ಬೆಂಗಳೂರಿನ ಸಂಚಾರ ಸಮಸ್ಯೆ; ಸುಧಾಮೂರ್ತಿ ಹೇಳಿದ್ದೇನು?
ಬೆಂಳೂರು ಜೂ.27; "ಬೆಂಗಳೂರಿಗೆ ಐಟಿ ಉದ್ದಿಮೆಗಳು ಬಾರದಿದ್ದರೆ ನಗರದಲ್ಲಿ ನಿತ್ಯ ಈ ಮಟ್ಟಿನ ಸಂಚಾರ ದಟ್ಟಣೆ ಸಮಸ್ಯೆ ಉಂಟಾಗುತ್ತಿರಲಿಲ್ಲ" ಎಂದು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾ ಮೂರ್ತಿ ಹೇಳಿದರು.
ಸೋಮವಾರ ಬೆಂಗಳೂರು ನಗರದಲ್ಲಿ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಪರವಾಗಿ 'ಕೆಂಪೇಗೌಡ ಅಂತಾರಾಷ್ಟ್ರೀಯ' ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, "ಬೆಂಗಳೂರಿಗೆ ಐಟಿ ಕಂಪನಿಗಳು ಬಾರದಿದ್ದರೆ ನಗರದಲ್ಲಿ ಇಷ್ಟೊಂದು ಸಂಚಾರ ಸಮಸ್ಯೆ ಇರುತ್ತಿರಲಿಲ್ಲ" ಎಂದರು.
"ಬೆಂಗಳೂರು ಐಟಿ ಹಬ್ ಆಗಿ ಬೆಳೆದಿದೆ. ಇದರಿಂದ ನಮ್ಮ ಮಕ್ಕಳಿಗೆ ಸ್ವಂತ ರಾಜ್ಯ, ಊರಿನಲ್ಲೇ ಕೆಲಸ ಸಿಕ್ಕಿದೆ. ನಮ್ಮ ಮಕ್ಕಳು ನಮ್ಮ ಜತೆಯಲ್ಲೇ ಇದ್ದಾರೆ. ಇಲ್ಲದಿದ್ದರೆ ಬೇರೆ ರಾಜ್ಯ ಇಲ್ಲವೇ ವಿದೇಶಗಳಿಗೆ ಕೆಲಸ ಅರಸಿ ಹೋಗಬೇಕಿತ್ತು" ಎಂದು ಹೇಳಿದರು.

"ಈಗ ಬೆಂಗಳೂರಿನಲ್ಲೇ ಕೆಲಸ ಪಡೆದ ನಮ್ಮ ಮಕ್ಕಳು ಕನ್ನಡದ ಹುಡುಗ-ಹುಡುಗಿಯರನ್ನೇ ಮದುವೆ ಆಗುತ್ತಿದ್ದಾರೆ" ಎಂದು ಸುಧಾಮೂರ್ತಿ ಬೆಂಗಳೂರಿನ ಐಟಿ ಉದ್ಯಮದ ಬೆಳವಣಿಗೆ ಕುರಿತು ವಿವರಿಸಿದರು.
ಹುಬ್ಬಳ್ಳಿ ಅಭಿವೃದ್ಧಿಗೆ ಮನವಿ; "ರಾಜ್ಯ ರಾಜಧಾನಿಯಲ್ಲಿ ಐಟಿ ಉದ್ಯಮ ಬೆಳೆಯಲು ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ನೀಡಿ ಕೊಡುಗೆ ಮರೆಯುವಂತಿಲ್ಲ. ಬೆಂಗಳೂರಿನಲ್ಲಿ ಎಲ್ಲ ಕೈಗಾರಿಕೆ, ಕಾರ್ಖಾನೆ, ಐಟಿ ಕಂಪನಿಗಳಿಂದ ತುಂಬಿದೆ. ಅಭಿವೃದ್ಧಿ ಹೊಂದಿದೆ. ಇಲ್ಲಿಯೇ ಹೆಚ್ಚು ಉದ್ಯೋಗವಕಾಶ ಇದೆ. ಇದೇ ರೀತಿ ಉತ್ತರ ಕರ್ನಾಟಕ ಭಾಗದ ಹುಬ್ಬಳ್ಳಿಯಲ್ಲಿ ಸಹ ಅಭಿವೃದ್ಧಿ ಆಗಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಹುಬ್ಬಳ್ಳಿ ಆಗಲಿ" ಎಂದು ಅವರು ಮನವಿ ಮಾಡಿದರು.

ಕೆಂಪೇಗೌಡರ ಕೊಡುಗೆ ಅಪಾರ; "ಐಟಿಸಿಟಿ ಎಂದೇ ಖ್ಯಾತಿ ಪಡೆದ ಬೆಂಗಳೂರನ್ನು ನಾಡಪ್ರಭು ಕೆಂಪೇಗೌಡರು ದೂರದೃಷ್ಟಿ ಇಟ್ಟುಕೊಂಡೇ ನಿರ್ಮಿಸಿದ್ದರು. ಪರಿಣಾಮವಾಗಿ ಇಂದು ಬೆಂಗಳೂರು ಅಂತಾರಾಷ್ಟ್ರೀಯ ನಗರವಾಗಿ ಬೆಳೆದಿದೆ. ಇಂತಹ ಬೃಹತ್ ನಗರದಲ್ಲಿ ಐಟಿ ಕಂಪನಿಗಳು ನೆಲೆಯೂರಿದ್ದರಿಂದ ಸಾಕಷ್ಟು ಜನರಿಗೆ ಕೆಲಸ ಸಿಕ್ಕಿದೆ" ಎಂದರು.
"ನಗರ ಇಷ್ಟೊಂದು ದೊಡ್ಡಮಟ್ಟದಲ್ಲಿ ಬೆಳೆಯಲು ಅನೇಕ ಮಹನೀಯರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ವಿಧಾನಸೌಧವನ್ನು ಕೆಂಗಲ್ ಹನುಮಂತಯ್ಯ ನಿರ್ಮಿಸಿದರು. ಅದೇ ರೀತಿ ಬೆಂಗಳುರು ಅಭಿವೃದ್ಧಿಯಾಗಲು ಅನೇಕ ಮುಖ್ಯಮಂತ್ರಿಗಳು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ದೇಶದಲ್ಲಿ ಕೆಂಪೇಗೌಡರಂತಹ ಧೀಮಂತರ ಅನೇಕರು ಹುಟ್ಟಿಕೊಳ್ಳಲಿ" ಎಂದು ಹೇಳಿದರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು












Click it and Unblock the Notifications