ಕರ್ನಾಟಕದಲ್ಲಿ ಬಿಜೆಪಿ ಸೋಲಿಸಲು ಜಿಗ್ನೇಶ್ ಸಂಕಲ್ಪ
Recommended Video

ಬೆಂಗಳೂರು, ಜನವರಿ 30: 'ಕರ್ನಾಟಕದಲ್ಲಿರುವ ಶೇ.20 ರಷ್ಟು ದಲಿತರಲ್ಲಿ 20 ಮತಗಳೂ ಬಿಜೆಪಿ ಪಾಲಾಗಬಾರದು' ಎಂದು ಗುಜರಾತ್ ನ ವಡ್ಗಾಮ್ ಶಾಸಕ ಜಿಗ್ನೇಶ್ ಮೆವಾನಿ ಹೇಳಿದ್ದಾರೆ.
ಪತ್ರಕರ್ತೆ ದಿ.ಗೌರಿ ಲಂಕೇಶ್ ಜನ್ಮದಿನದ ನಿಮಿತ್ತ ಜ.29 ರಂದು ಬೆಂಗಳೂರಿನಲ್ಲಿ ನಡೆದ 'ಗೌರಿದಿನ'ದಲ್ಲಿ ಭಾಗವಹಿಸಿದ್ದ ಜಿಗ್ನೇಶ್ ಮೆವಾನಿ ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸುವ ಸಂಕಲ್ಪ ಮಾಡಿದರು.
ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನು ಕೆಲವೇ ತಿಂಗಳುಗಳಲ್ಲಿ ನಡೆಯಲಿದೆ. ಸದ್ಯಕ್ಕೆ ಕರ್ನಾಟಕ್ಕೆ ಆಗಮಿಸುವ ಬೇರೆ ರಾಜ್ಯದ ಯಾವುದೇ ನಾಯಕರು ಆಡುವ ಮಾತು ಕರ್ನಾಟಕ ವಿಧಾನಸಭೆ ಚುನಾವಣೆಯನ್ನೇ ಕೇಂದ್ರೀಕರಿಸಿರುತ್ತದೆ ಎಂಬುದು ಅಚ್ಚರಿಯ ವಿಷಯವಲ್ಲ. ಹಾಗೆಯೇ ಜಿಗ್ನೇಶ್ ಮೆವಾನಿ ಅವರೂ ಮಾತನಾಡಿದ್ದಾರೆ!

ಸೈಂದ್ಧಾಂತಿಕ ರಾಜಿ
ಕೆವೊಮ್ಮೆ ನಾವು ಸೈದ್ಧಾಂತಿಕವಾಗಿ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ನಮ್ಮ ಸಿದ್ಧಾಂತಕ್ಕೇ ಯಾವಾಗಲೂ ಜೋತು ಬೀಳುವುದರಿಂದ ಪ್ರಜಾಪ್ರಭುತ್ವವನ್ನು ಉಳಿಸುವುದಕ್ಕೆ ಸಾದ್ಯವಿಲ್ಲ. ಪ್ರಜಾಪ್ರಭುತ್ವ ಉಳಿಸಲು ಬೇರೆ ಸಮಾನ ಮನಸ್ಕರೊಂದಿಗೆ ಹೊಂದಾಣಿಕೆ, ರಾಜಿ ಮಾಡಿಕೊಳ್ಳುವುದು ಅಗತ್ಯ ಎಂದು ಅವರು ಹೇಳಿದರು.

ದಲಿತ ಮತ ಬಿಜೆಪಿ ಪಾಲಾಗಬಾರದು!
ಕರ್ನಾಟಕದಲ್ಲಿ ಸುಮಾರು ಶೇ.20 ಪ್ರತಿಶತ ದಲಿತರಿದ್ದಾರೆ. ಅವುಗಳಲ್ಲಿ 20 ಮತಗಳೂ ಬಿಜೆಪಿ ಪಾಲಾಗಬಾರದು. ನಾನು ಏಪ್ರಿಲ್ ನಲ್ಲಿ ಎರಡು ವಾರ ಕರ್ನಾಟಕದಲ್ಲಿರುತ್ತೇನೆ. ಬಿಜೆಪಿಗೆ ಯಾರೂ ಮತ ಹಾಕದಂತೆ ಈ ಸಂದರ್ಭದಲ್ಲಿ ನಾನು ದಲಿತರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಅವರು ಬಿಜೆಪಿಯನ್ನು ಸೋಲಿಸುವ ಸಂಕಲ್ಪ ಮಾಡಿಕೊಂಡರು.

ದಲಿತ ನಾಯಕರಾಗಿ ಬೆಳೆದ ಮೆವಾನಿ
ಸದಾ ದಲಿತ ಪರ ನಾಯಕರಾಗಿ ಗುರುತಿಸಿಕೊಂಡ ಜಿಗ್ನೇಶ್ ಮೆವಾನಿ ವಕಿಲರೂ ಹೌದು. ಕಳೆದ ಡಿಸೆಂಬರ್ ನಲ್ಲಿ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ವಡ್ಗಾಮ್ ಕ್ಷೇತ್ರದಿಂದ ಸ್ವತಂತ್ರ್ಯ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತು, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ಬೆಂಬಲದೊಂದಿಗೆ ಗೆಲುವು ಸಾಧಿಸಿ ಶಾಸಕರಾಗಿದ್ದರು.

ಮುಂಬೈ ಗಲಭೆ ಹಿಂದೆ ಮೆವಾನಿ ಹೆಸರು!
ಜನವರಿ ಆರಂಭದಲ್ಲಿ ಮಹಾರಾಷೃದ ಪ್ರಮುಖ ನಗರಗಳಾದ ಪುಣೆ, ಥಾಣೆ, ಮುಂಬೈಗಳಲ್ಲಿ ನಡೆದ ಭೀಮಾ ಕೊರೆಗಾಂವ್ ಗಲಭೆಯಲ್ಲೂ ಜಿಗ್ನೇಶ್ ಮೆವಾನಿ ಹೆಸರು ಕೇಳಿಬಂದಿತ್ತು. ಮೆವಾನಿ ಅವರ ಪ್ರಚೋದನಾಕಾರಿ ಭಾಷಣವೇ ಈ ಗಲಭೆಗೆ ಕಾರಣ ಎಂದು ಅವರನ್ನು ಜರೆದು, ನಂತರ ಥಾಣೆಯಲ್ಲಿ ನಡೆಯಬೇಕಿದ್ದ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿತ್ತು.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications