ಸಿದ್ದರಾಮಯ್ಯ ಅವರ ಹೇಳಿಕೆಯಲ್ಲಿ ಏನೂ ತಪ್ಪಿಲ್ಲ ಎಂದ ಪರಮೇಶ್ವರ್

ಬೆಂಗಳೂರು, ಮೇ 16: ಎಚ್‌ಡಿ ರೇವಣ್ಣ ಕೂಡ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಬಹುದು ಎಂದು ಸಿದ್ದರಾಮಯ್ಯ ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಹೇಳಿದರು.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಸಿದ್ದರಾಮಯ್ಯ ಅವರ ಟ್ವೀಟ್‌ನಲ್ಲಿ ನನಗೆ ತಪ್ಪೇನು ಕಾಣಿಸುತ್ತಿಲ್ಲ, ಮೈತ್ರಿ ಸರ್ಕಾರದಲ್ಲಿ ಹಲವರಿಗೆ ಸಿಎಂ ಆಗುವ ಅರ್ಹತೆ ಇದೆ ಅದರಲ್ಲಿ ರೇವಣ್ಣ ಕೂಡ ಎಂದು ಅವರು ಹೇಳಿದ್ದಾರಷ್ಟೆ ಎಂದರು.

ನನ್ನನ್ನೂ ಸೇರಿಸಿಕೊಂಡು ಹಲವಾರು ಮಂದಿ ಮುಖ್ಯಮಂತ್ರಿ ಸ್ಥಾನಕ್ಕೆ ಆಕಾಂಕ್ಷಿಗಳಿದ್ದಾರೆ. ಡಿಕೆ ಶಿವಕುಮಾರ್ ಅವರು ಕೂಡ ನಿನ್ನೆ ಹೇಳಿದಂತೆ ನಾನೇನು ಸನ್ಯಾಸಿಯಲ್ಲಿ ನಾನು ಕೂಡ ಸಿಎಂ ಸ್ಥಾನದ ಆಕ್ಷಾಂಕ್ಷಿ ಎಂದಿದ್ದರು.

Nothing wrong in Siddaramaiah tweet

ಹಾಗೆಯೇ ಸಾಕಷ್ಟು ಮಂದಿಗೆ ಸಿಎಂ ಆಗುವ ಕನಸಿದೆ. ಆದರೆ ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆಯಾಗುವ ವೇಳೆ ಈ ಎಲ್ಲಾ ಮಾತುಗಳು ಬರುತ್ತವೆ ಎಂದರು.

ಇತ್ತೀಚೆಗಷ್ಟೆ ನಡೆದ ಕಾರ್ಯಕ್ರಮವೊಂದರಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಸಿಎಂ ಆಗಬಹುದಿತ್ತು ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು ಹೇಳಿದ್ದರು ಅವರ ಹೇಳಿಕೆ ಸಿದ್ದರಾಮಯ್ಯ ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+