Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್
Bengaluru Startup: ಕರ್ನಾಟಕ - ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ, ಮಹಾರಾಷ್ಟ್ರವೇ ನಿಜವಾದ ಸ್ಟಾರ್ಟ್ಅಪ್ ರಾಜಧಾನಿ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಹೇಳಿದ್ದಾರೆ. ಮಹಾರಾಷ್ಟ್ರ ನಿಜವಾದ ಸ್ಟಾರ್ಟ್ಅಪ್ ರಾಜಧಾನಿ; ಬೆಂಗಳೂರು ಅಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು ದೇಶದಲ್ಲಿಯೇ ಸ್ಟಾರ್ಟ್ ಅಪ್ ರಾಜಧಾನಿಯಾಗಿ ಮುನ್ನುಗ್ಗುತ್ತಿದೆ. ಬೆಂಗಳೂರು ಹಲವು ವಿಚಾರಗಳಲ್ಲಿ ಮುಂಚೂಣಿಯಲ್ಲಿದೆ. ಆದರೆ ಬೆಂಗಳೂರಿಗೆ ವಿವಿಧ ರಾಜ್ಯಗಳ ಪ್ರಮುಖ ನಗರಗಳಿಂದ ಭಾರೀ ಪೈಪೋಟಿ ಇದೆ. ಇದೀಗ ಬೆಂಗಳೂರು ಸ್ಟಾರ್ಟ್ ಅಪ್ ರಾಜಧಾನಿ ಆಗುವುದಕ್ಕೆ ಸಾಧ್ಯವೇ ಇಲ್ಲ. ಅದೇನಿದ್ದರೂ ಮಹಾರಾಷ್ಟ್ರ ಮಾತ್ರ ಎಂದು ದೇವೇಂದ್ರ ಫಡ್ನವೀಸ್ ಅವರು ಹೇಳಿದ್ದಾರೆ.

ಫೋರ್ಬ್ಸ್ ಇಂಡಿಯಾ ಲೀಡರ್ಶಿಪ್ ಅವಾರ್ಡ್ಸ್ 2026 ರಲ್ಲಿ ಮಾತನಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರವನ್ನು ಭಾರತದ ನಿಜವಾದ ಸ್ಟಾರ್ಟ್ಅಪ್ ರಾಜಧಾನಿ ಎಂದು ಹೇಳಿದದಾರೆ. ಸಂಪೂರ್ಣ ಸಂಖ್ಯೆಗಳು, ಹೂಡಿಕೆಗಳು ಮತ್ತು ಯುನಿಕಾರ್ನ್ ಎಣಿಕೆಯಲ್ಲಿ ಬೆಂಗಳೂರನ್ನು ಮೀರಿಸಿದ್ದು. ಭಾರತದ 1.5 GW ಕಾರ್ಯಾಚರಣಾ ಡೇಟಾ ಸೆಂಟರ್ ಸಾಮರ್ಥ್ಯದಲ್ಲಿ 1 GW ಗಿಂತ ಹೆಚ್ಚು ಸಾಮರ್ಥ್ಯವನ್ನು ಮಹಾರಾಷ್ಟ್ರ ಹೊಂದಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು ಮತ್ತು ಹೈದರಾಬಾದ್ ಸಾಂಪ್ರದಾಯಿಕವಾಗಿ ಪ್ರಮುಖ ಸ್ಟಾರ್ಟ್ಅಪ್ ಆಗಿವೆ. ಆದರೆ ಹೂಡಿಕೆ ಹಾಗೂ ಒಟ್ಟು ಸ್ಟಾರ್ಟ್ಅಪ್ಗಳ ಸಂಖ್ಯೆಯಲ್ಲಿ ಮಹಾರಾಷ್ಟ್ರ ಮುಂಚೂಣಿಯಲ್ಲಿದೆ. 1 GW ಗಿಂತ ಹೆಚ್ಚಿನ ಸಾಮರ್ಥ್ಯದೊಂದಿಗೆ ಭಾರತದ ಡೇಟಾ ಸೆಂಟರ್ ಹಬ್ ಆಗಿ ಮಹಾರಾಷ್ಟ್ರವು ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಿದೆ, ಇದು ದೃಢವಾದ ಡಿಜಿಟಲ್ ಮೂಲಸೌಕರ್ಯವನ್ನು ಸೂಚಿಸುತ್ತದೆ ಎನ್ನುವ ವಾದವೂ ಇದೆ.
Bengaluru Startup ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನವೀಸ್ ಹೇಳಿದ್ದೇನು
ಮಹಾರಾಷ್ಟ್ರಕ್ಕೆ ಯಾಕೆ ಕಂಪನಿಗಳು ಹೆಚ್ಚಾಗಿ ಬರಬೇಕು ಹಾಗೂ ಮಹಾರಾಷ್ಟ್ರ ಕಂಪನಿಗಳಿಗೆ ಏಕೆ ಸೂಕ್ತವಾಗಿದೆ ಎನ್ನುವ ಪ್ರಶ್ನೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಉತ್ತರಿಸಿದ್ದಾರೆ. ಈ ಹಿಂದೆ ಮಹಾರಾಷ್ಟ್ರ, ಗುಜರಾತ್ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಭಾರೀ ಪೈಪೋಟಿ ಇತ್ತು. ಆದರೆ ಈಗ ಕನಿಷ್ಠ 10 ರಾಜ್ಯಗಳ ನಡುವೆ ಭಾರೀ ಪೈಪೋಟಿ ಇದೆ. ಸ್ಪರ್ಧಾತ್ಮಕ ಫೆಡರಿಲಿಸಂ ಅನ್ನು ನಾವು ಸ್ವಾಗತ ಮಾಡುತ್ತೇವೆ.
At the Forbes India Leadership Awards CM Devendra Fadnavis spoke about the war like situation affecting global markets and how India is managing the fallout. He pointed out that the diversification of supply chains has been a game changer for the country. By not relying on a… pic.twitter.com/r7Z1Q9H0U9
— Prof cheems ॐ (@Prof_Cheems) March 25, 2026
ನಾವು ಸ್ಟಾರ್ಟ್ ಅಪ್ ಕ್ಯಾಪಿಟಲ್ ಇದ್ದೇವೆ. ನಮ್ಮಲ್ಲಿ ಅತ್ಯಂತ ಹೆಚ್ಚು ಸ್ಟಾರ್ಟ್ಅಪ್ಗಳಿವೆ. ನಾವು ಸಂಖ್ಯೆ ಹಾಗೂ ಹೂಡಿಕೆಯ ವಿಚಾರದಲ್ಲಿ ನಾವು ಸ್ಟಾರ್ಟ್ ಅಪ್ ರಾಜಧಾನಿ ಆಗಿದ್ದೇವೆ ಎಂದು ಅವರು ಹೇಳಿದ್ದಾರೆ.
-
Water: ಅನಂತರಪುರ ಜಿಲ್ಲೆಯ ಬರಡು ಭೂಮಿಯ ಯಶೋಗಾಥೆ: ಜಗದೀಶ್ ಕೊಪ್ಪ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Foundation of IT ಆಯ್ಕೆ ವೈರಲ್: ಭಾಷಾ ಸಮಾನತೆಗೆ ದಕ್ಷಿಣ ಭಾರತೀಯರ ಪ್ರಶ್ನೆ, ನಾರ್ಥಿ ಮಾರ್ಕ್ಸ್ ಕಾರ್ಡ್ Viral Post -
ಯುಗಾದಿ ಹಬ್ಬ - ಶಿವರಾತ್ರಿಯಂದು ನಾನು ಮಾಂಸ ತಿಂತಿನಿ, ಅದು ನನ್ನಿಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ -
Rashmika Mandanna: ರಶ್ಮಿಕಾ ಮಂದಣ್ಣ - ವಿಜಯ್ ದೇವರಕೊಂಡ ಕನಸಿನ ಹನಿಮೂನ್: ವಿಶೇಷ ವಿಡಿಯೋ ಹಂಚಿಕೊಂಡ ಜೋಡಿ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ











Click it and Unblock the Notifications