ಕೆಎಸ್ಆರ್ಟಿಸಿ, ಖಾಸಗಿ ಬಸ್ ಬೆಂಗಳೂರು ಪ್ರವೇಶಿಸುವಂತಿಲ್ಲ
ಬೆಂಗಳೂರು, ಜನವರಿ 28 : ಬೆಂಗಳೂರು ನಗರದ ಒಳಗೆ ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ಸುಗಳ ಪ್ರವೇಶವನ್ನು ನಿರ್ಬಂಧಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಫೆ.1 ರಿಂದ 10ರ ತನಕ ಈ ಆದೇಶ ಜಾರಿಯಲ್ಲಿರುತ್ತದೆ.
ಅರಮನೆ ಮೈದಾನದಲ್ಲಿ ಫೆಬ್ರವರಿ 3 ರಿಂದ 5ರವರೆಗೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, ಸಮಾವೇಶದ ವೇಳೆ ನಗರದಲ್ಲಿ ಸಂಚಾರ ದಟ್ಟಣೆ ಮತ್ತು ವಾಯು ಮಾಲಿನ್ಯ ನಿಯಂತ್ರಿಸಲು ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ಸುಗಳ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. [2016ರ ಫೆಬ್ರವರಿಯಲ್ಲಿ ಜಿಮ್]

ಸಾರಿಗೆ ಇಲಾಖೆ ಆಯುಕ್ತ ರಾಮೇಗೌಡ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಬಸ್ಸುಗಳು ರಾತ್ರಿ 11 ಗಂಟೆಯಿಂದ ಮುಂಜಾನೆ 4 ಗಂಟೆಯ ತನಕ ಮಾತ್ರ ನಗರವನ್ನು ಪ್ರವೇಶಿಸಬಹುದಾಗಿದೆ. ಹೊರ ರಾಜ್ಯಗಳಿಂದ ಆಗಮಿಸುವ ಬಸ್ಸುಗಳಿಗೂ ಈ ನಿಯಮ ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ. [ಕರ್ನಾಟಕದಲ್ಲಿ ಯಾವ ಸಂಸ್ಥೆ ಎಲ್ಲೆಲ್ಲಿ, ಎಷ್ಟು ಹೂಡಿಕೆ?]
ಬಸ್ ಮಾಲೀಕರ ಅಸಮಾಧಾನ : ಬುಧವಾರ ಇನ್ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಸಾರಿಗೆ ಇಲಾಖೆ ಹಾಗೂ ಬೆಂಗಳೂರು ಸಂಚಾರ ವಿಭಾಗದ ಪೊಲೀಸರ ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ ಖಾಸಗಿ ಬಸ್ ಮಾಲೀಕರು ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. [ಕೆಎಸ್ಆರ್ ಟಿಸಿ ನೇಮಕಾತಿ, ಅರ್ಜಿ ಸಲ್ಲಿಸಲು ಫೆ.4 ಕೊನೆ ದಿನ]
ಸಾರಿಗೆ ಇಲಾಖೆಯ ಆದೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬಸ್ ಮಾಲೀಕರು, ಪ್ರಾಯೋಗಿಕವಾಗಿ ಇಂತಹ ಆದೇಶ ಜಾರಿಗೆ ತಂದು, ನಗರದೊಳಗೆ ಶಾಶ್ವತವಾಗಿ ಖಾಸಗಿ ಬಸ್ಸುಗಳು ಬರದಂತೆ ಮಾಡುವುದು ಸಾರಿಗೆ ಇಲಾಖೆಯ ಹುನ್ನಾರವಾಗಿದೆ ಎಂದು ದೂರಿದರು.
ಬಸವೇಶ್ವರ ಬಸ್ ನಿಲ್ದಾಣಕ್ಕೆ ಸ್ಥಳಾಂತರ : ಸಾರಿಗೆ ಇಲಾಖೆ ಸರ್ಕಾರಿ ಬಸ್ಸುಗಳು ನಗರಕ್ಕೆ ಪ್ರವೇಶಿಸಬಾರದು ಎಂದು ಆದೇಶ ಹೊರಡಿಸಿರುವುದರಿಂದ, ಮೆಜೆಸ್ಟಿಕ್ನಿಂದ ಸಂಚರಿಸುತ್ತಿದ್ದ ಎಲ್ಲಾ ಬಸ್ಸುಗಳನ್ನು ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣಕ್ಕೆ ಸ್ಥಳಾಂತರ ಮಾಡಲಾಗುತ್ತದೆ ಎಂದು ಕೆಎಸ್ಆರ್ಟಿಸಿಯ ಅಧಿಕಾರಿಗಳು ಹೇಳಿದ್ದಾರೆ.












Click it and Unblock the Notifications