Get Updates
Get notified of breaking news, exclusive insights, and must-see stories!

ಬೆಂಕಿ ಹೊತ್ತಿ ಚೀರಾಡುತ್ತಿದ್ದರೂ ಜನರು ನೆರವಿಗೆ ಬರಲಿಲ್ಲ

ಬೆಂಗಳೂರು, ಏಪ್ರಿಲ್ 11 : ಬೆಂಗಳೂರಿನಲ್ಲಿ ಮಾನವೀಯತೆ ಮರೆತ ಪ್ರಸಂಗ ಮತ್ತೊಮ್ಮೆ ನಡೆದಿದೆ. ಬೆಂಕಿ ಹೊತ್ತಿಕೊಂಡ ವ್ಯಕ್ತಿಯೊಬ್ಬ 15 ನಿಮಿಷಗಳ ಕಾಲ ರಸ್ತೆಯಲ್ಲಿ ಸಹಾಯಕ್ಕಾಗಿ ಅಂಗಲಾಚಿದರೂ, ಜನರು ಮೂಕ ಪ್ರೇಕ್ಷಕರಾಗಿದ್ದರು.

ಹೊಸೂರು ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಆರ್‌ಇಝಡ್ ಕಂಪನಿಯ ನೌಕರ ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಡುವ ಸಂದರ್ಭದಲ್ಲಿ ಆತನಿಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಅವನು ಜನರ ಸಹಾಯ ಕೇಳಿದರೂ ಆತನಿಗೆ ನೆರವು ಸಿಗಲಿಲ್ಲ. [ಮುಖ್ಯಮಂತ್ರಿ ಸಾಂತ್ವನ-'ಹರೀಶ್' ಯೋಜನೆ ಬಗ್ಗೆ ತಿಳಿಯಿರಿ]

bengaluru

ಸುಮಾರು 15 ನಿಮಿಷ ರಸ್ತೆ ಪಕ್ಕದಲ್ಲಿ ಸಹಾಯಕ್ಕಾಗಿ ವ್ಯಕ್ತ ಕೂಗಿಕೊಳ್ಳುತ್ತಿದ್ದರೂ ಜನರು ಕೈ ಕಟ್ಟಿ ನಿಂತಿದ್ದರು. ನಂತರ ಪಕ್ಕದ ಹೋಟೆಲ್‌ನ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲು ಪ್ರಯತ್ನ ನಡೆಸಿದರೂ, ಆಟೋ ಚಾಲಕರು ಕರೆದುಕೊಂಡು ಹೋಗಲು ನಿರಾಕರಿಸಿದರು.

ಕೊನೆಗೆ ಹರಸಾಹಸ ಪಟ್ಟು ಆತನನ್ನು ರಕ್ಷಣೆ ಮಾಡಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹರೀಶ್ ಮೃತಪಟ್ಟಿದ್ದರು : 2016ರ ಫೆ.16ರಂದು ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 4ರ ತಿಪ್ಪಗೊಂಡನಹಳ್ಳಿ ಬಳಿ ನಡೆದ ಅಪಘಾತದಲ್ಲಿ ಎನ್.ಹರೀಶ್ ಎಂಬ ಯುವಕನ ದೇಹ ಎರಡು ಭಾಗವಾಗಿತ್ತು. ಸುಮಾರು 8 ನಿಮಿಷಗಳ ಕಾಲ ರಸ್ತೆಯಲ್ಲಿಯೇ ಒದ್ದಾಡಿ ಅವರು ಮೃತಪಟ್ಟಿದ್ದರು. ಆಗಲೂ ಜನರು ಅವರ ಸಹಾಯಕ್ಕೆ ಬಂದಿರಲಿಲ್ಲ. [ದೇಹ ಎರಡು ತುಂಡಾದರೂ ಕಣ್ಣು ದಾನ ಮಾಡಿದರು]

(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+