ಪತ್ರಕರ್ತ ರವಿ ಬೆಳಗೆರೆ ಶಿಕ್ಷೆ ಹಿಂಪಡೆದಿಲ್ಲ: ಸ್ಪೀಕರ್ ಕೋಳಿವಾಡ
ಬೆಂಗಳೂರು, ಜೂನ್ 29 : ಪತ್ರಕರ್ತ-ಹಾಯ್ ಬೆಂಗಳೂರ್ ಸಂಪಾದಕ ರವಿ ಬೆಳಗೆರೆ ಅವರಿಗೆ ಸದನ ಸಮಿತಿಯಿಂದ ವಿಧಿಸಿದ್ದ ಶಿಕ್ಷೆಯನ್ನು ವಾಪಸ್ ಪಡೆದಿಲ್ಲ ಎಂದು ವಿಧಾನಸಭಾ ಅಧ್ಯಕ್ಷ ಕೆ.ಬಿ.ಕೋಳಿವಾಡ ಒನ್ ಇಂಡಿಯಾ ಕನ್ನಡಕ್ಕೆ ತಿಳಿಸಿದ್ದಾರೆ. ಈ ರೀತಿ ನಾನು ವಾಪಸ್ ಪಡೆಯುವುದಕ್ಕೆ ಸಾಧ್ಯವಿಲ್ಲ ಎಂದು ಕೂಡ ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆ ಅಧಿವೇಶನ ಕರೆದು, ಎಲ್ಲ ಪಕ್ಷದವರ ಒಪ್ಪಿಗೆ ಪಡೆದ ನಂತರವಷ್ಟೇ ಶಿಕ್ಷೆ ಹಿಂಪಡೆಯುವುದಕ್ಕೆ ಸಾಧ್ಯ. ಅದಕ್ಕಾಗಿಯೇ ನಿಯಮಾವಳಿಗಳು ಇವೆ. ಅದನ್ನು ಪಾಲಿಸಬೇಕು. ಹಾಗೆ ಏಕಾಏಕಿ ನಿರ್ಧಾರ ಸಾಧ್ಯವಿಲ್ಲ. ಮಾಧ್ಯಮಗಳಲ್ಲಿ ಈ ಬಗ್ಗೆ ವರದಿ ಆಗಿದ್ದರೆ ಅದು ತಪ್ಪು ಅಥವಾ ಸುಳ್ಳು. ನಾನು ಅಂಥ ಯಾವ ಆದೇಶವನ್ನು ಮಾಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಇನ್ನು ಈ ಶಿಕ್ಷೆ ಆದೇಶವನ್ನು ಹಿಂಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ ಎಂಬ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ ಎಂದು ಕೂಡ ಅವರು ಹೇಳಿದ್ದಾರೆ.
ಮಾನಹಾನಿ ಕಾರಕ ವರದಿ ಪ್ರಕಟಿಸಿದ್ದಾರೆ ಎಂಬ ಕಾರಣಕ್ಕೆ ಹಾಯ್ ಬೆಂಗಳೂರ್ ಸಂಪಾದಕರಾದ ರವಿ ಬೆಳಗೆರೆ ಹಾಗೂ ಯಲಹಂಕ ವಾಯ್ಸ್ ಪತ್ರಿಕೆಯ ಅನಿಲ್ ರಾಜ್ ಅವರಿಗೆ ಸದನ ಸಮಿತಿಯ ಶಿಫಾರಸಿನ ಮೇಲೆ ವಿಧಿಸಿದ್ದ ಒಂದು ವರ್ಷ ಜೈಲು ಹಾಗೂ ಹತ್ತು ಸಾವಿರ ರುಪಾಯಿ ದಂಡ ಶಿಕ್ಷೆಯನ್ನು ಹಿಂಪಡೆಯಲಾಗಿದೆ ಎಂದು ವಿವಿಧ ಮಾಧ್ಯಮಗಳಲ್ಲಿ ಆದ ವರದಿ ಆಧರಿಸಿ ಒನ್ ಇಂಡಿಯಾ ಕನ್ನಡದಲ್ಲಿ ವರದಿ ಪ್ರಕಟವಾಗಿತ್ತು.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications