ಕರ್ನಾಟಕದ ಮಕ್ಕಳಿಗೆ ಸದ್ಯಕ್ಕಿಲ್ಲ ರಾಗಿ ಮುದ್ದೆ, ಜೋಳದ ರೊಟ್ಟಿ ಭಾಗ್ಯ
ಬೆಂಗಳೂರು, ನವೆಂಬರ್ 22: ಕರ್ನಾಟಕದಲ್ಲಿ 2023ರನ್ನು ಅಂತಾರಾಷ್ಟ್ರೀಯ ರಾಗಿ ವರ್ಷವನ್ನಾಗಿ ಆಚರಿಸಲು ಸಜ್ಜಾಗಿದ್ದು, ಈ ಹಿನ್ನೆಲೆಯಲ್ಲಿ ಈ ಹಿಂದೆ ಶಾಲಾ ಮಕ್ಕಳ ಮಧ್ಯಾಹ್ನ ಬಿಸಿಯೂಟ ಯೋಜನೆಯಲ್ಲಿ ರಾಗಿ ಮುದ್ದೆ ಹಾಗೂ ಜೋಳದ ರೊಟ್ಟಿ ನೀಡುವ ಕುರಿತು ನಿರ್ಧರಿಸಲಾಗಿತ್ತು. ಆದರೆ ಈ ಯೋಜನೆ ಮುಂದಿನ ವರ್ಷದಿಂದ ಜಾರಿಗೆ ತರಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಧ್ಯಾಹ್ನದ ಬಿಸಿಯೂಟ ಊಟ ಯೋಜನೆಯ ಮುಖ್ಯ ಅಧಿಕಾರಿ ಅನಿತಾ ನಜರೆ ತಿಳಿಸಿದ್ದಾರೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಲಭ್ಯವಿರುವ ಆಹಾರ ಧಾನ್ಯಗಳು ಕಳಪೆ ಗುಣಮಟ್ಟದ್ದಾಗಿದೆ. ಹೀಗಾಗಿ ಈ ವರ್ಷ ರಾಗಿ ಮುದ್ದೆ ಮತ್ತು ಜೋಳದ ರೊಟ್ಟಿ ನೀಡುವ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಕಷ್ಟಸಾಧ್ಯ ಎಂದು ತಿಳಿಸಿದ್ದಾರೆ.
ಮಾತು ಮುಂದುವರಿಸಿದ ಅವರು,"ನಾವು ಸಾಮಾನ್ಯವಾಗಿ ಅಕ್ಕಿ ಮತ್ತು ಗೋಧಿಯನ್ನು ಕೇಂದ್ರ ಸರ್ಕಾರದ ಭಾರತೀಯ ಆಹಾರ ನಿಗಮದಿಂದ ಸಂಗ್ರಹಿಸುತ್ತೇವೆ. ರಾಗಿ ಮತ್ತು ಜೋಳ ಕರ್ನಾಟಕಕ್ಕೆ ಸ್ಥಳೀಯವಾದ ಬೆಳೆಗಳಾಗಿದೆ. ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ರಾಗಿ ಮುದ್ದೆ ಮತ್ತು ಜೋಳದ ರೊಟ್ಟಿ ನೀಡಲು ದೊಡ್ಡ ಪ್ರಮಾಣದಲ್ಲಿ ರಾಗಿ ಮತ್ತು ಜೋಳ ಉತ್ಪಾದನೆಯ ಅಗತ್ಯವಿತ್ತು. ಈಗ ಸಂಗ್ರಹವಾಗುತ್ತಿರುವ ಆಹಾರ ಧಾನ್ಯಗಳು ತಾಜಾವಾಗಿಲ್ಲ ಜೊತೆಗೆ ಅವುಗಳ ಪೌಷ್ಟಿಕಾಂಶ ಕಳಪೆಯಾಗಿತ್ತು. ಆದ್ದರಿಂದ ಈ ಶೈಕ್ಷಣಿಕ ವರ್ಷದಲ್ಲಿ ಯೋಜನೆಯನ್ನು ಜಾರಿಗೊಳಿಸದಿರಲು ನಾವು ನಿರ್ಧರಿಸಿದ್ದೇವೆ," ಎಂದು ಅನಿತಾ ನಜರೆ ತಿಳಿಸಿದ್ದಾರೆ.

ಇನ್ನು "ಈ ಬಗ್ಗೆ ಬಜೆಟ್ ಅಧಿವೇಶನದ ಮೊದಲು, ನಾವು ಸಭೆ ನಡೆಸುತ್ತೇವೆ. ಈ ಯೋಜನೆಯ ಜಾರಿಗೆ ಆಹಾರ ಧಾನ್ಯಗಳನ್ನು ಸಂಗ್ರಹಿಸಲು ಹಣವನ್ನು ಮೀಸಲಿಡುತ್ತೇವೆ. ಇದರಿಂದಾಗಿ ನಾವು ಮುಂದಿನ ಶೈಕ್ಷಣಿಕ ವರ್ಷದಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ರಾಗಿ ಮುದ್ದೆ ಮತ್ತು ಜೋಳದ ರೊಟ್ಟಿ ನೀಡಲು ಸಾಧ್ಯವಾಗಬಹುದು," ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ಪೌಷ್ಠಿಕಾಂಶದ ಆಹಾರ ನೀಡುವ ಉದ್ದೇಶದಿಂದ ರಾಗಿಮುದ್ದೆ, ಜೋಳದ ರೊಟ್ಟಿ ನೀಡಲು ನಿರ್ಧಾರ ಮಾಡಲಾಗಿತ್ತು. ಶಿಕ್ಷಣ ಇಲಾಖೆಯ ವತಿಯಿಂದ ಕರ್ನಾಟಕದ ದಕ್ಷಿಣ ಭಾಗದ ಸರ್ಕಾರಿ ಮತ್ತು ಅನುದಾನಿತ ಶಾಲೆಯ ವಿದ್ಯಾರ್ಥಿಗಳಿಗೆ ರಾಗಿ ಮುದ್ದೆ ಹಾಗೂ ಉತ್ತರ ಕರ್ನಾಟಕ ಭಾಗದ ಸರ್ಕಾರಿ ಮತ್ತು ಅನುದಾನಿತ ಶಾಲೆಯ ವಿದ್ಯಾರ್ಥಿಗಳಿಗೆ ಜೋಳದ ರೊಟ್ಟಿ ನೀಡಲು ನಿರ್ಧರಿಸಲಾಗಿತ್ತು. ಇನ್ನು ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಧ್ಯಾಹ್ನದ ಬಿಸಿಯೂಟ ಊಟ ಯೋಜನೆ ಅಡಿಯಲ್ಲಿ ಮಕ್ಕಳಿಗೆ ಹಾಲು ಮತ್ತು ಮೊಟ್ಟೆ ನೀಡಲಾಗುತ್ತಿದೆ.
(ಮಾಹಿತಿಕೃಪೆ: ಇಂಡಿಯನ್ ಎಕ್ಸ್ ಪ್ರೆಸ್)
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?












Click it and Unblock the Notifications