ಬೆಂಗಳೂರಿಗರಿಗೆ ಕೊಟ್ಟ ಮಾತು ಉಳಿಸಿಕೊಂಡ ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್ 31 : ಉದ್ಯಾನ ನಗರಿ ಬೆಂಗಳೂರಿನ ಜನರಿಗೆ ಕೊಟ್ಟ ಮಾತನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಳಿಸಿಕೊಂಡಿದ್ದಾರೆ. ಕೆ.ಜೆ.ಜಾರ್ಜ್ ಅವರನ್ನು 'ಬೆಂಗಳೂರು ನಗರಾಭಿವೃದ್ಧಿ' ಸಚಿವರನ್ನಾಗಿ ನೇಮಿಸಲಾಗಿದೆ. ಗೃಹ ಖಾತೆಯ ಹೊಣೆಯನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ನೀಡಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ 'ಬೆಂಗಳೂರು ನಗರದ ಅಭಿವೃದ್ಧಿಗೆ ಪ್ರತ್ಯೇಕ ಸಚಿವರನ್ನು ನೇಮಕ ಮಾಡುವುದಾಗಿ' ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದರು. 'ಚುನಾವಣಾ ಫಲಿತಾಂಶ ಏನೇ ಬಂದರೂ ಪ್ರತ್ಯೇಕ ಸಚಿವರನ್ನು ನೇಮಕ ಮಾಡುವುದಾಗಿ' ಹೇಳಿದ್ದರು. [ಬೆಂಗಳೂರು ಅಭಿವೃದ್ಧಿಗೊಂದು ಖಾತೆ, ಸಚಿವರ ನೇಮಕ]

ಗುರುವಾರ ನಾಲ್ಕು ನೂತನ ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಂಡಿರುವ ಸಿದ್ದರಾಮಯ್ಯ ಅವರು, ಸರ್ವಜ್ಞ ನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಅವರ ಖಾತೆಯನ್ನು ಬದಲಾವಣೆ ಮಾಡಿದ್ದು, ಬೆಂಗಳೂರು ನಗರಾಭಿವೃದ್ಧಿ (ಬಿಡಿಎ, ಬಿಬಿಎಂಪಿ, ಜಲಮಂಡಳಿ, ಬಿಎಂಆರ್ಡಿಎ), ನಗರ ಯೋಜನೆ ಖಾತೆಯ ಜವಾಬ್ದಾರಿಯನ್ನು ಅವರಿಗೆ ವಹಿಸಿದ್ದಾರೆ. [ಬೆಂಗಳೂರು ಅಭಿವೃದ್ಧಿಗೆ ಪ್ರತ್ಯೇಕ ಸಚಿವರು ಬೇಕಿಲ್ಲ]
ಬೇಡ ಎಂದಿದ್ದರು : 'ಬೆಂಗಳೂರಿನ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವರನ್ನು ನೇಮಕ ಮಾಡುವ ಅಗತ್ಯವಿಲ್ಲ. ಖಾತೆ ಮುಖ್ಯಮಂತ್ರಿಗಳ ಬಳಿಯೇ ಇರಲಿ' ಎಂದು ಬೆಂಗಳೂರು ನಗರ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದರು. [ನೂತನ ಸಚಿವರಿಗೆ ಖಾತೆ ಹಂಚಿಕೆ]
ಆದರೆ, ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಸಮಯದಲ್ಲಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ಖಾತೆಯನ್ನು ಮುಖ್ಯಮಂತ್ರಿಗಳು ಬದಲಾವಣೆ ಮಾಡಿದ್ದು, ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಿದ್ದಾರೆ. ಗೃಹ ಖಾತೆಯನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ವಹಿಸಲಾಗಿದೆ.
ಇದೇ ಮೊದಲಲ್ಲ : ಬೆಂಗಳೂರು ಅಭಿವೃದ್ಧಿಗೆ ಪ್ರತ್ಯೇಕ ಸಚಿವರನ್ನು ನೇಮಕ ಮಾಡುತ್ತಿರುವುದು ಇದೇ ಮೊದಲಲ್ಲ. ಜೆ.ಎಚ್.ಪಟೇಲ್ ಅವರು ಮುಖ್ಯಮಂತ್ರಿಗಳಾಗಿದ್ದಾಗ ವಿ. ಸೋಮಣ್ಣ ಅವರನ್ನು ಬೆಂಗಳೂರು ನಗರದ ಸಚಿವರಾಗಿ ನೇಮಿಸಲಾಗಿತ್ತು. ನಂತರದ ದಿನಗಳಲ್ಲಿ ಈ ಖಾತೆ ಮುಖ್ಯಮಂತ್ರಿಗಳ ಬಳಿಯೇ ಉಳಿದಿತ್ತು.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications