ಲಾಲ್ ಬಾಗ್ ನಲ್ಲಿ ಫೋಟೊಶೂಟ್ ನಿಷೇಧ!
Recommended Video

ಬೆಂಗಳೂರು, ಮಾರ್ಚ್ 3 : ಈಗಾಗಲೇ ಕಬ್ಬನ್ ಪಾರ್ಕ್ ನಲ್ಲಿ ವಾಣಿಜ್ಯ ಉದ್ದೇಶದ ಛಾಯಾಗ್ರಹಣವನ್ನು ನಿಷೇಧಿಸಿದ್ದು, ಇದೀಗ ಲಾಲ್ ಬಾಗ್ ನಲ್ಲಿಯೂ ಚಿತ್ರೀಕರಣವನ್ನು ನಿಷೇಧಿಸಲು ತೋಟಗಾರಿಕೆ ಇಲಾಖೆ ನಿರ್ಧರಿಸಿದೆ.
ಸಸ್ಯ ಕಾಶಿ ಲಾಲ್ ಬಾಗ್ ನಲ್ಲಿ ಪ್ರಕೃತಿ ಸೊಬಗನ್ನು ಆಸ್ವಾದಿಸುವುದನ್ನು ಬಿಟ್ಟು ಹಲವರು ವೈಭವೀಕರಣದ ಪೋಟೊ ಶೂಟಿಂಗ್ ಮೂಲಕ ಉದ್ಯಾನದ ಸುಂದರ ತಾಣಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದರು. ಕೆಲವರಂತೂ ಫ್ಲ್ಯಾಷ್ ಹಾಕಿಕೊಂಡು ದೊಡ್ಡ ದೊಡ್ಡ ಕ್ಯಾಮರಾಗಳನ್ನು ತಂದು ಫೋಟೊ ಶೂಟ್ ಮಾಡುತ್ತಿದ್ದರು. ಇದರಿಂದ ಉದ್ಯಾನದ ಪರಿಸರಕ್ಕೆ ತೊಂದರೆಯಾಗುತ್ತಿತ್ತು.
ಪ್ರಖರವಾದ ಕ್ಯಾಮೆರಾ ಫ್ಲ್ಯಾಷ್ ಮತ್ತು ಲೈಟಿಂಗ್ಸ್ ಬಳಸುವುದರಿಂದ ಜೇನು, ಸೀಮೆ ಇರುವೆ ಮತ್ತಿತರೆ ಜೀವ ಸಂಕುಲಕ್ಕೆ ತೀವ್ರ ಹಾನಿಯಾಗುತ್ತಿತ್ತು ಎಂದು ತೋಗಾರಿಕೆ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್ ತಿಳಿಸಿದ್ದಾರೆ.

ಪ್ರೀ ವೆಡ್ಡಿಂಗ್ ಹಾಗೂ ಪ್ರೆಗ್ನೆನ್ಸಿ ಫೋಟೊಶೂಟ್ ಗಾಗಿ ಬರುವವರು ಉದ್ಯಾನದಲ್ಲಿಯೇ ಬಟ್ಟೆ ಬದಲಿಸಿ, ಛಾಯಾಗ್ರಹಣ ಮಾಡಿಸಿಕೊಳ್ಳುತ್ತಿದ್ದರು. ಇದರಿಂದ ಉದ್ಯಾನಕ್ಕೆ ಮಕ್ಕಳೊಂದಿಗೆ ಬರುವ ಪ್ರವಾಸಿಗರಿಗೆ ಮುಜುಗರ ಉಂಟಾಗುತ್ತಿತ್ತು. ಈ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು ಎಂದು ಹೇಳಿದರು.

ವಾಕಥಾನ್ , ಮ್ಯಾರಥಾನ್ ಗಳಿಗೂ ಲಾಲ್ಬಾಗ್ನಲ್ಲಿ ಅವಕಾಶವಿಲ್ಲ. ಉದ್ಯಾನದ ಸ್ವಚ್ಛತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿ ದ್ದೇವೆ. ಪ್ರವಾಸಿಗರು ಚಿತ್ರ ತೆಗೆದುಕೊಳ್ಳುವುದಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ಮಾಹಿತಿ ನೀಡಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications