ಹೊಸ ವರ್ಷ ಆಚರಣೆ: ಬೆಂಗಳೂರಲ್ಲಿ ಪೊಲೀಸರ ಬಂದೋಬಸ್ತ್ ಹೇಗಿದೆ?
ಬೆಂಗಳೂರು, ಡಿಸೆಂಬರ್ 26: ಹೊಸ ವರ್ಷವನ್ನು ಬರಮಾಡಿಕೊಳ್ಳಲು ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಆಚರಣೆ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟೆಚ್ಚರವಹಿಸಿದ್ದಾರೆ.
ಹೊಸ ವರ್ಷ ಸಂಭ್ರಮಾಚರಣೆ ವೇಳೆ ಬಂದೋಬಸ್ತ್ ಸಂಬಂಧ ನಾಲ್ಕೈದು ದಿನಗಳಿಂದ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಯುತ್ತಿದೆ. ಏನಾದರೂ ಅಹಿತಕರ ಘಟನೆಗಳು ನಡೆದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಯಾಗುತ್ತಾರೆ ಎಂಬ ಎಚ್ಚರಿಕೆಯನ್ನು ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ನೀಡಿದ್ದಾರೆ.

800 ಪೊಲೀಸ್ ವಾಹನ
ಡಿಸೆಂಬರ್ ತಿಂಗಳ ಕೊನೆಯ ದಿನ ನಗರ ವ್ಯಾಪ್ತಿಯಲ್ಲಿ 500 ಹೊಯ್ಸಳ ಹಾಗೂ 300 ಚೀತಾ ಸೇರಿ ಒಟ್ಟು 800 ವಾಹನಗಳಲ್ಲಿ ಪೊಲೀಸರು ಗಸ್ತು ತಿರುಗಲಿದ್ದಾರೆ. ಅಹಿತಕರ ಘಟನೆಗಳು ಸಂಭವಿಸದರೆ ತಕ್ಷಣವೇ ಪೊಲೀಸರ ಸ್ಪಂದಿಸಲಿದ್ದಾರೆ.

ಫ್ಲೈಓರ್, ಎಂಜಿ ರಸ್ತೆ ಪ್ರವೇಶ ನಿಷೇಧ
ನಗರದ ಎಲ್ಲಾ ಮೇಲ್ಸೇತುವೆಗಳು ಹಾಗೂ ಎಂಜಿ ರಸ್ತೆ ವ್ಯಾಪ್ತಿ ಡಿಸೆಂಬರ್ 31ರ ಮಧ್ಯಾಹ್ನ 3ರಿಂದ ಜನವರಿ 1ರ ಬೆಳಗ್ಗೆ 6ರವರೆಗೆ ವಾಹನ ಸಂಚಾರವನ್ನು ನಿಷೇಧಿಸಲಾಗುತ್ತದೆ. ಸಂಭ್ರಮಾಚರಣೆ ಮತ್ತಿನಲ್ಲಿ ಕೆಲವರು ಮದ್ಯ ಸೇವಿಸಿ ವಾಹನ ಚಲಾಯಿಸುತ್ತಾರೆ. ಇದರಿಂದ ಮೇಲ್ಸೇತುವೆಗಳಲ್ಲಿ ಅಪಘಾತಕ್ಕೂ ಕಾರಣವಾಗಲಿದೆ. ಇನ್ನು ಕೆಲವು ಕಿಡಿಗೇಡಿಗಳು ಆಚರಣೆ ನೆಪದಲ್ಲಿ ಪಾನಮತ್ತರಾಗಿ ವಾಹನಗಳನ್ನು ಅಡ್ಡಾದಿಡ್ಡಿ ಚಲಾಯಿಸಿ ನಾಗರಿಕರಿಗೆ ತೊಂದರೆ ಕೊಡುವ ಸಾಧ್ಯತೆಗಳಿವೆ.

ಎಂಜಿರಸ್ತೆಯಲ್ಲಿ, ಬ್ರಿಗೇಡ್ ರಸ್ತೆಯಲ್ಲಿ ಪೊಲೀಸರ ಸಂಖ್ಯೆ
ಸಂಭ್ರಮಾಚರಣೆ ಕೇಂದ್ರ ಬಿಂದುವಾದ ಎಂಜಿ ರಸ್ತೆ, ಬ್ರಿಗೆಡ್ ಹಾಗೂ ಚರ್ಚ್ ಸ್ಟ್ರೀಟ್ಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟು, ಪಶ್ಚಿಮ ವಿಭಾಗದ ಹೆಚ್ಚುವರಿ ಆಯುಕ್ತ ಬಿಕೆಪಿ ಸಿಂಗ್ ನೇತೃತ್ವದಲ್ಲಿ 500 ಮಹಿಳಾ ಸಿಬ್ಬಂದಿ ಸೇರಿ 2 ಸಾವಿರ ಪೊಲೀಸರನ್ನು ನಿಯೋಜನೆಗೊಳ್ಳಲಿದ್ದಾರೆ. 300ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಸಲಾಗುತ್ತದೆ.

ನಗರಾದ್ಯಂತ ಪೊಲೀಸ್ ಬಂದೋಬಸ್ತ್
ಡಿಸೆಂಬರ್ 31ರಂದು ರಾತ್ರಿ ಕಾನ್ಸ್ಟೇಬಲ್ ಗಳೂ ಸೇರಿದಂತೆ ನಾಲ್ವರು ಹೆಚ್ಚುವರಿ ಆಯಕ್ತರು, 19 ಡಿಸಿಪಿಗಳು ಸೇರಿದಂತೆ ಸುಮಾರು 15 ಸಾವಿರಕ್ಕೂ ಅಧಿಕ ಪೊಲೀಸರನ್ನು ನೇಮಿಸಲಾಗುತ್ತಿದೆ. ಹಾಗೆಯೇ ನಗರ ಮತ್ತು ರಾಜ್ಯ ಸಶಸ್ತ್ರ ಮೀಸಲು ಪಡೆಗಳು ಸಹ ಬಳಕೆಯಾಗಲಿವೆ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು?












Click it and Unblock the Notifications