ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೆರೆ ಪ್ರದೇಶಗಳಿಗೆ ನೀಡಲು ಹಣದ ಕೊರತೆ ಇಲ್ಲ: ಆರ್.ಅಶೋಕ್

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 05: ನೆರೆ ಪ್ರದೇಶಗಳ ನಿರ್ವಹಣೆಗೆ ಸರ್ಕಾರದ ಬಳಿ ಹಣ ಇದೆ ಈ ಬಗ್ಗೆ ಗೊಂದಲ ಬೇಡ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ತಮ್ಮ ಕಚೇರಿಗೆ ಪೂಜೆ ಮಾಡಿದ ಅವರು, ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬೆಳಗಾವಿಗೆ ಈಗಾಗಲೇ 30 ಕೋಟಿ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಗೂ ಹಣ ಬಿಡುಗಡೆ ಮಾಡಲಾಗಿದೆ ಎಂದರು.

ಕರ್ನಾಟಕ ಪ್ರವಾಹ: ಸಂತ್ರಸ್ತರಿಗೆ ನೆರವು ನೀಡುವುದು ಹೇಗೆ?ಕರ್ನಾಟಕ ಪ್ರವಾಹ: ಸಂತ್ರಸ್ತರಿಗೆ ನೆರವು ನೀಡುವುದು ಹೇಗೆ?

ನಮ್ಮ ಇಲಾಖೆ ವತಿಯಿಂದ ತಡೆರಹಿತವಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದು, ನೆರೆ ಪೀಡಿತ ಪ್ರದೇಶಗಳ ಜನರಿಗೆ ಶೀಘ್ರವೇ ಪೂರ್ಣ ಪರಿಹಾರ ಒದಗಿಸಲಾಗುವುದು ಎಂದರು.

No money Shortage in Government: R Ashok

ಮಹಾರಾಷ್ಟ್ರದಲ್ಲಿ ಮತ್ತೆ ಮಳೆ ಆಗುತ್ತಿದ್ದು, ಡ್ಯಾಂನಿಂದ ನದಿ ನೀರು ಬಿಡುಗಡೆ ಮಾಡುವ ಸೂಚನೆ ದೊರೆತಿರುವ ಕಾರಣ, ನದಿ ತೀರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಿದ್ದೇವೆ ಎಂದು ಅವರು ಹೇಳಿದರು.

ನಾಳೆ (ಸೆಪ್ಟೆಂಬರ್ 05) ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ನೆರೆ ಪರಿಹಾರ ಬಿಡುಗಡೆ ಮಾಡುವಂತೆ ಅವರಿಗೆ ಮತ್ತೊಮ್ಮೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಕೊಡಗಿನಲ್ಲಿ ಮತ್ತೆ ಮುಂಗಾರು ಚೇತರಿಕೆ: ಡಿಸಿಎಂನಿಂದ ಅಗತ್ಯ ಕ್ರಮದ ಭರವಸೆಕೊಡಗಿನಲ್ಲಿ ಮತ್ತೆ ಮುಂಗಾರು ಚೇತರಿಕೆ: ಡಿಸಿಎಂನಿಂದ ಅಗತ್ಯ ಕ್ರಮದ ಭರವಸೆ

ಡಿ.ಕೆ.ಶಿವಕುಮಾರ್ ಅವರನ್ನು ಇ.ಡಿ ಬಂಧಿಸಿರುವುದರ ಹಿಂದೆ ರಾಜಕೀಯ ದ್ವೇಷ ಇದೆ ಎಂಬುದು ಸುಳ್ಳು, ಹಿಂದೆ ಯಡಿಯೂರಪ್ಪ ಅವರನ್ನು ಬಂಧಿಸಿದ್ದಾಗ ಸಂತೋಶ ಪಟ್ಟಿದ್ದವರು ಈಗ ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

English summary
Revenue minister R Ashok said, There is no money shortage to manage flood situation. He also said we will request Modi to release help.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X