PWD ಇಂಜಿನಿಯರ್ ಪರೀಕ್ಷೆಯಲ್ಲಿ ಅಕ್ರಮ ನಡೆದಿಲ್ಲ; ಸಚಿವ ಸಿ.ಸಿ. ಪಾಟೀಲ್
ಬೆಂಗಳೂರು, ಏಪ್ರಿಲ್ 25: ಲೋಕೋಪಯೋಗಿ ಇಲಾಖೆಯಲ್ಲಿ ಇತ್ತೀಚೆಗೆ ನಡೆದಿದ್ದ ಜೂನಿಯರ್ ಇಂಜಿನಿಯರ್ (ಜೆಇ) ಆಯ್ಕೆ ಪರೀಕ್ಷೆಯಲ್ಲಿ ಆಕ್ರಮ ನಡೆದಿರುವ ಆರೋಪ ವಿಚಾರವಾಗಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿ.ಸಿ. ಪಾಟೀಲ್, ನನ್ನ ಇಲಾಖೆಯ ಜೆಇ ಪರೀಕ್ಷೆ ಅಚ್ಚುಕಟ್ಟಾಗಿ ನಡೆದಿದೆ. ಯಾವುದೇ ಆಕ್ರಮದ ವಾಸನೆ ಇಲ್ಲ. 900 ಹುದ್ದೆಗಳ ನೇಮಕಾತಿ ವಿಚಾರ ಕೋರ್ಟ್ನಲ್ಲಿ ಇತ್ತು. ಬಳಿಕ ಕೆಪಿಎಸ್ಸಿ ಪರೀಕ್ಷೆ ಮೂಲಕ ನೇಮಕಾತಿಗೆ ತೀರ್ಮಾನ ಮಾಡಲಾಯಿತು ಎಂದರು.
ಸೆಂಟ್ ಜಾನ್ಸ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಅಕ್ರಮ ನಡೆದಿದೆ ಎಂದು ಆರೋಪ ಕೇಳಿಬಂದಿದೆ. ಸೆಂಟ್ ಡಾನ್ಸ್ ಕಾಲೇಜು ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದಕ್ಕೂ PWD ಇಲಾಖೆಗೂ ಯಾವುದೇ ಸಂಬಂಧ ಇಲ್ಲ. ಇದರಲ್ಲಿ ಇಲಾಖೆಯ ಯಾವುದೇ ಪಾತ್ರ ಇಲ್ಲವೆಂದು ಸಿ.ಸಿ. ಪಾಟೀಲ್ ಬೆಂಗಳೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ.

ಲೋಕೋಪಯೋಗಿ ಇಲಾಖೆ ಪರೀಕ್ಷೆಯಲ್ಲಿ ಅಕ್ರಮ ವಿಚಾರವಾಗಿ ಮಾತು ಮುಂದುವರೆಸಿದ ಸಚಿವ ಸಿ.ಸಿ. ಪಾಟೀಲ್, ಮಾಧ್ಯಮಗಳು ತಪ್ಪು ಮಾಹಿತಿ ಇಟ್ಟುಕೊಳ್ಳಬಾರದು. ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ 900 ಹುದ್ದೆ ನೇಮಕಾತಿ ವಿಚಾರ ಕೋರ್ಟ್ನಲ್ಲಿ ಇತ್ತು. ಆ ಬಳಿಕ ಕೆಪಿಎಸ್ಸಿ ಪರೀಕ್ಷೆ ಮೂಲಕ ನೇಮಕಾತಿ ಮಾಡಲು ತೀರ್ಮಾನ ಆಗಿತ್ತು ಅಚ್ಚುಕಟ್ಟಾಗಿ ಪರೀಕ್ಷೆ ಆಗಿದೆ.
ಆದರೆ ಸೆಂಟ್ ಜಾನ್ಸ್ ಕೇಂದ್ರದಲ್ಲಿ ಅಕ್ರಮ ಆಗಿದೆ ಅಂತ ಒಂದು ಆರೋಪ ಕೇಳಿ ಬಂದಿತ್ತು. ಅದರ ಮೇಲೆ ಎಫ್ಐಆರ್ ಆಗಿದೆ. ಇದಕ್ಕೂ ಇಲಾಖೆಗೂ ಸಂಬಂಧ ಇಲ್ಲ ಇಲಾಖೆಯ ಯಾವುದೇ ಪಾತ್ರ ಇದರಲ್ಲಿ ಇರುವುದಿಲ್ಲ ಎಂದು ಅವರು ಪುನರುಚ್ಚರಿಸಿದರು.
ಇನ್ನು ಗೃಹ ಸಚಿವರಿಗೆ ನೋಟಿಸ್ ನೀಡಿ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಸಿ.ಸಿ. ಪಾಟೀಲ್, ಜತೆಯಲ್ಲಿ ಫೋಟೋ ಇದ್ದ ಮಾತ್ರಕ್ಕೆ ಆರೋಪ ಸರಿಯಲ್ಲ. ವಿಧಾನಸೌಧದಲ್ಲಿ ಮೀಟಿಂಗ್ ಮುಗಿಸಿ ಬರುವಾಗ ನಮ್ಮ ಜೊತೆಯೂ ಯಾರು ಯಾರೋ ಸೆಲ್ಫಿ ತೆಗೆದುಕೊಳ್ಳುತ್ತಾರೆ.

ಫೋಟೋ ಇದ್ದವರ ಜೊತೆ ಹೋಗಿ ಮೋಜು ಮಸ್ತಿ ಮಾಡಿದ್ದರೆ ಅದನ್ನು ವೆಸ್ಟೆಡ್ ಇಂಟರೆಸ್ಟ್ ಎನ್ನಬಹುದು. ಇಲ್ಲದಿದ್ದರೆ ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಗೃಹ ಸಚಿವರು ಯಾರ ಮನೆಗೆ ಹೋಗಿದ್ದರು ಎಂಬುದು ನನಗಂತೂ ಮಾಹಿತಿ ಇಲ್ಲ ಎಂದು ವಿಧಾನಸೌಧದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಮಾರ್ಮಿಕವಾಗಿ ಉತ್ತರಿಸಿದರು.
ಗುತ್ತಿಗೆದಾರರ ಸಂಘದಿಂದ ಸಿಎಂ ಭೇಟಿ; PWD ಸಚಿವ ಪಾಟೀಲ್ಗೆ ಸಿಎಂ ಬುಲಾವ್
ಲೋಕೋಪಯೋಗಿ ಇಲಾಖೆಯಲ್ಲಿ ಭ್ರಷ್ಟಾಚಾರ ಮತ್ತು ಕಮಿಷನ್ ವಿಚಾರವಾಗಿ ಕುತೂಹಲಕಾರಿ ಬೆಳವಣಿಗೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಗುತ್ತಿಗೆದಾರರ ಸಂಘದವರು ಇಂದು ಸಿಎಂ ಬೊಮ್ಮಾಯಿ ಆಮಂತ್ರಣದ ಮೇರೆಗೆ ಅವರನ್ನು ಭೇಟಿಯಾದರು.
ಗುತ್ತಿಗೆದಾರರ ಸಂಘದ ಭೇಟಿ ವೇಳೆ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ರನ್ನು ಸಿಎಂ ಬೊಮ್ಮಾಯಿ ಕರೆಸಿದ್ದರು. ಇತ್ತೀಚೆಗೆ ಲೋಕೋಪಯೋಗಿ ಇಲಾಖೆ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಲಾಗಿತ್ತು.
Recommended Video
-
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ -
CBSE 12ನೇ ತರಗತಿಯ ಜೀವಶಾಸ್ತ್ರ ಪ್ರಶ್ನೆಪತ್ರಿಕೆ ವಿಶ್ಲೇಷಣೆ: ತಜ್ಞರು ಮತ್ತು ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ಮಾಹಿತಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications