ಬೆಂಗಳೂರಿಗರಿಗೆ ಸಿಹಿ ಸುದ್ದಿ: ನೈಸ್ ರಸ್ತೆಯಲ್ಲೂ ಮೆಟ್ರೋ ಮಾರ್ಗ
ಬೆಂಗಳೂರು, ಡಿಸೆಂಬರ್ 17: ನೈಸ್ ರಸ್ತೆಯಲ್ಲೂ ನಮ್ಮ ಮೆಟ್ರೋ ನಿರ್ಮಾಣ ಮಾಡುವ ಸಾಧ್ಯತೆ ಇದೆ. ನಂದಿ ಇನ್ಫ್ರಾ ಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸಸ್ ಹಾಗೂ ಬಿಡಿಎ ಸಹಭಾಗಿತ್ವದಲ್ಲಿ ನಮ್ಮ ಮೆಟ್ರೋ ಮಾರ್ಗ ನಿರ್ಮಾಣವಾಗುವ ಸಾಧ್ಯತೆ ಇದೆ.
ಈಗಾಗಲೇ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಸ್ ಮೋಹನ್ ದಾಸ್ ಹೆಗಡೆ ಸರ್ಕಾರಕ್ಕೆ ನೀಡಿರುವ ಸಲಹೆ ಆಧರಿಸಿ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ರಾಜ್ಯ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಪತ್ರ ಬರೆದಿದ್ದಾರೆ.
ಸಾರ್ವಜನಿಕರಿಗೆ ಶೀಘ್ರ ಮೆಟ್ರೋ ಸೇವೆ ಕಲ್ಪಿಸುವ ಕುರಿತು ಪರಿಶೀಲಿಸಿ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಲು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮೆಟ್ರೋ ಮಾರ್ಗ ಎಲ್ಲಿಂದೆಲ್ಲಿಗೆ
ತುಮಕೂರು ರಸ್ತೆ-ಎಲೆಕ್ಟ್ರಾನಿಕ್ ಸಿಟಿ ನೈಸ್ ಮಾರ್ಗದಲ್ಲಿ ಮತ್ತು ಮುಂದೆ ಬಿಡಿಎ ನಿರ್ಮಾಣ ಮಾಡಲಿರುವ ಪೆರಿಫೆರಲ್ ವರ್ತುಲ್ ರಸ್ತೆಯಲ್ಲಿ ಮೆಟ್ರೋ ಮಾರ್ಗ ನಿರ್ಮಾಣದ ಕಾರ್ಯಸಾಧ್ಯತಾ ವರದಿ ತಯಾರಿಸಲು ಸೂಚಿಸಲಾಗಿದೆ.

ಖಾಸಗಿ ಸಹಭಾಗಿತ್ವ ಹೊಸದಲ್ಲ
ಬಿಎಂಆರ್ಸಿಎಲ್ ಗೆ ಖಾಸಗಿ ಸಹಭಾಗಿತ್ವ ಹೊಸದಲ್ಲ, ಸಿಲ್ಕ್ಬೋರ್ಡ್ -ಕೆಆರ್ ಪುರ ಮಾರ್ಗ ನಿರ್ಮಾಣದಲ್ಲೂ ವಿನೂತನ ಸಂಪನ್ಮೂಲ ಕ್ರೂಢೀಕರಣ ಯೋಜನೆಯನ್ನು ನಿಗಮ ಅನುಷ್ಠಾನಗೊಳಿಸಿದೆ. 4.202 ಕೋಟಿ ರೂ ಯೋಜನಾ ವೆಚ್ಚದಲ್ಲಿ 1100 ಕೋಟಿ ರೂ ವೆಚ್ಚವನ್ನು ಖಾಸಗಿ ಕಂಪನಿಗಳಿಂದ ನಿಗಮ ಪಡೆದುಕೊಳ್ಳಲಿದೆ.

ಭೂಸ್ವಾಧೀನ ವಿಳಂಬ ದೂರವಾಗಲಿದೆ
ಈಗಾಗಲೇ ನೈಸ್ ರಸ್ತೆ ಅಭಿವೃದ್ಧಿಯಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಮೆಟ್ರೋ ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಿದರೆ, ಭೂಸ್ವಾಧೀನ ವಿಳಂಬ ದೂರವಾಗಲಿದೆ. ಇದರಿಂದ ಸಾರ್ವಜನಿಕರಿಗೆ ಕಡಿಮೆ ಅವಧಿಯಲ್ಲಿ ಮೆಟ್ರೋ ಸೌಲಭ್ಯ ದೊರೆಯಲಿದೆ.

ಬಿಡಿಎ ಜೊತೆ ಚರ್ಚೆ
ಬಳ್ಳಾರಿ ರಸ್ತೆ ಹಾಗೂ ಹಳೇ ಮದ್ರಾಸ್ ರಸ್ತೆಯನ್ನು ಸಂಪರ್ಕಿಸುವಂತೆ ತುಮಕೂರು ರಸ್ತೆಯಿಂದ ಹೊಸೂರು ರಸ್ತೆಯವರೆಗೆ ಬೆಂಗಳೂರು ಪೂರ್ವ ಭಾಗದಲ್ಲಿ 65 ಕಿ.ಮೀ ಪೆರಿಫೆರಲ್ ವರ್ತುಲ ರಸ್ತೆ ನಿರ್ಮಾಣವಾಗಲಿದೆ. ಕಳೆದ 12 ವರ್ಷದಿಂದ ಚರ್ಚೆಯ ಹಂತದಲ್ಲಿರುವ ಈ ಯೋಜನೆ ಅನುಷ್ಠಾನಕ್ಕೆ ಸರ್ಕಾರ ನಿರ್ಧರಿಸಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications