ಹೈಕಮಾಂಡ್ ಲೆಕ್ಕಕ್ಕಿಲ್ಲ, ಸಿದ್ರಾಮಯ್ಯನೇ ಎಲ್ಲ: ಕಾಂಗ್ರೆಸ್ ಮುಖಂಡ ವಾಗ್ದಾಳಿ
Recommended Video

ಕೆಲವು ದಿನಗಳ ಹಿಂದೆ ರೆಹಮಾನ್ ಖಾನ್, ಜಾಫರ್ ಷರೀಫ್ ಆದಿಯಾಗಿ ಹಿರಿಯ ಮುಸ್ಲಿಂ ಕಾಂಗ್ರೆಸ್ ಮುಖಂಡರು ಒಂದೆಡೆ ಸಭೆ ಸೇರಿ ತಮ್ಮ ಸಮುದಾಯದವರಿಗೆ ಮುಂಬರುವ ಕರ್ನಾಟಕ ಅಸೆಂಬ್ಲಿ ಚುನಾವಣೆಯಲ್ಲಿ ಸೂಕ್ತ ಸ್ಥಾನಮಾನ ಸಿಗುವಂತಾಗಬೇಕು, ಅದಕ್ಕಾಗಿ ಹೈಕಮಾಂಡ್ ಭೇಟಿ ಮಾಡುವ ನಿರ್ಧಾರಕ್ಕೆ ಬಂದಿದ್ದರು.
ಇದಾದ ನಂತರ ಅದೇನು ಬೆಳವಣಿಗೆ ನಡೆಯಿತೋ, ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಷರೀಫ್ ಅವರು ಸಿಎಂ ವಿರುದ್ದ ಅಸಮಾಧಾನ ಹೊರಹಾಕುವುದು ಹೊಸದಲ್ಲದಿದ್ದರೂ, ಅವರು ನೀಡಿದ ಹೇಳಿಕೆ ಹೈಕಮಾಂಡ್ ಮಾತು ಕರ್ನಾಟಕದಲ್ಲಿ ನಡೆಯುವುದಿಲ್ಲ ಎನ್ನುವ ಅರ್ಥ ಬರುವಂತಿದೆ.
ಜಾಫರ್ ಷರೀಫ್ ಅವರ ಮೊಮ್ಮಗ ಸಿ ಕೆ ಅಬ್ದುಲ್ ರೆಹಮಾನ್ ಷರೀಫ್ ಬೆಂಗಳೂರು ನಗರ ವ್ಯಾಪ್ತಿಯ ಹೆಬ್ಬಾಳ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ಆದರೆ, ಷರೀಫ್ ಮೊಮ್ಮಗನಿಗೆ ಟಿಕೆಟ್ ಸಿಗುವುದು ಡೌಟಿರುವ ಹಿನ್ನಲೆಯಲ್ಲಿ ಷರೀಫ್ ಸಿಎಂ ವಿರುದ್ದ ಕಿಡಿಕಾರಿರುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಎರಡು ಕಾಂಗ್ರೆಸ್ ಇದೆ ಒಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಇನ್ನೊಂದು ಸಿದ್ದರಾಮಯ್ಯ ಕಾಂಗ್ರೆಸ್. ಕರ್ನಾಟಕದಲ್ಲಿ ಏನಿದ್ದರೂ ಸಿದ್ದರಾಮಯ್ಯ ಕಾಂಗ್ರೆಸ್ಸಿನದ್ದೇ ದರ್ಬಾರ್, ಇಲ್ಲಿ ಹೈಕಮಾಂಡ್ ಮಾತಿಗೆ ಯಾವುದೇ ಬೆಲೆಯಿಲ್ಲ, ಲೆಕ್ಕವೂ ಇಲ್ಲ ಎಂದು ಜಾಫರ್ ಷರೀಫ್ ಹೇಳಿದ್ದಾರೆ.
ನಮ್ಮ ಸಮುದಾಯದವರಿಗೂ ಟಿಕೆಟ್ ನೀಡಬೇಕೆಂದು ಬೇಡಿಕೆ ಇಡುತ್ತಲೇ ಬಂದಿದ್ದೇವೆ, ಆದರೆ ಅದಕ್ಕೆ ಯಾರೂ ಸೊಪ್ಪು ಹಾಕುತ್ತಿಲ್ಲ. ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್, ಕೆ ಆರ್ ಪುರಂನಲ್ಲಿ ಭೈರತಿ ಬಸವರಾಜ್ ಮತ್ತು ಹೆಬ್ಬಾಳದಲ್ಲಿ ಭೈರತಿ ಸುರೇಶ್. ಇವರೆಲ್ಲರೂ ಮುಖ್ಯಮಂತ್ರಿಗಳ ಸಮುದಾಯದವರು (ಕುರುಬ ಜನಾಂಗ) ಎಂದು ಜಾಫರ್ ಷರೀಫ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕಳೆದ ಡಿಸೆಂಬರ್ ತಿಂಗಳಲ್ಲಿ ಜಾಫರ್ ಷರೀಫ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮೊಮ್ಮಗನಿಗೆ ಹೆಬ್ಬಾಳ ಕ್ಷೇತ್ರದ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದರು.
2013ರ ಚುನಾವಣೆಯಲ್ಲಿ ಬಿಜೆಪಿಯ ಕಟ್ಟಾ ಸುಬ್ರಮಣ್ಯ ನಾಯ್ಡು ಆಪ್ತರಾದ ಆರ್.ಜಗದೀಶ್ ಕುಮಾರ್ ಗೆಲುವು ಸಾಧಿಸಿದ್ದರು. ಅವರ ಅಕಾಲಿಕ ಮರಣದಿಂದಾಗಿ ಉಪ ಚುನಾವಣೆ ನಡೆದಿತ್ತು. ಆಗ, ಬಿಜೆಪಿಯ ವೈ.ನಾರಾಯಣ ಸ್ವಾಮಿ ಜಯಗಳಿಸಿದ್ದರು. ಈ ಎರಡೂ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅಬ್ದುಲ್ ರೆಹಮಾನ್ ಷರೀಫ್ ಸೋಲು ಅನುಭವಿಸಿದ್ದರು.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications