ಮುನಿರತ್ನ ಪರ ಪ್ರಚಾರ; ದರ್ಶನ್ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು, ನವೆಂಬರ್ 01: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಟ ದರ್ಶನ್ ವಿರುದ್ಧ ಪ್ರಕರಣ ದಾಖಲು ಮಾಡಿದೆ. ರಾಜರಾಜೇಶ್ವರಿ ನಗರದಲ್ಲಿ ಚುನಾವಣಾ ಪ್ರಚಾರದ ವೇಳೆ ಕೋವಿಡ್ ನಿಯಮಗಳನ್ನು ಪಾಲಿಸಿಲ್ಲ ಎಂದು ಪ್ರಕರಣ ದಾಖಲಿಸಲಾಗಿದೆ.
ಭಾನುವಾರ ಆರ್. ಆರ್. ನಗರ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಈ ಕುರಿತು ಮಾಹಿತಿ ನೀಡಿದರು. "2005ರ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ದರ್ಶನ್ ಮತ್ತು ನಿಯಮ ಉಲ್ಲಂಘಿಸಿದ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ" ಎಂದು ಹೇಳಿದರು.
ಆರ್. ಆರ್. ನಗರ ಚುನಾವಣೆ; ಮುನಿರತ್ನ ಪರವಾಗಿ ದರ್ಶನ್ ರೋಡ್ ಶೋ
ಶುಕ್ರವಾರ ನಟ ದರ್ಶನ್ ಆರ್. ಆರ್. ನಗರ ವ್ಯಾಪ್ತಿಯ ಬಿ. ಕೆ. ನಗರ, ಜೆ. ಪಿ. ಪಾರ್ಕ್, ಯಶವಂತಪುರ ಮುಂತಾದ ಪ್ರದೇಶಗಳಲ್ಲಿ ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಪ್ರಚಾರ ನಡೆಸಿದ್ದರು.
ಕನಕಪುರದವರಿಂದ ಆರ್. ಆರ್. ನಗರದಲ್ಲಿ ಹಣ ಹಂಚಿಕೆ
ಈ ಪ್ರಚಾರದ ಚಿತ್ರಗಳು, ವಿಡಿಯೋಗಳನ್ನು ಚುನಾವಣಾ ವೀಕ್ಷಕರು ಪಡೆದುಕೊಂಡಿದ್ದರು. ಪ್ರಚಾರದ ವೇಳೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದ ಕಾರಣಕ್ಕೆ ಪ್ರಕರಣವನ್ನು ನಟ ದರ್ಶನ್ ವಿರುದ್ದ ದಾಖಲಿಸಲಾಗಿದೆ.
ಕೋವಿಡ್ ಸೋಂಕಿತರ ಸಂಖ್ಯೆ; ಕರ್ನಾಟಕಕ್ಕೆ 2ನೇ ಸ್ಥಾನ
ಪ್ರಚಾರದ ವೇಳೆ ಸಾಮಾಜಿಕ ಅಂತರ ಪಾಲನೆ ಮಾಡದ ಕಾರಣ ಅಕ್ಟೋಬರ್ 30 ಮತ್ತು 31ರಂದು ಬಿಬಿಎಂಪಿ 15 ಪ್ರಕರಣಗಳನ್ನು ದಾಖಲು ಮಾಡಿದೆ. ನ್ಯಾಯಾಲಯದಲ್ಲಿ ಆರೋಪ ಸಾಬೀತಾದಲ್ಲಿ ವ್ಯಕ್ತಿಗಳಿಗೆ 1 ವರ್ಷದ ತನಕ ಜೈಲು ಶಿಕ್ಷೆ ವಿಧಿಸಲು ಸಹ ಅವಕಾಶವಿದೆ.
Recommended Video
ಅಕ್ಟೋಬರ್ 30ರಂದು ಬಿಬಿಎಂಪಿ ಕಾಂಗ್ರೆಸ್ ವಿರುದ್ಧ 3, ಬಿಜೆಪಿ ವಿರುದ್ಧ 4 ಪ್ರಕರಣ ದಾಖಲಿಸಿದೆ. ಅಕ್ಟೋಬರ್ 31ರಂದು ಕಾಂಗ್ರೆಸ್ ವಿರುದ್ಧ 1, ಬಿಜೆಪಿ ವಿರುದ್ಧ 4, ಜೆಡಿಎಸ್ ವಿರುದ್ಧ 2 ಪ್ರಕರಣ ದಾಖಲು ಮಾಡಿದೆ.