ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೈಕೋ ಜೈಶಂಕರ್ ಆತ್ಮಹತ್ಯೆ
ಬೆಂಗಳೂರು, ಫೆಬ್ರವರಿ 27: ಸೈಕೋ ಕಿಲ್ಲರ್ ಜೈಶಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಜೈಶಂಕರ್ ಬ್ಲೇಡಿನಿಂದ ಕತ್ತು ಕುಯ್ದುಕೊಂಡಿದ್ದಾನೆ.
ಬ್ಲೇಡಿನಿಂದ ಕತ್ತು ಕುಯ್ದುಕೊಂಡು ನರಳುತ್ತಿದ್ದ ಜೈಶಂಕರ್ ನನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲು ಯತ್ನಿಸಲಾಯಿತು. ಆದರೆ, ಮಾರ್ಗಮಧ್ಯೆ ಜೈಶಂಕರ್ ಅಸುನೀಗಿದ್ದಾನೆ.
ಹಲವಾರು ಮಹಿಳೆಯರ ನಿದ್ದೆಗೆಡಿಸಿದ್ದ ತಮಿಳುನಾಡು ಮೂಲದ ಅತ್ಯಾಚಾರಿ, ಸರಣಿ ಹಂತಕ, ಸೈಕೋ ಕಿಲ್ಲರ್ ಜೈ ಶಂಕರ್, ಇದೇ ಪರಪ್ಪನ ಅಗ್ರಹಾರ ಜೈಲಿನಿಂದ 2013ರಲ್ಲಿ ಎಸ್ಕೇಪ್ ಆಗಿದ್ದ.
ಕರ್ನಾಟಕ ಮತ್ತು ತಮಿಳುನಾಡು ಪೊಲೀಸರಿಗೆ ಸವಾಲಾಗಿ ಈತನ ಬಂಧನದ ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಎರಡೂ ರಾಜ್ಯಗಳಲ್ಲಿ ನಟೋರಿಯಸ್ ಕ್ರಿಮಿನಲ್ ಆಗಿ ವಿವಿಧ ಕೊಲೆ, ಅತ್ಯಾಚಾರ ಪ್ರಕರಣಗಳನ್ನು ನಡೆಸಿದ್ದ ಈತನನ್ನು ಬಿಜಾಪುರದಲ್ಲಿ ಪೊಲೀಸರು ಬಂಧಿಸಿದ್ದರು. ಆದರೆ, ಸಿನೀಮಿಯ ರೀತಿಯಲ್ಲಿ ಎಸ್ಕೇಪ್ ಆಗಿದ್ದ. ಆದರೆ, ಬೆಂಗಳೂರು ಪೊಲೀಸರು ಮತ್ತೆ ಆತನನ್ನು ಬಂಧಿಸಿ ಜೈಲಿಗೆ ತಳ್ಳಿದ್ದರು.