ಮಾಲ್ಗಳಲ್ಲಿದ್ದ ಹಣ್ಣು-ಹಂಪಲು, ತರಕಾರಿ ಖಾಲಿ, ನಾಳೆ ಬಗ್ಗೆ ಗೊತ್ತಿಲ್ಲ!
ಬೆಂಗಳೂರು, ಮಾರ್ಚ್ 23: ಕೊರೊನಾ ವೈರಸ್ ಜನರ ದೈನಂದಿನ ಬದುಕನ್ನು ನುಂಗಿ ಹಾಕಿದೆ. ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ದಿನಗೂಲಿ ಕಾರ್ಮಿಕರ ಪರಿಸ್ಥಿತಿ ಕೇಳುವುದೇ ಬೇಡ. ಬೀದಿ ವ್ಯಾಪಾರಿಗಳು, ತಳ್ಳುವ ಗಾಡಿಯಲ್ಲಿ ತರಕಾರಿ, ಹಣ್ಣ ಹಂಪಲು ಮಾರುತ್ತಿದ್ದವರು ಮನೆಯಲ್ಲೆ ಕುಳಿತು ಯೋಚನೆ ಮಾಡುವಂತಾಗಿದೆ. ಈ ಕಡೆ ಮಾಲ್ಗಳನ್ನು ನಂಬಿ ಕೂತಿದ್ದ ಜನರಿಗೂ ಈಗ ಆತಂಕ ಕಾಡುತ್ತಿದೆ.
ಅಗತ್ಯ ವಸ್ತುಗಳನ್ನು ಪೂರೈಸುವ ಉದ್ದೇಶದಿಂದ ಕೆಲವು ಮಾಲ್ಗಳು ತೆರೆದಿರುವುದು ಬಿಟ್ಟರೆ ಉಳಿದ ಎಲ್ಲ ಮಾಲ್ಗಳು ಬಹುತೇಕ ಮುಚ್ಚಿದೆ. ಅದರಲ್ಲೂ ಡಿ-ಮಾರ್ಟ್, ಮೋರ್ ಅಂತಹ ಮಾಲ್ಗಳ ಮೇಲೆ ಹೆಚ್ಚಿನ ಜನರು ಅವಲಂಬಿತರಾಗಿದ್ದರು. ಇದೀಗ, ಅಂತವರಿಗೆ ಆತಂಕ ಮೂಡಿದೆ.
ಯಾಕಂದ್ರೆ, ಬಹುತೇಕ ಮಾಲ್ಗಳಲ್ಲಿದ್ದ ತರಕಾರಿ, ಹಣ್ಣು-ಹಂಪಲು ಖಾಲಿಯಾಗಿದೆ, ಇಷ್ಟು ದಿನ ಸಂಗ್ರಹಿಸಿದ್ದ ಎಲ್ಲವೂ ಬಹುತೇಕ ಕೊನೆಯ ಹಂತದಲ್ಲಿದೆ. ಬಹುಶಃ ಮುಂದಿನ ಸರಬರಾಜು ಆಗುವವರೆಗೂ ಮಾಲ್ಗಳಲ್ಲಿ ತರಕಾರಿ, ಹಣ್ಣು-ಹಂಪಲು ಸಿಗುವುದಿಲ್ಲವಾ ಎಂಬ ಭಯ ಹುಟ್ಟಿಕೊಂಡಿದೆ.

ಈ ಬಗ್ಗೆ ಹೊಸಕೆರೆಹಳ್ಳಿಯ ಮಾಲ್ನಲ್ಲಿ ಸಿಬ್ಬಂದಿಯೊಬ್ಬರನ್ನು ವಿಚಾರಿಸಿದಕ್ಕೆ, 'ಸದ್ಯಕ್ಕೆ ಇರುವುದನ್ನು ಮಾರಾಟ ಮಾಡುತ್ತಿದ್ದೇವೆ, ನಾಳೆ ಬಗ್ಗೆ ಗೊತ್ತಿಲ್ಲ, ಬಹುಶಃ ಸರಬರಾಜು ಆಗಬಹುದು, ನೋಡ್ಬೇಕು' ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಸರಬರಾಜು ಆದರೆ ಓಕೆ. ಒಂದು ವೇಳೆ ತರಕಾರಿ, ಹಣ್ಣು ಹಂಪಲುಗಳ ಸರಬರಾಜು ಆಗಿಲ್ಲ ಅಂದ್ರೆ ಪರಿಸ್ಥಿತಿ ಏನಾಗಲಿದೆ ಎಂಬ ಸಣ್ಣದೊಂದು ಆತಂಕ ಶುರುವಾಗಿದೆ. ಇದು ಕೇವಲ ತರಕಾರಿ ಮತ್ತು ಹಣ್ಣು ಹಂಪಲುಗಳ ಕಥೆ ಅಷ್ಟೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications