ಕಾರಂಜಾ ಮುಳುಗಡೆ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ಇಲ್ಲ:ಕಾರಜೋಳ
ಬೆಂಗಳೂರು, ಸೆಪ್ಟಂಬರ್ 15: ಬೀದರ್ ಜಿಲ್ಲೆಯಲ್ಲಿ ಕಾರಂಜಾ ಮುಳುಗಡೆ ಸಂತ್ರಸ್ತರಿಗೆ ಈಗಾಗಲೇ ಪರಿಹಾರ ನೀಡಲಾಗಿದ್ದು, ಹೆಚ್ಚುವರಿ ಪರಿಹಾರ ನೀಡಲು ಕಾನೂನಾತ್ಮಕವಾಗಿ ಯಾವುದೇ ಅವಕಾಶ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ವಿಧಾನ ಪರಿಷತ್ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಅರವಿಂದ್ ಕುಮಾರ್ ಅವರು ಪ್ರಕರಣ ಕುರಿತು ಪ್ರಶ್ನಿಸಿದರು. ಕಾರಂಜಾ ಮುಳುಗಡೆ ಪರಿಹಾರಕ್ಕೆ ಒತ್ತಾಯಿಸಿ ರೈತರು 80 ದಿನಗಳಿಂದ ಧರಣಿ ನಡೆಸುತ್ತಿದ್ದರು ಸರ್ಕಾರ ಸ್ಪಂದಿಸುತ್ತಿಲ್ಲ ಏಕೆ ಎಂದು ಅವರು ಕೇಳಿದರು.
ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈಗಾಗಲೇ 69 ಕೋಟಿ ರೂಪಾಯಿ ಪರಿಹಾರ ನೀಡಿದ್ದೇವೆ. ಇನ್ನೂ ಕೆಲವು ರೈತರು ಕೋರ್ಟ್ಗೆ ಹೋಗಿಲ್ಲ. ಕೋರ್ಟ್ಗೆ ಹೋಗದೆ ಇರುವ ರೈತರು ಸರ್ಕಾರಕ್ಕೆ ಅರ್ಜಿ ಹಾಕಿದವರಿಗೂ ಕೂಡ ಪರಿಹಾರ ಕೊಡಲು ಅವಕಾಶ ಇದೆ. ಆದರೆ, ಅವರು ಮೂರು ತಿಂಗಳ ಒಳಗೆ ಅರ್ಜಿ ಹಾಕಿಕೊಂಡಿಲ್ಲ. ಈಗ 25ರಿಂದ 30 ವರ್ಷದ ನಂತರ ಧರಣಿ ಕೂತರೇ ಕೊಡಲು ಸಾಧ್ಯವಿಲ್ಲ ಎಂದರು.

2014ರಂದು ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೂ ಪರಿಹಾರ ಕೊಡಲು ಅವಕಾಶ ಇಲ್ಲ ಎಂಬುದಾಗಿ ಸಂಪುಟದಲ್ಲಿ ನಿರ್ಣಯವಾಗಿದೆ. ಯುಕೆಪಿ ಮಾದರಿಯಲ್ಲಿ ಪರಿಹಾರ ಕೊಡುವುದಕ್ಕೆ ಅವಕಾಶ ಇಲ್ಲ. ಯುಕೆಪಿ ಯೋಜನೆಗೆ ವಿಶ್ವಬ್ಯಾಂಕ್ ನೆರವು ತೆಗೆದುಕೊಂಡಿದ್ದೇವೆ. ವಿಶ್ವ ಬ್ಯಾಂಕ್ನವರಿಂದ ಯಾವ ರೀತಿ ಪರಿಹಾರ ಕೊಡಬೇಕು ಎಂಬುದಾಗಿ ಕೆಲವು ಷರತ್ತುಗಳು ಇವೆ. ಆ ಷರತ್ತು ಒಪ್ಪಿಕೊಂಡ ನಂತರವೇ ಸರ್ಕಾರಕ್ಕೆ ವಿಶ್ವಬ್ಯಾಂಕ್ ಸಾಲ ನೀಡಿದೆ. ಹೀಗಾಗಿ ಪರಿಹಾರ ವಿಚಾರದಲ್ಲಿ ಹೊಲಿಕೆ ಮಾಡಲು ಬರುವುದಿಲ್ಲ ಎಂದರು.
ಯೋಜನೆ ಆರಂಭಿಸಿ 30ರಿಂದ 40 ವರ್ಷಗಳೇ ಆಗಿವೆ. ಈವರೆಗೆ ಸಂತ್ರಸ್ತರ 69 ಕೋಟಿ ರೂ. ಪರಿಹಾರ ತೆಗೆದುಕೊಂಡಿದ್ದಾರೆ. ಇನ್ನುಮುಂದೆ ಒಂದು ರೂಪಾಯಿ ಪರಿಹಾರ ಕೊಡಲು ಸಾಧ್ಯವಿಲ್ಲ. ಹೈಕೋರ್ಟ್ ಸಹ ಮನವಿಗಳನ್ನು ತಿರಸ್ಕರಿಸಿದೆ. ಇಂತಹ ಬೇಡಿಕೆಗಳನ್ನ ತರುವಾಗ ಸಂಪೂರ್ಣ ತಿಳಿದು ಮೇಲ್ಮನೆಗೆ ತರುವಂತೆ ಸಚಿವರು ಸೂಚಿಸಿದರು.

ಅನುದಾನದ ಲಭ್ಯತೆ ಮೇಲೆ ಯೋಜನೆ ಅನುಷ್ಠಾನ
ಬಳ್ಳಾರಿ ಗ್ರಾಮಾಂತರದಲ್ಲಿ ಕುಡಿಯುವ ನೀರಿನ ಯೋಜನೆ ಕುರಿತು ಸದನದಲ್ಲಿ ಪ್ರಸ್ತಾಪಿಸಲಾಗಿದೆ. ಜಲಸಂಪನ್ಮೂಲ ಇಲಾಖೆ ಇರುವುದು ನೀರಾವರಿ ಸೌಲಭ್ಯ ಒದಗಿಸಲು ಎಂಬುದು ಗಮನದಲ್ಲಿರಲಿ. ಅಲ್ಲದೇ 60 ಕೋಟಿ ರೂ.ವೆಚ್ಚದ ಯೋಜನೆಗೆ ಅನುಮೋದನೆ ಆಗಿದೆ ಎಂಬ ಮಾತುಗಳು ಕೇಳಿ ಬಂದಿವೆ. ಆದರೆ ಯೋಜನೆ ಅನುಮೋದನೆಯೇ ದೊರೆತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಕುಡಿಯುವ ನೀರಿನ ಯೋಜನೆ 2019-2020 ಸಾಲಿನ ಬಜೆಟ್ನಲ್ಲಿ ಘೋಷಣೆ ಆಗಿದೆ. ಯೋಜನೆಗಳು 2013ರಿಂದ ಈವರೆಗೂ ಘೋಷಣೆ ಆಗುತ್ತಲೇ ಇವೆ. ಇವತ್ತಿನ ಕಾಮಗಾರಿಗಳಿಗೆ 1ಲಕ್ಷ ರೂ.ನಿಂದ 2ಸಾವಿರ ಕೋಟಿ ರೂ.ವರೆಗೆ ವೆಚ್ಚ ಹೆಚ್ಚಾಗಿದೆ. ಸದ್ಯ ನಮಗೆ ಬಜೆಟ್ನಲ್ಲಿ 18ರಿಂದ 19 ಸಾವಿರ ಕೋಟಿ ವರೆಗೆ ಮಾತ್ರ ಅನುದಾನ ಸಿಗುತ್ತಿದೆ. ಹೀಗಾಗಿ ಅನುದಾನದ ಲಭ್ಯತೆ ಆಧಾರದಲ್ಲಿ ಯೋಜನೆ ಅನುಷ್ಠಾನಗೊಳಿಸುತ್ತೇವೆ ಎಂದು ಅವರು ಪುನರುಚ್ಚರಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications