ನೀರು ಬಿಡಲು ಸಾಧ್ಯವಿಲ್ಲ: ತ. ನಾಡು ನಿಯೋಗಕ್ಕೆ ರಾಜ್ಯ ಸರ್ಕಾರ ಸ್ಪಷ್ಟನೆ
ವಿಧಾನಸೌಧದಲ್ಲಿ ಏಪ್ರಿಲ್ 1ರಂದು ನಡೆದ ತಮಿಳುನಾಡು ಅಧಿಕಾರಿಗಳ ಜತೆಗಿನ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿ ಸುಭಾಷ್ ಚಂದ್ರ ಕುಂಟಿಯಾ ವಿವರಣೆ.
ಚೆನ್ನೈ, ಏಪ್ರಿಲ್ 1: ಕರ್ನಾಟಕದಲ್ಲಿ ಭೀಕರ ಬರಗಾಲವಿದ್ದು, ಸದ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಆಗುವುದಿಲ್ಲ ಎಂದು ಕರ್ನಾಟಕ ಸರ್ಕಾರ, ತಮಿಳುನಾಡು ಸರ್ಕಾರಕ್ಕೆ ಸ್ಪಷ್ಟಪಡಿಸಿದೆ.
ತಮಿಳುನಾಡು ಸರ್ಕಾರದ ನಿಯೋಗದೊಂದಿಗೆ ವಿಧಾನಸೌಧದಲ್ಲಿ ನಡೆದ ಮಾತುಕತೆ ನಡೆಯ ನಂತರ ರಾಜ್ಯ ಸರ್ಕಾರದ ಕಾರ್ಯದರ್ಶಿಯಾದ ಸುಭಾಷ್ ಚಂದ್ರ ಕುಂಟಿಯಾ ಅವರು, ಸುದ್ದಿಗೋಷ್ಠಿ ನಡೆಸಿ ಈ ವಿಚಾರ ತಿಳಿಸಿದರು.

ಕಾವೇರಿ ನೀರಿಗಾಗಿ, ತಮಿಳುನಾಡು ಮುಖ್ಯ ಕಾರ್ಯದರ್ಶಿ ಸೇರಿದಂತೆ ನಾಲ್ವರು ಅಧಿಕಾರಿಗಳ ನಿಯೋಗವೊಂದು ಬೆಂಗಳೂರಿಗೆ ಶುಕ್ರವಾರ (ಏ. 1) ಆಗಮಿಸಿತ್ತು.
ಸುದ್ದಿಗೋಷ್ಠಿಯಲ್ಲಿ ಸಭೆಯ ವಿವರಗಳನ್ನು ನೀಡಿದ ಕುಂಟಿಯಾ, ''ಮಾತುಕತೆಯ ಮೂಲಕ ಕಾವೇರಿ ನದಿ ನೀರು ಸಮಸ್ಯೆ ಬಗೆಹರಿಸಿಕೊಳ್ಳಲು ತಮಿಳುನಾಡು ಅಧಿಕಾರಿಗಳು ರಾಜ್ಯಕ್ಕೆ ಆಗಮಿಸಿದ್ದು ಸ್ವಾಗತಾರ್ಹ ಬೆಳವಣಿಗೆ. ಆದರೆ, ನಮ್ಮ ರಾಜ್ಯದಲ್ಲಿ ಬರಗಾಲ ಇರುವುದರಿಂದ ಅಣೆಕಟ್ಟುಗಳಲ್ಲಿ ನೀರಿಲ್ಲ ಎಂಬುದನ್ನು ತಮಿಳುನಾಡು ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ'' ಎಂದು ಹೇಳಿದರು.
''ಈಗಾಗಲೇ ಬಿರು ಬೇಸಿಗೆ ಆರಂಭವಾಗಿರುವುದರಿಂದ ತಮಿಳುನಾಡಿಗೆ ನೀರು ಬಿಡಲು ಆಗುವುದಿಲ್ಲ. ಈಗಾಗಲೇ ಕಾವೇರಿ ನದಿಗೆ ಕಟ್ಟಲಾಗಿರುವ ಅಣೆಕಟ್ಟುಗಳು ತಳಮಟ್ಟ ಮುಟ್ಟಿದ್ದು, ಭೀಕರ ತಲೆದೋರಿದೆ. ತಮಿಳುನಾಡಿನಲ್ಲೂ ನೀರಿನ ಬರವಿದೆ ಎಂಬುದು ನಮಗೆ ತಿಳಿದಿದೆ. ಒಂದೊಮ್ಮೆ ಚೆನ್ನಾಗಿ ಮಳೆ ಬಂದು ಅಣೆಕಟ್ಟಿನಲ್ಲಿ ನೀರು ಸಂಗ್ರಹವಾದರೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಾಗುತ್ತದೆ'' ಎಂದು ಹೇಳಿರುವುದಾಗಿ ಕುಂಟಿಯಾ ವಿವರಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications