ನಮ್ಮ ಮೆಟ್ರೋ ನಿಲ್ದಾಣದಲ್ಲಿ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡುವಂತಿಲ್ಲ
ಬೆಂಗಳೂರು, ಸೆಪ್ಟೆಂಬರ್ 04: ಕೇಂದ್ರ ಗೃಹ ಇಲಾಖೆ ಸೆಪ್ಟೆಂಬರ್ 7 ರಿಂದ ಮೆಟ್ರೋ ಸಂಚಾರ ಆರಂಭಿಸಲು ಅನುಮತಿ ನೀಡಿದೆ. ಬೆಂಗಳೂರು ನಗರದಲ್ಲಿ ಮೆಟ್ರೋ ರೈಲು ಓಡಿಸಲು ಬಿಎಂಆರ್ಸಿಎಲ್ ಸಿದ್ಧತೆಗಳನ್ನು ಮಾಡಿಕೊಂಡಿದೆ.
Recommended Video
ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಕಾರ್ಡ್ ರಿಚಾರ್ಜ್ ಮಾಡಿಸಲು ಇದ್ದ ಸೌಲಭ್ಯವನ್ನು ಬಿಎಂಆರ್ಸಿಎಲ್ ರದ್ದುಗೊಳಿಸಿದೆ. ಕಾರ್ಡ್ ರಿಚಾರ್ಜ್ ಮಾಡಲು ಅನುಕೂಲವಾಗುವಂತೆ ಅಪ್ಲಿಕೇಶನ್ ಅನ್ನು ಸೆಪ್ಟೆಂಬರ್ 7ರಂದು ಬಿಡುಗಡೆ ಮಾಡಲಾಗುತ್ತದೆ.
ಮೆಟ್ರೋ ಪ್ರಯಾಣಿಕರು ನಿಲ್ದಾಣ ತಲುಪುವ ಒಂದು ಗಂಟೆ ಮೊದಲು ನಮ್ಮ ಮೆಟ್ರೋ ಮೊಬೈಲ್ ಅಪ್ಲಿಕೇಶನ್ ಅಥವ ಬಿಎಂಆರ್ಸಿಎಲ್ ವೆಬ್ಸೈಟ್ಗೆ ನೀಡುವ ಮೂಲಕ ಕಾರ್ಡ್ ರಿಚಾರ್ಜ್ ಮಾಡಿಕೊಳ್ಳಬಹುದು.

ಸ್ಮಾರ್ಟ್ ಕಾರ್ಡ್ ಇಲ್ಲದ ಪ್ರಯಾಣಿಕರು ನಿಲ್ದಾಣದಲ್ಲಿ ಕಾರ್ಡ್ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಆದರೆ, ಕ್ಯಾಶ್ ಲೆಸ್ ವಿಧಾನದಲ್ಲಿ ಕಾರ್ಡ್ ಪಡೆಯಬೇಕು. ಪೇಟಿಯಂ, ಯುಪಿಐ ಮೂಲಕ ಹಣ ಪಾವತಿ ಮಾಡಬಹುದು.
ಪ್ರವೇಶ ಮತ್ತು ನಿರ್ಗಮನ ಗೇಟ್ನಲ್ಲಿ ಕಾರ್ಡ್ ತೋರಿಸಬೇಕಿಲ್ಲ. ಗೇಟ್ ಬಳಿ ಇದಕ್ಕಾಗಿಯೇ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಟೋಕನ್ ನೀಡುವ ಪ್ರಕ್ರಿಯೆ ಸದ್ಯಕ್ಕೆ ಇರುವುದಿಲ್ಲ. ಕಾರ್ಡ್ ಇದ್ದರೆ ಮಾತ್ರ ಸಂಚಾರ ನಡೆಸಬಹುದು.
ಸೆಪ್ಟೆಂಬರ್ 7ರಂದು ಮೈಸೂರು ರಸ್ತೆ-ಬೈಯಪ್ಪನಹಳ್ಳಿ ಮಾರ್ಗದಲ್ಲಿ ಮಾತ್ರ ರೈಲು ಓಡಲಿದೆ. ನಾಗಸಂದ್ರ-ಯೆಲಚೇನಹಳ್ಳಿ ಹಸಿರು ಮಾರ್ಗದಲ್ಲಿ ಸೆಪ್ಟೆಂಬರ್ 9ರಿಂದ ರೈಲು ಸಂಚಾರ ನಡೆಸಲಿದೆ ಎಂದು ಬಿಎಂಆರ್ಸಿಎಲ್ ಹೇಳಿದೆ.
-
Namma Metro: ಹಳದಿ ಮಾರ್ಗಕ್ಕೆ ಶೀಘ್ರವೇ ಮತ್ತೆರಡು ಹೊಸ ಮೆಟ್ರೋ ಸೇರ್ಪಡೆ: 5 ನಿಮಿಷಕ್ಕೊಮ್ಮೆ ಸಂಚಾರ -
High Speed Rail: ಬೆಂಗಳೂರು ಸೇರಿ 3 ಹೈಸ್ಪೀಡ್ ರೈಲು ಕಾರಿಡಾರ್ ಡಿಪಿಆರ್ 2027ಕ್ಕೆ ಪೂರ್ಣ, ವಿವರ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications