ಬಿಟಿಎಂ ಲೇಔಟ್ನಲ್ಲಿ ಶೀಘ್ರದಲ್ಲೇ ಓಪನ್ ಸ್ಟ್ರೀಟ್ ಕಾರ್ಯಕ್ರಮ
ಬೆಂಗಳೂರು, ಮಾರ್ಚ್ 21 : ಎಂ.ಜಿ.ರಸ್ತೆ ಮತ್ತು ಎಚ್ಎಸ್ಆರ್ ಲೇಔಟ್ ಬಳಿಕ, ಬಿಟಿಎಂ ಲೇಔಟ್ನಲ್ಲಿ 'ಓಪನ್ ಸ್ಟ್ರೀಟ್' ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಕಾರ್ಯಕ್ರಮದ ದಿನಾಂಕವನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುತ್ತದೆ.
ಮಹಾತ್ಮ ಗಾಂಧಿ (ಎಂ.ಜಿ.ರಸ್ತೆ) ಮತ್ತು ಎಚ್ಎಸ್ಆರ್ ಲೇಔಟ್ನಲ್ಲಿ ಆಯೋಜಿಸಿದ ಓಪನ್ ಸ್ಟ್ರೀಟ್ ಕಾರ್ಯಕ್ರಮ ಯಶಸ್ವಿಯಾಗಿತ್ತು. ಇದರಿಂದಾಗಿ ಬಿಟಿಎಂ ಲೇಔಟ್ನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕೆಲವು ರಸ್ತೆಗಳಲ್ಲಿ ಮಾತ್ರವಲ್ಲ ಇಡೀ ಬಡಾವಣೆಯಲ್ಲಿಯೇ ಖಾಸಗಿ ವಾಹನ ಸಂಚಾರ ನಿಷೇಧಿಸಲು ಚಿಂತನೆ ನಡೆಸಲಾಗುತ್ತದೆ. [ಚಿತ್ರಗಳು : ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಹಬ್ಬದ ವಾತಾವರಣ]

ಸದ್ಯ, ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತಿವೆ. ಪರೀಕ್ಷೆಗಳು ಮುಗಿದ ಬಳಿಕ ಓಪನ್ ಸ್ಟ್ರೀಟ್ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ. ಬಿಟಿಎಂ ಬಡಾವಣೆ ನಿವಾಸಿಗಳ ಸಂಘವೂ ಕಾರ್ಯಕ್ರಮ ಆಯೋಜನೆ ಮಾಡಲು ಬೆಂಬಲ ನೀಡಿದೆ. [ಕಮರ್ಷಿಯಲ್ ಸ್ಟ್ರೀಟ್ 'ಹ್ಯಾಪಿ ಸ್ಟ್ರೀಟ್' ಆಗಿ ಬದಲಾದ ಚಿತ್ರಗಳು]
ಎಂ.ಜಿ.ರಸ್ತೆಯಲ್ಲಿ ಓಪನ್ ಸ್ಟ್ರೀಟ್ ಕಾರ್ಯಕ್ರಮ ಆಯೋಜನೆ ಮಾಡಿದಾಗ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಮ್ಮ ಕ್ಷೇತ್ರ ಬಿಟಿಎಂ ಬಡಾವಣೆಯಲ್ಲಿಯೂ ಕಾರ್ಯಕ್ರಮ ಆಯೋಜಿಸುವಂತೆ ಮನವಿ ಮಾಡಿದ್ದರು. ನಿವಾಸಿಗಳೂ ಬೆಂಬಲ ನೀಡಿರುವುದರಿಂದ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ.
2016ರ ಫೆಬ್ರವರಿ 21ರಂದು ಬಿಎಂಟಿಸಿ, ಬಿಎಂಆರ್ಸಿಎಲ್, ಬಿಬಿಎಂಪಿ, ಜಲಮಂಡಳಿ, ಬೆಸ್ಕಾಂ, ನಗರ ಪೊಲೀಸರ ಜಂಟಿ ಸಹಭಾಗ್ವಿತ್ವದಲ್ಲಿ ಎಂ.ಜಿ.ರಸ್ತೆಯಲ್ಲಿ ಓಪನ್ ಸ್ಟ್ರೀಟ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ಸಂಪೂರ್ಣ ರಸ್ತೆ ವಿವಿಧ ಸಾಂಸ್ಕೃತಿಕ ಚಟುವಟಿಕೆ ಮತ್ತು ಕ್ರೀಡಾ ಚಟುವಟಿಕೆಗಳಿಂದ ತುಂಬಿ ಹೋಗಿತ್ತು. ಜನರು ಸಾರ್ಜನಿಕ ಸಾರಿಗೆಯನ್ನು ಬಳಸುವಂತೆ ಮನವಿ ಮಾಡಲಾಗಿತ್ತು.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications