ಕನ್ನಡ ವಿರೋಧಿ ಐಎಎಸ್ ಅಧಿಕಾರಿಯ ಬಣ್ಣ ಪಬ್ಲಿಕ್ ಆಯ್ತು
ಬೆಂಗಳೂರು, ಮಾರ್ಚ್ 16: ಕರ್ನಾಟಕದಲ್ಲಿ ಕನ್ನಡ ಆಡಳಿತ ಭಾಷೆ ಎಂಬುದು ಗೋಡೆ ಬರಹ ಅಷ್ಟೇನಾ ಎಂಬ ಅನುಮಾನ ಮೂಡುವಂಥ ವರದಿ ಇದು. ಹತ್ತು ವರ್ಷದಿಂದ ಕರ್ನಾಟಕದಲ್ಲಿ ಇರುವ ಐಎಎಸ್ ಅಧಿಕಾರಿ- ಸಾರ್ವಜನಿಕ ಉದ್ದಿಮೆಗಳ ಕಾರ್ಯದರ್ಶಿ ಶ್ರೀವತ್ಸ ಕೃಷ್ಣ ಅವರ ಕನ್ನಡದ ಬಗ್ಗೆ ಇರುವ ಧೋರಣೆಯನ್ನು ತಿಳಿಯುವ ಸನ್ನಿವೇಶ ಬಂದಿದೆ.
ದೆಹಲಿ ಮೂಲದ ಇವರಿಗೆ ಕನ್ನಡ ಅಂದರೆ ಆಗಲ್ಲವಂತೆ. ಕಚೇರಿ ಕಡತಗಳನ್ನು ಇಂಗ್ಲಿಷ್ ನಲ್ಲಿ ನೀಡುವಂತೆ ಕಿರಿಯ ಅಧಿಕಾರಿಗಳಿಗೆ ಜಬರ್ ದಸ್ತ್ ಕೂಡ ಮಾಡುತ್ತಾರೆ ಎಂಬುದು ಆರೋಪ. ಅಷ್ಟೇ ಅಲ್ಲ, ಅವರ ಈ ಧೋರಣೆಯಿಂದಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ನೋಟಿಸ್ ಕೂಡ ಪಡೆದಿದ್ದಾರೆ.[ಕನ್ನಡದಲ್ಲೇ ಮಾಹಿತಿ ನೀಡಿದ್ರೆ ಮಾತ್ರ ಉತ್ಪನ್ನ ಕೊಳ್ತೇನೆ!]

ಈ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ಗುರುವಾರ ಬೆಳಗ್ಗೆ ವರದಿ ಪ್ರಕಟವಾಗಿದ್ದು, ಆ ವೇಳೆ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್ ಜಿ ಸಿದ್ದರಾಮಯ್ಯ, ಈ ಬಗ್ಗೆ ನಮ್ಮ ಗಮನಕ್ಕೆ ಬಂದು, ಕಾರಣ ಕೇಳಿ ನೋಟಿಸ್ ನೀಡಿದ್ದೀವಿ. ಇಂಥ ಅಧಿಕಾರಿಗಳಿಗೆ ದಂಡನೆ ಆಗದ ಹೊರತು ಬುದ್ಧಿ ಬರುವುದಿಲ್ಲ. ಅವರು ತಿದ್ದುಕೊಳ್ಳದಿದ್ದರೆ ಕ್ರಮ ತೆಗೆದುಕೊಳ್ಳುವಂತೆ ಸರಕಾರಕ್ಕೆ ಶಿಫಾರಸು ಮಾಡ್ತೀವಿ ಎಂದಿದ್ದಾರೆ. ಇನ್ನೊಂದು ವಿಚಾರ ಏನೆಂದರೆ, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಈ ಅಧಿಕಾರಿಗೆ ಎಚ್ಚರಿಕೆ ನೀಡಿದ್ದಾರಂತೆ.[ಕನ್ನಡ ಬಳಸಲು ನಿರಾಕರಿಸಿದ ಅಮೆಜಾನ್ ಗೆ ನೋಟಿಸ್]
ಆದರೆ, ಇದು ಒಬ್ಬ ಐಎಎಸ್ ಅಧಿಕಾರಿಯ ಕನ್ನಡ ವಿರೋಧಿ ಧೋರಣೆಯಾ ಎಂಬುದು ಪ್ರಶ್ನೆ. ಏಕೆಂದರೆ ಇದೊಂದು ಆರೋಪ ಯಾವಾಗಲೂ ಕೇಳಿಬರುತ್ತದೆ. ಅಧಿಕಾರಿಗಳ ಕನ್ನಡ ವಿರೋಧಿ ಧೋರಣೆ ಬಗ್ಗೆ ಒಂದು ಸಲ ಗಂಭೀರ ಕ್ರಮ ಕೈಗೊಂಡು, ಆ ನಂತರ ಸುಮ್ಮನಾಗುವುದು ಸರಿಯಲ್ಲ. ಇಂಥವರ ವಿರುದ್ಧ ಉಳಿದವರೂ ಎಚ್ಚರವಾಗುವಂಥ ಕ್ರಮ ತೆಗೆದುಕೊಳ್ಳಬೇಕು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications