ದ್ವಿತೀಯ ಪಿಯು ಮಾರ್ಕ್ಸ್ಕಾರ್ಡ್ ಆ್ಯಪ್ ಮೂಲಕವೂ ಪಡೆಯಬಹುದು
ಬೆಂಗಳೂರು, ಜು.19: ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಕೇವಲ ಪದವಿಪೂರ್ವ ಶಿಕ್ಷಣ ಇಲಾಖೆಯೇ ನೀಡಬೇಕೆಂದೇನಿಲ್ಲ, ಇದೀಗ ಅಂಕಪಟ್ಟಿ ಇನ್ನೂ ಸುಲಭವಾಗಿ ಸಿಗಲಿದೆ.
ಈ ಶೈಕ್ಷಣಿಕ ವರ್ಷದಿಂದಲೇ ಇದು ಜಾರಿಯಾಗಲಿದೆ. ಕೇಂದ್ರ ಸರ್ಕಾರವು ಅಭಿವೃದ್ಧಿ ಪಡಿಸಿರುವ ಡಿಜಿಲಾಕರ್ ಆ್ಯಪ್ನಲ್ಲಿ ದೊರೆಯಲಿದೆ. 2018ರ ಮಾರ್ಚ್ನಲ್ಲಿ ನಡೆದ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಅಪ್ಲೋಡ್ ಮಾಡಿದೆ. 2018-19ನೇ ಸಾಲಿನಿಂದ ಪ್ರತಿವರ್ಷ ಡಿಜಿಟಲ್ ಅಂಕಪಟ್ಟಿ ಅಪ್ಲೋಡ್ ಮಾಡಲು ಇಲಾಖೆ ನಿರ್ಧರಿಸಿದೆ.
ದ್ವಿತೀಯ ಪಿಯುಸಿ ಅಂಕಪಟ್ಟಿ ಇನ್ನು ಡಿಜಿಟಲ್ ರೂಪದಲ್ಲೂ ವಿದ್ಯಾರ್ಥಿಗಳ ಕೈಸೇರಲಿದೆ. ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಡಿಜಿಲಾಕರ್ ಆಪ್ ಮೂಲಕ ವಿದ್ಯಾರ್ಥಿಗಳು ಡಿಜಿಟಲ್ ಮಾದರಿ ಅಂಕಪಟ್ಟಿ ಪಡೆಯಬಹುದು.ವಿದ್ಯಾರ್ಥಿಗಳು ಸ್ಮಾರ್ಟ್ಫೋನ್ನಲ್ಲಿ ಡಿಜಿಲಾಕರ್ ಆಪ್ ಡೌನ್ಲೋಡ್ ಮಾಡಿಕೊಂಡು, ಮೊಬೈಲ್ ಸಂಖ್ಯೆ ನಮೂದಿಸಬೇಕು(ವೆಬ್ಸೈಟ್ ಮುಖಾಂತರವೂ ಲಾಗ್ಇನ್ ಆಗಬಹುದು).

ಈ ಸಂದರ್ಭ ಆಧಾರ್ ನೋಂದಣಿ ವೇಳೆ ಸಲ್ಲಿಸಿದ ಮೊಬೈಲ್ ಸಂಖ್ಯೆಗೆ ಒನ್ ಟೈಂ ಪಾಸ್ವರ್ಡ್(ಒಟಿಪಿ) ರವಾನೆಯಾಗಲಿದೆ.
ಆ ಪಾಸ್ವರ್ಡ್ ಬಳಸಿ ಯೂಸರ್ ನೇಮ್ ಮತ್ತು ಪಾಸ್ವರ್ಡ್ ರಚಿಸಬೇಕು. ಲಾಗ್ಇನ್ ಆದ ನಂತರದಲ್ಲಿ ಆಧಾರ್ ಸಂಖ್ಯೆ ನಮೂದಿಸಬೇಕು(ಆಧಾರ್ ಜೋಡಣೆಯಾಗದೆ ಇದ್ದಲ್ಲಿ ಡಿಜಿಟಲ್ ಅಂಕಪಟ್ಟಿ ಪಡೆಯಲು ಸಾಧ್ಯವಿಲ್ಲ).
ಆಧಾರ್ ಸಂಖ್ಯೆ ನಮೂದಿಸಿದ ನಂತರದಲ್ಲಿ ಇಶ್ಯೂಡ್ ವಿಭಾಗದಲ್ಲಿ 'ಡಿಪಾರ್ಟ್ವೆುಂಟ್ ಆಫ್ ಪ್ರೀ ಯೂನಿವರ್ಸಿಟಿ ಎಜುಕೇಷನ್, ಕರ್ನಾಟಕ' ಎಂಬುದನ್ನು ಆಯ್ಕೆ ಮಾಡಬೇಕು. ನೋಂದಣಿ ಸಂಖ್ಯೆ ಹಾಗೂ ಉತ್ತೀರ್ಣರಾದ ವರ್ಷ ನಮೂದಿಸಿ ಅಂಕಪಟ್ಟಿ ಪಡೆಯಬಹುದಾಗಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications