ರಾಮಾಯಣ-ಮಹಾಭಾರತದಲ್ಲಿ ಹಲವು ಕಟ್ಟುಕತೆಗಳಿವೆ: ಬೈರಪ್ಪ
ಬೆಂಗಳೂರು, ಜೂನ್ 27: ರಾಮಾಯಣ-ಮಹಾಭಾರತದಲ್ಲಿ ಹಲವಾರು ಕಟ್ಟುಕತೆಗಳಿವೆ, ಆದರೆ ಅವು ಗಹನವಾದ ಅರ್ಥಗಳನ್ನು ಒಳಗೊಂಡಿವೆ ಎಂದು ಖ್ಯಾತ ಸಾಹಿತಿ ಎಸ್.ಎಲ್.ಬೈರಪ್ಪ ಹೇಳಿದ್ದಾರೆ.
ಇಸ್ಕಾನ್ ಮತ್ತು ಭಾರತೀಯ ವಿದ್ಯಾಭವನ ಆಯೋಜಿಸಿದ್ದ 'ಮಹಾಭಾರತದ ಸಂದೇಶ' ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಮಯ, ಸ್ಥಳಗಳನ್ನು ಪರಿಶೀಲಿಸಿ, ತಾಳೆ ಮಾಡಿ ನೋಡಿದಲ್ಲಿ ರಾಮಾಯಣ, ಮಹಾಭಾರತದಲ್ಲಿ ಹಲವು ಕಟ್ಟುಕತೆಗಳಿವೆ ಎಂಬುದು ಗೊತ್ತಾಗುತ್ತದೆ ಎಂದಿದ್ದಾರೆ.
31 ವರ್ಷ ವಯಸ್ಸಿನ ಭೀಮ, 80 ವರ್ಷದ ಜರಾಸಂಧನ ಜೊತೆ ಮೂರು ದಿನ ಯುದ್ಧ ಮಾಡಲು ಸಾಧ್ಯವೆ, ಗುಡ್ಡಗಾಡು ಪ್ರದೇಶವಾದ ವಿರಾಟ ನಗರದಲ್ಲಿ ರಥದಲ್ಲಿ ತೆರಳಿ ಯುದ್ಧಮಾಡಲು ಆಗುತ್ತದೆಯೆ? ವಿಪರೀತ ಚಳಿ ಇರುವ ಬದರಿನಾಥದಲ್ಲಿ ಕೂತು ವಯಸ್ಸಾದ ವ್ಯಾಸರು ಮಹಾಭಾರತ ಬರೆಯಲು ಸಾಧ್ಯವೆ ಎಂಬ ಪ್ರಶ್ನೆಗಳು ಏಳದೇ ಇರುತ್ತವೆಯೇ? ಎಂದು ಬೈರಪ್ಪ ಅವರು ಪ್ರಶ್ನೆ ಮಾಡಿದರು.

ಸೋಲು, ಅವಮಾನವನ್ನು ಸಹಿಸುವ ನಮ್ಮ ಜನ, ಹೆಂಡತಿಯ ಮೇಲೆ ಕಣ್ಣು ಬಿದ್ದರೆ ಸಹಿಸಲಾರರು, ಈ ಸಂಸ್ಕೃತಿ ಬಂದಿರುವುದು ಭೀಮನಿಂದ ಎಂದು ಪ್ರತಿಪಾಧಿಸಿದ ಬೈರಪ್ಪನವರು, ಜೂಜು ವ್ಯಸನಿ ಧರ್ಮರಾಯನನ್ನು ತಮ್ಮಂದಿರು ವಿರೋಧಿಸಲಿಲ್ಲ, ಅದೇ ಸಂಸ್ಕೃತಿ ಈಗಲೂ ಇದೆ, ಕುಟುಂಬದಲ್ಲಿ ಅಣ್ಣನಿಗೆ ತಂದೆಯ ನಂತರದ ಸ್ಥಾನವಿದೆ ಎಂದರು.
ಇಷ್ಟೆಲ್ಲಾ ಕಟ್ಟುಕತೆಗಳ ಹೊರತಾಗಿಯೂ ಎರಡೂ ಮಹಾಕಾವ್ಯಗಳು ನಮ್ಮ ಜೀವನದಲ್ಲಿ ಹಾಸುಹೊಕ್ಕಾಗಿವೆ. ನಮ್ಮ ಸಂಸ್ಕೃತಿಯ ಮೂಲವನ್ನು ಇಲ್ಲಿಂದಲೇ ಕಟ್ಟಿಕೊಂಡಿದ್ದೇವೆ, ಕಟ್ಟುಕತೆಗಳನ್ನು ಗಹನವಾದ ಅರ್ಥವಿರುತ್ತದೆ, ನೈಜತೆಗೆ ಕಟ್ಟುಬಿದ್ದರೆ ಮೌಲ್ಯಗಳನ್ನು ಪ್ರತಿಪಾದಿಸುವಾಗ ಅಷ್ಟೋಂದು ಆಳಕ್ಕೆ ಇಳಿಯಲಾಗದು ಎಂದರು.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications