನೆಯಲ್ಲಿ ಬಂಧಿತರಂತಾಗಿದ್ದ ಜನರು, ದೇವಾಲಯ, ಪ್ರವಾಸಿ ತಾಣಗಳಿಗೆ ದಾಂಗುಡಿ ಇಡುತ್ತಿದ್ದಾರೆ.
ಜನರು ಸಾಮಾಜಿಕ ಅಂತರ, ಕೋವಿಡ್ ನಿಯಮಗಳನ್ನು ಪಾಲಿಸದೇ ಇರುವುದು ಸರಕಾರಕ್ಕೆ ತಲೆನೋವಾಗಿ ಪರಿಣಮಿಸುತ್ತಿದೆ. ಜನರು ಸಹಕರಿಸದಿದ್ದಲ್ಲಿ ಮತ್ತೆ ಲಾಕ್ ಡೌನ್ ಹೇರಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಎಚ್ಚರಿಕೆಯನ್ನು ನೀಡಿದ್ದಾಗಿದೆ.
ಜುಲೈ ಐದರಿಂದ ದೇವಾಲಯ ತೆರೆಯಲು ಸರಕಾರ ಅವಕಾಶ ನೀಡಿದೆ. ನಾಡಿನ ಪ್ರಮುಖ ದೇವಾಲಯಗಳಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದೆ. ಅದೇ ರೀತಿ, ನಗರದ ಕನಕಪುರ ರಸ್ತೆಯಲ್ಲಿರುವ, ಐತಿಹಾಸಿಕ ಬನಶಂಕರಿ ದೇವಾಲಯ.

ಆಷಾಢ ಮಾಸದ ಮೊದಲ ಶುಕ್ರವಾರದ (ಮಣ್ಣೆತ್ತಿನ ಅಮಾವಾಸ್ಯೆ) ದಿನ ಬನಶಂಕರಿ ದೇವಾಲಯಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಹಾಗಾಗಿ, ದೇವಾಲಯದ ಆಡಳಿತ ಮಂಡಳಿಗೂ ಕೋವಿಡ್ ನಿಯಮಗಳನ್ನು ಪಾಲಿಸಲು ಸಾಧ್ಯವಾಗಲಿಲ್ಲ. ದೇವಾಲಯದ ಒಳಗೆ ಮತ್ತು ಹೊರಗೆ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು.
ಇದರಿಂದ ಎಚ್ಚೆತ್ತುಕೊಂಡ ಬೆಂಗಳೂರು ಜಿಲ್ಲಾಡಳಿತ ಮತ್ತೆ ಭಕ್ತರ ಪ್ರವೇಶಕ್ಕೆ ವಾರದಲ್ಲಿ ಮೂರು ದಿನ ನಿರ್ಬಂಧ ಹೇರಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿಗಳು ಭಕ್ತರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
ಆಷಾಢ ಮಾಸದ ಪ್ರತೀ ಭಾನುವಾರ, ಮಂಗಳವಾರ, ಶುಕ್ರವಾರ, ಅಮಾವಾಸ್ಯೆ ಮತ್ತು ಹುಣ್ಣಿಮೆಯ ದಿನದಂದು ಭಕ್ತರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಉಳಿದ ದಿನಗಳಲ್ಲಿ ಬೆಳಗ್ಗೆ ಏಳರಿಂದ ಮಧ್ಯಾಹ್ನ ಹನ್ನೆರಡರವರೆಗೆ ಮತ್ತು ಸಂಜೆ ನಾಲ್ಕರಿಂದ ರಾತ್ರಿ 7.30ರ ವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications