ರಾಜಭವನಕ್ಕೆ ಪ್ರಜೆಗಳಿಗೆ ಮುಕ್ತ ಪ್ರವೇಶ, ನೀವು ನೋಡಿಬನ್ನಿ
ಬೆಂಗಳೂರು, ಆಗಸ್ಟ್ 16: ರಾಜಭವನವು ಗುರುವಾರದಿಂದ ಪ್ರಜೆಗಳಿಗೆ ಮುಕ್ತವಾಗಿದೆ. ಪುರಾತನ ಬ್ರಿಟಿಷರ ಕಾಲದ ಕಟ್ಟಡ ನೋಡಲು ಜನರಿಗೆ ಇಷ್ಟವಾದ ಕಾರಣ ರಾಜಭವನ ನೋಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ರಾಜ್ಯಪಾಲ ವಿ.ಆರ್. ವಾಲಾ ತಿಳಿಸಿದ್ದಾರೆ.
ಆಗಸ್ಟ್ 31ರವರೆಗೆ ರಾಜಭವನ ನೋಡಲು ಅವಕಾಶ ಕಲ್ಪಿಸಿದ್ದೇವೆ, ಅನುಮತಿ ಕಡ್ಡಾಯವಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಒದಗಿಸಲಾಗುತ್ತದೆ. ಹೆಚ್ಚು ಬೇಡಿಕೆ ಬಂದರೆ ವರ್ಷದಲ್ಲಿ ಎರಡು ಬಾರಿ ಅವಕಾಶ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಜನಸಾಮಾನ್ಯರ ರಾಜ್ಯಪಾಲರು ಎಂಬ ಖ್ಯಾತಿಗೆ ಪಾತ್ರರಾಗಿದ್ದ ವಿ.ಎಸ್. ರಮಾದೇವಿ ಅಧಿಕಾರಾವಧಿ ಬಳಿಕ ಜನಸಾಮಾನ್ಯರಿಗೆ ರಾಜಭವನ ಪ್ರವೇಶಿಸಲು ಅನುಮತಿ ಇರಲಿಲ್ಲ. ಇದೀಗ ಮತ್ತೊಮ್ಮೆ ಸಾರ್ವಜನಿಕರಿಗೆ ರಾಜಭವನ ತೆರೆದುಕೊಳ್ಳಲಿದೆ.

ಆಗಸ್ಟ್ 16ರಿಂದ 31ರವರೆಗೆ ರಾಜಭವನ ವೀಕ್ಷಿಸಲು ಬಯಸುವವರು ಮುಕ್ತವಾಗಿ ತೆರಳಬಹುದಾಗಿದೆ. ಇತ್ತೀಚಿನ ದಿನಗಳಲ್ಲಿ ಆಹ್ವಾನಿತ ಗಣ್ಯರು ಮತ್ತು ಅತಿಥಿಗಣ್ಯರಿಗೆ ಮಾತ್ರ ಸೀಮಿತವಾಗಿತ್ತು. ದೆಹಲಿ ರಾಷ್ಟ್ರಪತಿ ಭವನ ಮಾದರಿಯಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಪ್ರವೇಶ ಕಲ್ಪಿಸಲಿದೆ.
ಈ ಅವಧಿಯಲ್ಲಿ ಸಾರ್ವಜನಿಕರು ರಾಜಭವನದ ಕಟ್ಟಡ, ವಿಶಾಲ ಉದ್ಯಾನ, ಗಾಜಿನ ಮನೆ ಎಲ್ಲವನ್ನೂ ವೀಕ್ಷಿಸಬಹುದಾಗಿದೆ. ಆದರೆ ಸಾರ್ವಜನಿಕರ ಪ್ರವೇಶಕ್ಕೆ ಕೆಲವು ನಿಯಮ ಹಾಗೂ ಷರತ್ತುಗಳು ಅನ್ವಯವಾಗುತ್ತದೆ. ಆಗಸ್ಟ್ 16ರಿಂದ 31ರವರೆಗೆ ಸಂಜೆ 4 ಗಂಟೆಯಿಂದ 6.30ರವರೆಗೆ ಸಾರ್ವತ್ರಿಕ ರಜಾ ದಿನಗಳಲ್ಲೂ ಪ್ರವೇಶವಿರುತ್ತದೆ.
ಭೇಟಿಗೆ ಕನಿಷ್ಠ ಐದು ದಿನಗಳ ಮೊದಲು ಹೆಸರು ನೋಂದಾಯಿಸಿಕೊಳ್ಳಬೇಕು. ಒಂದು ತಂಡದಲ್ಲಿ 30 ಜನರಿಗೆ ಪ್ರವೇಶ ಅವಕಾಶ ಕಲ್ಪಿಸಲಾಗುತ್ತದೆ. ಪ್ರತಿ ತಂಡದ ಸುತ್ತಾಟಕ್ಕೆ 30 ನಿಮಿಷ ಮಾತ್ರ ಕಾಲಾವಕಾಶ ನೀಡಲಾಗುತ್ತದೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications