ತಿಂಗಳ ಎರಡನೇ ಶನಿವಾರ ಸಿಎಂ ಜನತಾದರ್ಶನ ಇಲ್ಲ
ಬೆಂಗಳೂರು, ಸೆಪ್ಟೆಂಬರ್ 6: ಇನ್ನುಮುಂದೆ ತಿಂಗಳ ಎರಡನೇ ಶನಿವಾರ ಸಿಎಂ ಜನತಾ ದರ್ಶನ ಇರುವುದಿಲ್ಲ ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಕಚೇರಿ ಮೂಲಗಳು ತಿಳಿಸಿವೆ.
ಜೆಪಿನಗರದಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ ಮನೆಮುಂದೆ ಸಿಎಂ ಭೇಟಿ ಮಾಡಲು ಬರುವುದನ್ನು ತಪ್ಪಿಸಲು ಪ್ರತಿ ಶನಿವಾರ ಗೃಹಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಯುವುದಾಗಿ ತಿಳಿಸಲಾಗಿತ್ತು. ಅದರಂತೆ ಸೆಪ್ಟೆಂಬರ್ 1ರಂದು ಸಾವಿರಾರು ಮಂದಿ ಬಂದು ತಮ್ಮ ಅಹವಾಲುಗಳನ್ನು ನೀಡಿದರು.
ಸೆಪ್ಟೆಂಬರ್ 8ರಂದು ಎರಡನೇ ಶನಿವಾರ ಜನತಾ ದರ್ಶನ ಇರುವುದಿಲ್ಲ, ಇನ್ನುಮುಂದೆ ತಿಂಗಳ ಎರಡನೇ ಶನಿವಾರ ಜನತಾ ದರ್ಶನ ಇರುವುದಿಲ್ಲ, ಅದರ ಜತೆಗೆ ಮುಂದಿನ ಜನತಾ ದರ್ಶನ ದಿನಾಂಕವನ್ನೂ ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಳೆದ ಮೂರು ತಿಂಗಳ ಅವಧಿಯಲ್ಲಿ ಪ್ರತಿದಿನ ಎಚ್ಡಿ ಕುಮಾರಸ್ವಾಮಿ ಜನತಾ ದರ್ಶನ ನಡೆಸುವರೆಂದು ರಾಜ್ಯದ ನಾನಾ ಕಡೆಗಳಿಂದ ಸಾವಿರಾರು ಜನರು ಬರುತ್ತಿದ್ದರು. 2006ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕುಮಾರಸ್ವಾಮಿ ಜನತಾ ದರ್ಶನ ಆರಂಭಿಸಿದ್ದರು.

ಹೀಗಾಗಿ ಜನತಾ ದರ್ಶನಕ್ಕೆ ಹೆಸರಾದ ಕುಮಾರಸ್ವಾಮಿ ಆಡಳಿತ ನಡೆಸಲು ಕಷ್ಟವಾಗುವಷ್ಟರ ಮಟ್ಟಿಗೆ ನಿತ್ಯ ಜನ ಹರಿದುಬರುತ್ತಿದ್ದರು. ಇನ್ನು ಮುಂದೆ ಶನಿವಾರ ಬೆಳಿಗ್ಗೆ 11 ರಿಂದ ಸಂಜೆ 4:30ರ ವರವರೆಗೆ ಮಾತ್ರ ಸಿಎಂ ಅವರು ಸಾರ್ವಜನಿಕರನ್ನು ಭೇಟಿ ಆಗಲಿದ್ದಾರೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು












Click it and Unblock the Notifications