ಬೆಂಗಳೂರು : ಜೂನ್ ನಲ್ಲಿ ನೀರಿನ ದರ ಏರಿಕೆ ಇಲ್ಲ
ಬೆಂಗಳೂರು, ಮೇ 29 : ಜೂನ್ ನಿಂದ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡುವ ಜಲಮಂಡಳಿ ನಿರ್ಧಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿಲ್ಲ. ಅನಧಿಕೃತ ನೀರಿನ ಸಂಪರ್ಕ, ನೀರಿನ ಪೋಲು ಮುಂತಾದವುಗಳನ್ನು ತಡೆಗಟ್ಟೆ ನಂತರ ನೀರಿನ ದರ ಹೆಚ್ಚಳದ ಕುರಿತು ಚಿಂತನೆ ನಡೆಸುವಂತೆ ಸಿಎಂ ಜಲಮಂಡಳಿಗೆ ಸೂಚನೆ ನೀಡಿದ್ದಾರೆ.
ಮೇ 14ರಂದು ಅಧಿಕಾರಿಗಳ ಸಭೆ ನಡೆಸಿದ್ದ ಬೆಂಗಳೂರು ಜಲಮಂಡಳಿ ನೀರಿನ ದರವನ್ನು ಪರಿಷ್ಕರಣೆ ಮಾಡಿತ್ತು. ಆದರೆ, ಸರ್ಕಾರದ ಅನುಮತಿ ಪಡೆದು ಜೂನ್ ತಿಂಗಳಿನಿಂದ ನೂತನ ದರ ಜಾರಿಗೊಳಿಸುವುದಾಗಿ ಹೇಳಿತ್ತು. ಸದ್ಯ, ಸಿಎಂ ಸಿದ್ದರಾಮಯ್ಯ ದರ ಏರಿಕೆಗೆ ಒಪ್ಪಿಗೆ ನೀಡಿಲ್ಲ. ಆದ್ದರಿಂದ ಬೆಂಗಳೂರಿಗರು ಸ್ಪಲ್ಪ ನಿಟ್ಟುಸಿರು ಬಿಟ್ಟಿದ್ದಾರೆ.

ಮೊದಲು ಅನಧಿಕೃತ ನೀರಿನ ಸಂಪರ್ಕವನ್ನು ಪತ್ತೆ ಹಚ್ಚಿ, ನೀರು ಪೋಲಾಗುವುದನ್ನು ತಡೆಗಟ್ಟಿ ನಂತರ ಬೆಲೆ ಏರಿಕೆ ಕುರಿತು ತೀರ್ಮಾನ ಕೈಗೊಳ್ಳಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆದ್ದರಿಂದ ಜೂನ್ 1ರಿಂದ ಜಲಮಂಡಳಿ ವ್ಯಾಪ್ತಿಯಲ್ಲಿ ನೀರಿನ ದರ ಏರಿಕೆಯಾಗುವುದಿಲ್ಲ. [ನೀರಿನ ದರ ಎಷ್ಟು ಹೆಚ್ಚಾಗಿದೆ?]
ವಿದ್ಯುತ್ ದರ ಪದೇಪದೆ ಏರಿಕೆಯಾಗುತ್ತಿದ್ದರೂ 9 ವರ್ಷಗಳಿಂದ ನೀರಿನ ದರ ಹೆಚ್ಚಳವಾಗಿಲ್ಲ, ಜಲಮಂಡಳಿ ನಡೆಸುತ್ತಿರುವ ಕಾಮಗಾರಿಗಳಿಗೆ ಅನುದಾನದ ಕೊರತೆ ಇದೆ ಮುಂತಾದ ನೆಪಗಳನ್ನು ಮುಂದಿಟ್ಟುಕೊಂಡು ಜಲಮಂಡಳಿ ನೀರಿನ ದರ ಏರಿಕೆ ಮಾಡಿತ್ತು. ದರ ಏರಿಕೆಯಿಂದ ಹೆಚ್ಚಿನ ಆದಾಯ ಪಡೆಯುವ ಉತ್ಸಾಹದಲ್ಲಿತ್ತು. ಆದರೆ, ಸಿಎಂ ನಿರ್ಧಾರದಿಂದ ಇದಕ್ಕೆ ತಡೆ ಬಿದ್ದಿದೆ.
ವಿಶೇಷ ಕಾರ್ಯಾಚರಣೆ : ಅನಧಿಕೃತವಾಗಿ ನೀರು ಪಡೆಯುತ್ತಿರುವವರು ಮೇ 31ರೊಳಗೆ ಅಧಿಕೃತ ಸಂಪರ್ಕಗಳನ್ನು ಪಡೆಯಬೇಕು ಎಂದು ಜಲಮಂಡಳಿ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಜೂ.2ರಿಂದ ಹೊರವಲಯದಲ್ಲಿನ ಅನಧಿಕೃತ ಸಂಪರ್ಕಗಳನ್ನು ತಡೆಗಟ್ಟಲು ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಇನ್ನು ಮುಖ್ಯಮಂತ್ರಿಗಳು ಸೂಚಿಸಿರುವ ನೀರಿನ ಪೋಲು ತಡೆಗಟ್ಟುವಿಕೆ ಮುಂತಾದ ವಿಚಾರಗಳ ಕುರಿತಂತೆ ಜಲಮಂಡಳಿ ಅಧಿಕಾರಿಗಳು ಸಭೆ ನಡೆಲಿದ್ದು, ಕಾರ್ಯ ಯೋಜನೆ ತಯಾರಿಸಲಿದ್ದಾರೆ. ಇವುಗಳು ಮುಗಿದ ಬಳಿಕ ನೀರಿನ ದರ ಏರಿಕೆ ಕುರಿತು ಗಮನಹರಿಸಬಹುದು.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications