ನಮ್ಮ ತಂಟೆಗೆ ಬಂದರೆ ನಿಮ್ಮ ವಿಕೆಟ್ಗಳು ಬೀಳುತ್ತವೆ: ಬಿಜೆಪಿಗೆ ದಿನೇಶ್ ವಾರ್ನಿಂಗ್
ಬೆಂಗಳೂರು, ಸೆಪ್ಟೆಂಬರ್ 12: ಬಿಜೆಪಿ ಪಕ್ಷದ ಮುಖಂಡರು ನಮ್ಮ ಶಾಸಕರಿಗೆ ಆಮೀಷ ಒಡ್ಡುತ್ತಿದ್ದಾರೆ ಕೆಲವರಿಗೆ ಬೆದರಿಕೆಯನ್ನೂ ಹಾಕಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿಗೆ ಎಚ್ಚರಿಕೆ ನೀಡಿದ ಅವರು, ಬಿಜೆಪಿ ಇದೇ ರೀತಿಯ ಕುತಂತ್ರ ಮುಂದುವರೆಸಿದರೆ ಬಿಜೆಪಿಯ ವಿಕೆಟ್ ಉರುಳಲು ಪ್ರಾರಂಭವಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದರು.
ಆನಂದ್ ಸಿಂಗ್, ಪ್ರತಾಪ್ ಗೌಡ ಪಾಟೀಲ್, ನಾಗೇಂದ್ರ ಇನ್ನು ಕೆಲವು ಶಾಸಕರನ್ನು ಪಕ್ಕದಲ್ಲಿರಿಸಿಕೊಂಡೇ ಸುದ್ದಿಗೋಷ್ಠಿ ನಡೆಸಿದ ದಿನೇಶ್ ಗುಂಡೂರಾವ್ ಅವರು, ನಮ್ಮ ಯಾವೊಬ್ಬ ಶಾಸಕರೂ ಕೂಡ ಪಕ್ಷ ಬಿಡುತ್ತಿಲ್ಲ, ಮಾಧ್ಯಮಗಳಲ್ಲಿ ಸಹ ಊಹೆ ಆದರಿಸಿ ಕೆಲವು ಸುದ್ದಿಗಳು ಪ್ರಸಾರವಾಗುತ್ತಿವೆ ಎಂದರು.

ಬಿಜೆಪಿಯ ಕೆಲವು ಶಾಸಕರು ಈಗಾಗಲೇ ನಮ್ಮನ್ನು ಸಂಪರ್ಕಿಸಿದ್ದಾರೆ. ಐದು ಲೋಕಸಭೆ ಸದಸ್ಯರು ಸಹ ಕಾಂಗ್ರೆಸ್ಗೆ ಬರಲು ಉತ್ಸುಕರಾಗಿದ್ದಾರೆ. ಆದರೆ ಬಿಜೆಪಿಯಂತೆ ಕುತಂತ್ರದ ರಾಜಕಾರಣ ನಮಗೆ ಅವಶ್ಯಕತೆ ಇಲ್ಲದ ಕಾರಣ ಕಾಂಗ್ರೆಸ್ ಈ ವಿಷಯದಲ್ಲಿ ಮುಂದುವರೆಯುತ್ತಿಲ್ಲ ಎಂದರು.
ಬಿಜೆಪಿಯು ನಮ್ಮ ಶಾಸಕರ ಮನೆಗಳಿಗೆ ಹೋಗಿ, ಹಣದ ಆಮೀಷ ಒಡ್ಡುವ ಜೊತೆಗೆ, ಕೆಲವರಿಗೆ ಬೆದರಿಕೆಗಳನ್ನೂ ಹಾಕಿದೆ. ಇದು ಪ್ರಜಾಪ್ರಭುತ್ವಕ್ಕೆ ವಿರೋಧವಾಗಿದ್ದು, ಬಿಜೆಪಿಯು ತನ್ನ ಷಡ್ಯಂತ್ರವನ್ನು ಈ ಕೂಡಲೆ ನಿಲ್ಲಿಸಬೇಕು ಎಂದು ಅವರು ಮನವಿ ಮಾಡಿದರು.
ಕಾಂಗ್ರೆಸ್ನ ಎಲ್ಲ ಶಾಸಕರೂ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದು ಯಾವೊಬ್ಬ ಶಾಸಕರೂ ಸಹ ಪಕ್ಷ ಬಿಡುವ ಮಾತನ್ನು ಈವರೆಗೆ ಆಡಿಲ್ಲ. ಬೆಳಗಾವಿ ರಾಜಕೀಯ ಸಣ್ಣ ಗೊಂದಲದ ಹೊರತಾಗಿ ಇನ್ನೇನೂ ಅಲ್ಲ, ಅದು ಸಹ ಈಗ ಇತ್ಯರ್ಥವಾಗಿದ್ದು ಯಾವೊಬ್ಬ ಶಾಸಕರೂ ಸಹ ಪಕ್ಷ ಬಿಟ್ಟು ಹೋಗುತ್ತಿಲ್ಲ ಎಂದರು.
ಉತ್ತರ ಕರ್ನಾಟಕದ ಬಹುತೇಕ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಕರೆಸಿಕೊಳ್ಳಲಾಗುತ್ತಿದೆ. ಈ ಬಗ್ಗೆ ಸಹ ದಿನೇಶ್ ಗುಂಡೂರಾವ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?










Click it and Unblock the Notifications