ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
ಕರ್ನಾಟಕದಲ್ಲಿ ಅವಧಿ ಪೂರ್ವ ಚುನಾವಣೆ ನಡೆಯದು ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ಸ್ಪಷ್ಟನೆ. ತಮ್ಮ ಸರ್ಕಾರ ತನ್ನ ಅವಧಿಯನ್ನು ಪೂರ್ಣವಾಗಿ ಮುಗಿಸುತ್ತದೆ ಎಂದ ಸಿಎಂ.
ಮೈಸೂರು, ಜೂನ್ 24: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅವಧಿ ಪೂರ್ವ ಚುನಾವಣೆ ನಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗಷ್ಟೇ, ಸುಮಾರು 8, 000 ಕೋಟಿ ರು.ಗಳಷ್ಟು ರೈತರ ಸಾಲ ಮನ್ನಾ ಮಾಡಿರುವ ಸಿದ್ದರಾಮಯ್ಯ ಅವರು, ಸದ್ಯದ ಮಟ್ಟಿಗೆ ರೈತರ ಪ್ರೀತಿ ಗಳಿಸಿದ್ದಾರೆ. ರಾಜ್ಯದಲ್ಲಿ ಇದೇ ಹವಾ ಇರುವಾಗಲೇ ಸರ್ಕಾರವನ್ನು ವಿಸರ್ಜನೆ ಮಾಡಿ ಅವಧಿ ಪೂರ್ವ ಚುನಾವಣೆಗೆ ಹೋಗುವ ಮೂಲಕ ಕಾಂಗ್ರೆಸ್ ಪರವಾಗಿರುವ ಅಲೆಯನ್ನು ಮತಗಳನ್ನಾಗಿ ಪರಿವರ್ತಿಸಿಕೊಳ್ಳುವ ಸರ್ಕಸ್ ಮಾಡಲಿದ್ದಾರೆಂಬ ವದಂತಿಗಳು ಹರಡಿದ್ದವು.

ಈ ಎಲ್ಲಾ ವದಂತಿಗಳನ್ನು ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ. ಸಾಲ ಮನ್ನಾ ಕ್ರಮವು ಸರ್ಕಾರದ ಬಾಧ್ಯತೆಯೇ ಹೊರತು ಗಿಮಿಕ್ ಅಲ್ಲ ಎಂದಿರುವ ಅವರು, ಇದೇ ಅವಕಾಶವನ್ನು ಉಪಯೋಗಿಸಿಕೊಂಡು ಅವಧಿ ಪೂರ್ವ ಚುನಾವಣೆಗೆ ಮುಂದಾಗುವುದಿಲ್ಲ ಎಂದು ತಿಳಿಸಿದ್ದಾರೆ.












Click it and Unblock the Notifications