ಈ ಬಾರಿಯ ಬೆಂಗಳೂರು ಸಾಹಿತ್ಯ ಉತ್ಸವಕ್ಕೆ ಚೇತನ್ ಭಗತ್ ಇಲ್ಲ
ಬೆಂಗಳೂರು, ಅಕ್ಟೋಬರ್ 11: ಖ್ಯಾತ ಇಂಗ್ಲಿಷ್ ಕಾದಂಬರಿಕಾರ ಚೇತನ್ ಭಗತ್ ಅವರು ಈ ಬಾರಿಯ ಪ್ರತಿಷ್ಠಿತ 'ಬೆಂಗಳೂರು ಸಾಹಿತ್ಯ ಉತ್ಸವ'ದಲ್ಲಿ ಪಾಲ್ಗೊಳ್ಳುತ್ತಿಲ್ಲ.
ಬಿಡುಗಡೆ ಆಗುತ್ತಿರುವ ತಮ್ಮ ಹೊಸ ಕಾದಂಬರಿ 'ದಿ ಗರ್ಲ್ ಇನ್ ರೂಮ್ 105' ನ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಕಾರಣ ಅಕ್ಟೋಬರ್ 27 ಮತ್ತು 28 ರಂದು ನಗರದ ಅಶೋಕ ಹೊಟೆಲ್ನಲ್ಲಿ ನಡೆಯಲಿರುವ ಸಾಹಿತ್ಯ ಉತ್ಸವಕ್ಕೆ ಗೈರಾಗಲಿದ್ದಾರೆ.
ಕೆಲವು ದಿನಗಳ ಹಿಂದಷ್ಟೆ ಚೇತನ್ ಭಗತ್ ಅವರಿಗೂ #ಮಿಟೂ ಬಿಸಿ ತಗುಲಿತ್ತು. ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಕೆಲವು ಮಹಿಳೆಯರು ಸ್ಕ್ರೀನ್ ಶಾಟ್ಗಳನ್ನು ಟ್ವಿಟ್ಟರ್ನಲ್ಲಿ ಪ್ರಕಟಿಸಿದ್ದರು. ಈ ಆರೋಪ ಬಂದ ಕಾರಣ ಅವರನ್ನು ಸಾಹಿತ್ಯೋತ್ಸವಕ್ಕೆ ಕರೆದಿಲ್ಲವೇ ಎಂಬ ಅನುಮಾನವೂ ಮೂಡಿದೆ.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಉತ್ಸವದ ಆಯೋಜಕರು 'ಆರೋಪ ಬಂದ ಕಾರಣ ಕರೆದಿಲ್ಲ ಎನ್ನುವುದು ಸುಳ್ಳು, ಮೂರು ತಿಂಗಳ ಹಿಂದೆಯೇ ಅವರನ್ನು ಆಹ್ವಾನಿಸಿದ್ದೇವೆ, ಆದರೆ ಅವಿಶ್ರಾಂತ ಕಾರ್ಯಗಳು ಇರುವುದರಿಂದ ಅವರಿಗೆ ಬರಲಾಗುತ್ತಿಲ್ಲ' ಎಂದು ಹೇಳಿದ್ದಾರೆ.
ಚೇತನ್ ಭಗತ್ ಅವರು ಬೆಂಗಳೂರು ಸಾಹಿತ್ಯ ಉತ್ಸವದಲ್ಲಿ ಭಾಗವಹಿಸುತ್ತಿಲ್ಲ ಎಂಬುದನ್ನು ಆಯೋಜಕರು ಅಧಿಕೃತವಾಗಿ ಇನ್ನೂ ಪ್ರಕಟಿಸಿಲ್ಲ. ಆದರೆ ಅವರು ಈ ಬಾರಿಯ ಉತ್ಸವಕ್ಕೆ ಗೈರಾಗುವುದಂತೂ ಪಕ್ಕಾ ಎನ್ನಲಾಗಿದೆ.
ಚೇತನ್ ಭಗತ್ ಅವರು ಮೂರು ವರ್ಷ ಸತತವಾಗಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಅವರು ಸಾಹಿತ್ಯ ಉತ್ಸವದ ಪ್ರಮುಖ ಆಕರ್ಷಣೆ ಸಹ ಆಗಿದ್ದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications