ಆರ್.ಆರ್.ನಗರದಲ್ಲಿ ಗೆದ್ದದ್ದು ಮುನಿರತ್ನ ಅಲ್ಲ 'ಮನಿ'ರತ್ನ: ಜೆಡಿಎಸ್ ಲೇವಡಿ
ಬೆಂಗಳೂರು, ನ 10: ರಾಜರಾಜೇಶ್ವರಿ ನಗರ ಅಸೆಂಬ್ಲಿ ಉಪಚುನಾವಣೆಯ ಒಟ್ಟು ಏಳು ಸುತ್ತಿನ ಮತ ಎಣಿಕೆ ಮುಗಿದಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಭಾರೀ ಲೀಡ್ ನಲ್ಲಿದ್ದಾರೆ. ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
Recommended Video
ಜೆಡಿಎಸ್ ಇಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದು, ಠೇವಣಿ ಉಳಿಸಿಕೊಳ್ಳುವುದೇ ಕಷ್ಟ ಎನ್ನುವ ಸ್ಥಿತಿ ಸದ್ಯಕ್ಕೆ ನಿರ್ಮಾಣವಾಗಿದೆ. ಇದುವರೆಗೆ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿಗೆ ಕೇವಲ 1,572 (ಇವಿಎಂ) ಮತಗಳಷ್ಟೇ ಲಭ್ಯವಾಗಿದೆ.
ಬಿಜೆಪಿ ಅಭ್ಯರ್ಥಿ ಮುನಿರತ್ನ ಏಳನೇ ಸುತ್ತಿನ ಮುಕ್ತಾಯಕ್ಕೆ 39,087 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರಿಗಿಂತ 19,315 ಮತಗಳ ಭರ್ಜರಿ ಲೀಡ್ ಅನ್ನು ಪಡೆದಿದ್ದಾರೆ.

ಬಹುತೇಕ ಗೆಲುವಿನ ಹಂತದಲ್ಲಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ ಬಗ್ಗೆ ಜೆಡಿಎಸ್ ಮುಖಂಡ ಟಿ.ಎ.ಶರವಣ ಲೇವಡಿ ಮಾಡಿದ್ದು, "ರಾಜರಾಜೇಶ್ವರಿ ನಗರದಲ್ಲಿ ಗೆದ್ದದ್ದು ಮುನಿರತ್ನ ಅಲ್ಲ 'ಮನಿ'ರತ್ನ" ಎಂದು ಹೇಳಿದರು.
"ನಾವು ಅಭ್ಯರ್ಥಿಯನ್ನು ಅಂತಿಮಗೊಳಿಸುವುದನ್ನು ತಡ ಮಾಡಿದೆವು. ಇಲ್ಲಿ ಗೆಲುವು ನಮಗೆ ಕಷ್ಟ ಎಂದು ಮುಂಚೆನೇ ನಮ್ಮ ನಾಯಕ ಕುಮಾರಸ್ವಾಮಿ ಹೇಳಿದ್ದರು. ಇಲ್ಲಿ ನಡೆದದ್ದು ದುಡ್ಡಿನ ಚುನಾವಣೆ"ಎಂದು ಶರವಣ ಹೇಳಿದರು.
"ನಾನೂ ಕೂಡಾ ಪ್ರತೀ ವಾರ್ಡಿನಲ್ಲಿ ಪ್ರಚಾರ ಮಾಡಿ ಬಂದಿದ್ದೇನೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಮುನಿರತ್ನ ಗೆದ್ದರೆ, ಸಚಿವರನ್ನಾಗಿ ಮಾಡುತ್ತೇನೆ ಎನ್ನುವ ಭರವಸೆಯನ್ನು ನೀಡಿದ್ದರು. ಅದು ಇಲ್ಲಿ ವರ್ಕೌಟ್ ಆಗಿದೆ"ಎಂದು ಶರವಣ ಅಭಿಪ್ರಾಯ ವ್ಯಕ್ತ ಪಡಿಸಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications