ಹೊಸ ವರ್ಷಾಚರಣೆ: ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಅವಕಾಶವಿಲ್ಲ
ಬೆಂಗಳೂರು, ಡಿಸೆಂಬರ್ 12: ಇನ್ನೇನು ಹೊಸ ವರ್ಷ ಸನ್ನಿಹಿತವಾಗುತ್ತಿದ್ದು, ಪ್ರತಿ ವರ್ಷವೂ ಒಂದಲ್ಲಾ ಒಂದು ಸುದ್ದಿ ಮಾಡುತ್ತಿದ್ದ ಬೆಂಗಳೂರು ಈ ಬಾರಿ ಮೌನವಾಗಿರಲಿದೆ.
ಹೌದು ಕೊರೊನಾ ಸೋಂಕಿನಿಂದಾಗಿ ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೆಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಲಿದೆ.
ಜನವರಿ ಹಾಗೂ ಫೆಬ್ರವರಿಯಲ್ಲಿ ರಾಜ್ಯದಲ್ಲಿ ಕೊರೊನಾದ ಎರಡನೇ ಅಲೆ ಆರಂಭವಾಗಲಿದೆ ಎಂದು ತಜ್ಞರು ಹೇಳಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗುತ್ತದೆ.

ಡಿಸೆಂಬರ್ 31ರ ರಾತ್ರಿ ರಾಜ್ಯಾದ್ಯಂತ ಎಲ್ಲೂ ಸಂಭ್ರಮಾಚರಣೆ ಮಾಡುವಂತಿಲ್ಲ, ಡಿಸೆಂಬರ್ 20 ರಿಂದ ಜನವರಿ 2ರವರೆಗೆ ಕಠಿಣ ನಿಯಮ ಜಾರಿಗೆ ಬರುವ ಸಾಧ್ಯತೆಗಳಿವೆ.
ಧಾರ್ಮಿಕ ಸಭೆ ಸಮಾರಂಭಗಳಲ್ಲಿ 200 ಜನರಿಗೆ ಮಾತ್ರ ಅವಕಾಶ ನೀಡಬಹುದು, ಹೋಟೆಲ್, ಪಬ್, ಬಾರ್, ನೈಟ್ ಕ್ಲಬ್ಗಳಲ್ಲಿ ಈಗಿರುವಂತೆ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ, ಹಾಗೆಯೇ ಮನರಂಜನಾ ಕಾರ್ಯಕ್ರಮಗಳು ಬ್ಯಾನ್ ಆಗಲಿವೆ ಎಂದು ಹೇಳಲಾಗಿದೆ.
ಇಂದು ನಡೆದ ಕೊರೊನಾ ಟಾಸ್ಕ್ಫೋರ್ಸ್ ಸಭೆಯಲ್ಲಿ ಕೊರೊನಾ ಎರಡನೇ ಅಲೆ ಬಗ್ಗೆ ಚರ್ಚೆ ಮಾಡಲಾಗಿದೆ. ಸಭೆ ಸಮಾರಂಭಗಳಿಗೆ ನಿರ್ಬಂಧ ವಿಧಿಸುವುದು, ಹೊಸ ವರ್ಷಕ್ಕೆ ಕಠಿಣ ಕ್ರಮ ಜಾರಿಗೆ ತಜ್ಞರು ಕೊಟ್ಟಿರುವ ವರದಿಯನ್ನು ಅನುಷ್ಠಾನ ಮಾಡುವುದು ಸೇರಿದಂತೆ ಹಲವು ನಿರ್ಧಾರ ತೆಗೆದುಕೊಳ್ಳಲಾಗಿದೆ.
2020 ಕೋವಿಡ್ನಿಂದಾಗಿ ಎಲ್ಲರಿಗೂ ಶೋಕಾಚರಣೆಯಂತಾಗಿದೆ. ಕೋವಿಡ್ಗೆ ತುತ್ತಾಗಿ ಹಲವರು ಸಾವಿಗೀಡಾಗಿದ್ದಾರೆ. ಹಾಗಾಗಿ ಈ ಬಾರಿಯ ಹೊಸ ವರ್ಷ ಆಚರಿಸುವ ಅಗತ್ಯ ಏನಿದೆ ಎಂದು ಪ್ರಶ್ನಿಸಿದರು.
ಕೊರೊನಾ ಎರಡನೇ ಅಲೆ ಬರುವ ಹಿನ್ನೆಲೆಯಲ್ಲಿ ತಪಾಸಣೆ ಹೆಚ್ಚು ಮಾಡುವಂತೆ 10 ಜಿಲ್ಲೆಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲೆಗೆ ಗುರಿ ನೀಡಲಾಗಿದ್ದು,ಅದನ್ನು ಕಡ್ಡಾಯವಾಗಿ ತಲುಪಬೇಕು. ಅಷ್ಟೇ ಅಲ್ಲದೆ, ಎರಡು ತಿಂಗಳು ಸಾಮಾಜಿಕ ಕಾರ್ಯಕ್ರಮ, ಮದುವೆ ಕಾರ್ಯಕ್ರಮಕ್ಕೆ ನಿರ್ಬಂಧ ಹೇರಲಾಗುತ್ತದೆ ಎಂದು ಸಚಿವ ಡಾ. ಕೆ ಸುಧಾಕರ್ ತಿಳಿಸಿದರು.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications