ಕೊರೊನಾ ಪ್ರಕರಣ; ಮುಂಬೈಗಿಂತ ಬೆಂಗಳೂರಲ್ಲೇ ಹೆಚ್ಚು!
ಬೆಂಗಳೂರು, ಏಪ್ರಿಲ್ 26; ಹೆಚ್ಚು ಕೋವಿಡ್ ಪ್ರಕರಣಗಳಲ್ಲಿ ಕರ್ನಾಟಕದ ರಾಜಧಾನಿ ಬೆಂಗಳೂರು ಮಹಾರಾಷ್ಟ್ರ ರಾಜಧಾನಿ ಮುಂಬೈ ನಗರವನ್ನು ಹಿಂದಿಕ್ಕಿದೆ. ಭಾನುವಾರ ಒಂದೇ ದಿನ ಬೆಂಗಳೂರಿನಲ್ಲಿ 20733 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ.
ಬೆಂಗಳೂರು ನಗರದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 6,53,656. ಸಕ್ರಿಯ ಪ್ರಕರಣಗಳ ಸಂಖ್ಯೆ 1,80,542. ಭಾನುವಾರ ಮುಂಬೈನಲ್ಲಿ 5,498 ಹೊಸ ಪ್ರಕರಣ ದಾಖಲಾಗಿದ್ದು, 64 ಜನರು ಮೃತಪಟ್ಟಿದ್ದಾರೆ.
ಮುಂಬೈನ ಒಟ್ಟು ಸೋಂಕಿತರ ಸಂಖ್ಯೆ 6,27,644 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 75,948 ಆಗಿದೆ. ಬೆಂಗಳೂರು ನಗರದಲ್ಲಿ ಭಾನುವಾರ ಒಂದೇ ದಿನ 77 ಜನರು ಮೃತಪಟ್ಟಿದ್ದಾರೆ ಎಂದು ಹೆಲ್ತ್ ಬುಲೆಟಿನ್ ಹೇಳಿದೆ.

ಕಳೆದ ವರ್ಷದ ಕೋವಿಡ್ ಪರಿಸ್ಥಿತಿ ಸಂದರ್ಭದಲ್ಲಿ ಮುಂಬೈನಲ್ಲಿ 12,790 ಜನರು ಮೃತಪಟ್ಟಿದ್ದರು. ಬೆಂಗಳೂರು ನಗರದಲ್ಲಿ 5,800 ಜನರು ಮೃತಪಟ್ಟಿದ್ದರು. ಆದರೆ, ಕೋವಿಡ್ 2ನೇ ಅಲೆ ಬೆಂಗಳೂರು ನಗರದ ಮೇಲೆ ಭಾರೀ ಪರಿಣಾಮವನ್ನು ಬೀರಿದೆ.
ದೇಶದಲ್ಲಿ ಅತಿ ಹೆಚ್ಚು ಪ್ರಕರಣವಿರುವ ನಗರ ದೆಹಲಿ. ಬೆಂಗಳೂರು ನಗರ 2ನೇ ಸ್ಥಾನದಲ್ಲಿದೆ. ಬೆಂಗಳೂರಿನಲ್ಲಿ ಶನಿವಾರ 1.05 ಲಕ್ಷ ಪರೀಕ್ಷೆಗಳನ್ನು ಮಾಡಲಾಗಿದೆ. ಮುಂಬೈನಲ್ಲಿ 40,298 ಮಾದರಿಗಳ ಪರೀಕ್ಷೆ ನಡೆದಿದೆ.
ಬೆಂಗಳೂರು ನಗರದಲ್ಲಿ ಐಸಿಯು, ವೆಂಟಿಲೇಟರ್ ಕೊರತೆ ಎದುರಾಗಿದೆ. ಕರ್ನಾಟಕ ಸರ್ಕಾರ ಇದನ್ನು ಸರಿಪಡಿಸಲು ಮಲ್ಲೇಶ್ವರದ ಕೆ. ಸಿ. ಜನರಲ್, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಾಡ್ಯೂಲರ್ ಐಸಿಯು ಘಟಕ ಸ್ಥಾಪನೆ ಮಾಡುತ್ತಿದೆ.
"100 ರಿಂದ 150 ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ವೈದ್ಯಕೀಯ ಕಾಲೇಜುಗಳು ಇರುವ ಕಡೆ ಸ್ಥಳಾವಕಾಶವಿದ್ದರೆ ಅಲ್ಲಿಯೂ ನಿರ್ಮಾಣ ಮಾಡಲಾಗುತ್ತದೆ" ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು












Click it and Unblock the Notifications