ರಾಜಭವನಕ್ಕೆ ಪ್ರಜೆಗಳಿಗೆ ಮುಕ್ತ ಪ್ರವೇಶ, ನೀವು ನೋಡಿಬನ್ನಿ
ಬೆಂಗಳೂರು, ಆಗಸ್ಟ್ 16: ರಾಜಭವನವು ಗುರುವಾರದಿಂದ ಪ್ರಜೆಗಳಿಗೆ ಮುಕ್ತವಾಗಿದೆ. ಪುರಾತನ ಬ್ರಿಟಿಷರ ಕಾಲದ ಕಟ್ಟಡ ನೋಡಲು ಜನರಿಗೆ ಇಷ್ಟವಾದ ಕಾರಣ ರಾಜಭವನ ನೋಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ರಾಜ್ಯಪಾಲ ವಿ.ಆರ್. ವಾಲಾ ತಿಳಿಸಿದ್ದಾರೆ.
ಆಗಸ್ಟ್ 31ರವರೆಗೆ ರಾಜಭವನ ನೋಡಲು ಅವಕಾಶ ಕಲ್ಪಿಸಿದ್ದೇವೆ, ಅನುಮತಿ ಕಡ್ಡಾಯವಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಒದಗಿಸಲಾಗುತ್ತದೆ. ಹೆಚ್ಚು ಬೇಡಿಕೆ ಬಂದರೆ ವರ್ಷದಲ್ಲಿ ಎರಡು ಬಾರಿ ಅವಕಾಶ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಜನಸಾಮಾನ್ಯರ ರಾಜ್ಯಪಾಲರು ಎಂಬ ಖ್ಯಾತಿಗೆ ಪಾತ್ರರಾಗಿದ್ದ ವಿ.ಎಸ್. ರಮಾದೇವಿ ಅಧಿಕಾರಾವಧಿ ಬಳಿಕ ಜನಸಾಮಾನ್ಯರಿಗೆ ರಾಜಭವನ ಪ್ರವೇಶಿಸಲು ಅನುಮತಿ ಇರಲಿಲ್ಲ. ಇದೀಗ ಮತ್ತೊಮ್ಮೆ ಸಾರ್ವಜನಿಕರಿಗೆ ರಾಜಭವನ ತೆರೆದುಕೊಳ್ಳಲಿದೆ.

ಆಗಸ್ಟ್ 16ರಿಂದ 31ರವರೆಗೆ ರಾಜಭವನ ವೀಕ್ಷಿಸಲು ಬಯಸುವವರು ಮುಕ್ತವಾಗಿ ತೆರಳಬಹುದಾಗಿದೆ. ಇತ್ತೀಚಿನ ದಿನಗಳಲ್ಲಿ ಆಹ್ವಾನಿತ ಗಣ್ಯರು ಮತ್ತು ಅತಿಥಿಗಣ್ಯರಿಗೆ ಮಾತ್ರ ಸೀಮಿತವಾಗಿತ್ತು. ದೆಹಲಿ ರಾಷ್ಟ್ರಪತಿ ಭವನ ಮಾದರಿಯಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಪ್ರವೇಶ ಕಲ್ಪಿಸಲಿದೆ.
ಈ ಅವಧಿಯಲ್ಲಿ ಸಾರ್ವಜನಿಕರು ರಾಜಭವನದ ಕಟ್ಟಡ, ವಿಶಾಲ ಉದ್ಯಾನ, ಗಾಜಿನ ಮನೆ ಎಲ್ಲವನ್ನೂ ವೀಕ್ಷಿಸಬಹುದಾಗಿದೆ. ಆದರೆ ಸಾರ್ವಜನಿಕರ ಪ್ರವೇಶಕ್ಕೆ ಕೆಲವು ನಿಯಮ ಹಾಗೂ ಷರತ್ತುಗಳು ಅನ್ವಯವಾಗುತ್ತದೆ. ಆಗಸ್ಟ್ 16ರಿಂದ 31ರವರೆಗೆ ಸಂಜೆ 4 ಗಂಟೆಯಿಂದ 6.30ರವರೆಗೆ ಸಾರ್ವತ್ರಿಕ ರಜಾ ದಿನಗಳಲ್ಲೂ ಪ್ರವೇಶವಿರುತ್ತದೆ.
ಭೇಟಿಗೆ ಕನಿಷ್ಠ ಐದು ದಿನಗಳ ಮೊದಲು ಹೆಸರು ನೋಂದಾಯಿಸಿಕೊಳ್ಳಬೇಕು. ಒಂದು ತಂಡದಲ್ಲಿ 30 ಜನರಿಗೆ ಪ್ರವೇಶ ಅವಕಾಶ ಕಲ್ಪಿಸಲಾಗುತ್ತದೆ. ಪ್ರತಿ ತಂಡದ ಸುತ್ತಾಟಕ್ಕೆ 30 ನಿಮಿಷ ಮಾತ್ರ ಕಾಲಾವಕಾಶ ನೀಡಲಾಗುತ್ತದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications