ವಿದ್ಯುತ್ ಸೋರಿಕೆ ತಡೆಗಟ್ಟಲು ಬೆಸ್ಕಾಂನಿಂದ ಡಿಜಿಟಲ್ ಮೀಟರ್
ಬೆಂಗಳೂರು, ಜುಲೈ, 19: ಬೆಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿಯು (ಬೆಸ್ಕಾಂ) ವಿದ್ಯುತ್ ಸೋರಿಕೆಯನ್ನು ತಡೆಗಟ್ಟಲು ಮನೆಗಳಿಗೆ ಹೊಸ ಡಿಜಿಟಲ್ ಮೀಟರ್ಗಳನ್ನು ಅಳವಡಿಸಲು ಮುಂದಾಗಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಗ್ರಾಹಕರ ಮನೆಗಳಲ್ಲಿ ಇರುವಂತಹ ಹಳೇ ಮೀಟರ್ಗಳನ್ನು ಬದಲಾಯಿಸಿ, ಹೊಸ ಡಿಜಿಟಲ್ ಮೀಟರ್ ಅಳವಡಿಸಲಾಗುತ್ತದೆ. ಇದಕ್ಕೆ ಯಾವುದೇ ಶುಲ್ಕ ಪಾವತಿ ಮಾಡಬೇಕಿಲ್ಲ.
ಮೀಟರ್ ಬದಲಾವಣೆಗೆ ಗ್ರಾಹಕರು ಯಾವುದೇ ರೀತಿಯ ಹಣವನ್ನು ಪಾವತಿಸುವ ಅವಶ್ಯಕತೆ ಇರುವುದಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಜುಲೈ 16ರಂದು ಬೆಸ್ಕಾಂನ 147 ಉಪವಿಭಾಗಗಳಲ್ಲಿ ಗ್ರಾಹಕರ ಸಂವಾದ ಸಭೆಗಳನ್ನು ಕೈಗೊಳ್ಳಲಾಯಿತು. ಸಭೆಯಲ್ಲಿ ಸಾವಿರಾರು ಗ್ರಾಹಕರು ಪಾಲ್ಗೊಂಡು ವಿದ್ಯುತ್ ಸಮಸ್ಯೆಗಳ ಕುರಿತು ಚರ್ಚಿಸಿದ್ದರು.
ನಗರ ವ್ಯಾಪ್ತಿಯಲ್ಲಿರುವ ಗ್ರಾಮಗಳಿಗೆ ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ, ಆದಷ್ಟು ಬೇಗ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ. ಈ ಹಿಂದೆ ಬೇಕಾಬಿಟ್ಟಿಯಾಗಿ ವಿದ್ಯುತ್ ಸೋರಿಕೆಯಾಗಿದ್ದು, ಇದನ್ನು ತಡೆಗಟ್ಟಲು ಪ್ರತಿ ಮನೆಗಳಿಗೂ ಡಿಜಿಟಲ್ ಮೀಟರ್ ಕಲ್ಪಿಸಲು ಬೆಸ್ಕಾಂ ಪ್ಲಾನ್ ರೂಪಿಸಿದೆ.

ಇದೀಗ ವಿದ್ಯುತ್ ಬಳಕೆ ಬಗ್ಗೆ ಸರಿಯಾಗಿ ಮಾಹಿತಿ ತಿಳಿದುಕೊಳ್ಳಲು ಡಿಜಿಟಲ್ ಮೀಟರ್ ಅಳವಡಿಸಲಾಗುತ್ತದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಈ ಯೋಜನೆ ಸಾಮಾನ್ಯ ಜನರಿಗೆ ಸದುಪಯೋಗವಾಗಲಿದೆ ಎಂದು ಹೇಳಿದ್ದಾರೆ. ಗ್ರಾಮಗಳಿಗೆ ಭೆಟಿ ನೀಡಿದ ಬೆಸ್ಕಾಂ ಇಲಾಖೆ ಅಧಿಕಾರಿಗಳು ಜನರಿಗೆ ಡಿಜಿಟಲ್ ಮೀಟರ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಒದಗಿಸಿದ್ದಾರೆ.
ಗ್ರಾಮಗಳಲ್ಲಿ ಸಾಮಾನ್ಯವಾಗಿ ವಿದ್ಯುತ್ ತೊಂದರೆಗಳು ಆಗುತ್ತಲೇ ಇರುತ್ತವೆ. ಈ ಬಗ್ಗೆ ಪದೇ ಪದೇ ಜನರು ಬೆಸ್ಕಾಂಗೆ ದೂರು ನೀಡುತ್ತಿರುತ್ತಾರೆ. ಹೀಗೆ ಜನರಿಗೆ ಆಗುವ ತೊಂದರೆಗಳನ್ನು ತಪ್ಪಿಸಲು ಬೆಸ್ಕಾಂ ಡಿಜಿಟಲ್ ಮೀಟರ್ ಮೊರೆ ಹೋಗಿದೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications