ಮಾಲ್ಗಳಲ್ಲಿದ್ದ ಹಣ್ಣು-ಹಂಪಲು, ತರಕಾರಿ ಖಾಲಿ, ನಾಳೆ ಬಗ್ಗೆ ಗೊತ್ತಿಲ್ಲ!
ಬೆಂಗಳೂರು, ಮಾರ್ಚ್ 23: ಕೊರೊನಾ ವೈರಸ್ ಜನರ ದೈನಂದಿನ ಬದುಕನ್ನು ನುಂಗಿ ಹಾಕಿದೆ. ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ದಿನಗೂಲಿ ಕಾರ್ಮಿಕರ ಪರಿಸ್ಥಿತಿ ಕೇಳುವುದೇ ಬೇಡ. ಬೀದಿ ವ್ಯಾಪಾರಿಗಳು, ತಳ್ಳುವ ಗಾಡಿಯಲ್ಲಿ ತರಕಾರಿ, ಹಣ್ಣ ಹಂಪಲು ಮಾರುತ್ತಿದ್ದವರು ಮನೆಯಲ್ಲೆ ಕುಳಿತು ಯೋಚನೆ ಮಾಡುವಂತಾಗಿದೆ. ಈ ಕಡೆ ಮಾಲ್ಗಳನ್ನು ನಂಬಿ ಕೂತಿದ್ದ ಜನರಿಗೂ ಈಗ ಆತಂಕ ಕಾಡುತ್ತಿದೆ.
ಅಗತ್ಯ ವಸ್ತುಗಳನ್ನು ಪೂರೈಸುವ ಉದ್ದೇಶದಿಂದ ಕೆಲವು ಮಾಲ್ಗಳು ತೆರೆದಿರುವುದು ಬಿಟ್ಟರೆ ಉಳಿದ ಎಲ್ಲ ಮಾಲ್ಗಳು ಬಹುತೇಕ ಮುಚ್ಚಿದೆ. ಅದರಲ್ಲೂ ಡಿ-ಮಾರ್ಟ್, ಮೋರ್ ಅಂತಹ ಮಾಲ್ಗಳ ಮೇಲೆ ಹೆಚ್ಚಿನ ಜನರು ಅವಲಂಬಿತರಾಗಿದ್ದರು. ಇದೀಗ, ಅಂತವರಿಗೆ ಆತಂಕ ಮೂಡಿದೆ.
ಯಾಕಂದ್ರೆ, ಬಹುತೇಕ ಮಾಲ್ಗಳಲ್ಲಿದ್ದ ತರಕಾರಿ, ಹಣ್ಣು-ಹಂಪಲು ಖಾಲಿಯಾಗಿದೆ, ಇಷ್ಟು ದಿನ ಸಂಗ್ರಹಿಸಿದ್ದ ಎಲ್ಲವೂ ಬಹುತೇಕ ಕೊನೆಯ ಹಂತದಲ್ಲಿದೆ. ಬಹುಶಃ ಮುಂದಿನ ಸರಬರಾಜು ಆಗುವವರೆಗೂ ಮಾಲ್ಗಳಲ್ಲಿ ತರಕಾರಿ, ಹಣ್ಣು-ಹಂಪಲು ಸಿಗುವುದಿಲ್ಲವಾ ಎಂಬ ಭಯ ಹುಟ್ಟಿಕೊಂಡಿದೆ.

ಈ ಬಗ್ಗೆ ಹೊಸಕೆರೆಹಳ್ಳಿಯ ಮಾಲ್ನಲ್ಲಿ ಸಿಬ್ಬಂದಿಯೊಬ್ಬರನ್ನು ವಿಚಾರಿಸಿದಕ್ಕೆ, 'ಸದ್ಯಕ್ಕೆ ಇರುವುದನ್ನು ಮಾರಾಟ ಮಾಡುತ್ತಿದ್ದೇವೆ, ನಾಳೆ ಬಗ್ಗೆ ಗೊತ್ತಿಲ್ಲ, ಬಹುಶಃ ಸರಬರಾಜು ಆಗಬಹುದು, ನೋಡ್ಬೇಕು' ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಸರಬರಾಜು ಆದರೆ ಓಕೆ. ಒಂದು ವೇಳೆ ತರಕಾರಿ, ಹಣ್ಣು ಹಂಪಲುಗಳ ಸರಬರಾಜು ಆಗಿಲ್ಲ ಅಂದ್ರೆ ಪರಿಸ್ಥಿತಿ ಏನಾಗಲಿದೆ ಎಂಬ ಸಣ್ಣದೊಂದು ಆತಂಕ ಶುರುವಾಗಿದೆ. ಇದು ಕೇವಲ ತರಕಾರಿ ಮತ್ತು ಹಣ್ಣು ಹಂಪಲುಗಳ ಕಥೆ ಅಷ್ಟೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications