ಚುನಾವಣೆ ಬಂತಲ್ಲ: ಗೂಬೆಗೂ ಅದೃಷ್ಟದ ಕಾಲ ಕೂಡಿ ಬಂತು!
Recommended Video

ಬೆಂಗಳೂರು, ಮಾರ್ಚ್ 09: ಈಗ ಚುನಾವಣೆ ಕಾಲ, ರಾಜಕಾರಣಿಗಳು ಮತಯಾಚಿಸಲು ಮತದಾರರನ್ನು ಓಲೈಸಲು ಕುಕ್ಕರ್ , ಸೀರೆ ಮುಂತಾದ ಗೃಹಪಯೋಗಿ ವಸ್ತುಗಳನ್ನು ಹಂಚುವುದು ಸಾಮಾನ್ಯ.ಇದೆಲ್ಲ ತೆರೆಯ ಮೇಲೆ ಕಾಣುವ ಮತದಾರರ ಓಲೈಕೆಯ ಪ್ರಯತ್ನವಾದರೆ ತೆರೆಯ ಹಿಂದೆ ಕೆಲ ಪ್ರಯತ್ನ ಕೂಡ ಚುನಾವಣೆಗಾಗಿ ನಡೆಯುತ್ತಿರುತ್ತದೆ. ಆ ಪೈಕಿ ಗೂಬೆ ದರ್ಶನ ಮಾಡುವುದು ಕೂಡ.
ಚುನಾವಣೆ ಬಂತೆಂದರೆ ರಾಜಕಾರಣಿಗಳು ಮತದಾರರನ್ನು ಹುಡುಕಲು ಮನೆ ಮನೆಗೆ ತೆರಳುವುದು ಸಾಮಾನ್ಯ. ಆದರೆ ಈಗ ಎಲ್ಲರೂ ಬೈದುಕೊಳ್ಳುವ ಗೂಬೆಯನ್ನು ಕೂಡ ರಾಜಕಾರಣಿಗಳು ಬಿಡುತ್ತಿಲ್ಲ. ಅದೃಷ್ಟದ ಸಂಕೇತವೆಂದು ಗೂಬೆ ಹಿಂದೆ ಬಿದ್ದಿದ್ದಾರೆ. ಮಾಟ, ಮಂತ್ರಕ್ಕೆ ಹೆಸರಾಗಿರುವ ಕೊಳ್ಳೆಗಾಲಕ್ಕೆ ರಾಜಕೀಯ ಮುಖಂಡರು ಬರುತ್ತಿದ್ದಾರಲ್ಲದೆ, ಚುನಾವಣೆಯ ಗೆಲುವಿಗಾಗಿ ಅದೃಷ್ಟದ ಸಂಕೇತವೆಂದು ನಂಬಲಾದ
ಗೂಬೆಯನ್ನು ಖರೀದಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಗೂಬೆ ಅಪಶಕುನ ಪಕ್ಷಿ ಎಂಬುದು ಸಾಮಾನ್ಯ ನಂಬಿಕೆ. ಆದರೆ ಚುನಾವಣೆ ಹತ್ತಿರ ಬರುತ್ತಿರುವ ಸಮಯದಲ್ಲಿ ಅದು ಅದೃಷ್ಟದ ಸಂಕೇತ ಎಂಬ ನಂಬಿಕೆಯನ್ನು ಹರಿಯಬಿಡಲಾಗಿದೆ. ಹಾಗಾಗಿ ಗೂಬೆಯನ್ನು ಮಾರಾಟ ಮಾಡುವ ಜಾಲ ಕಾರ್ಯ ಪ್ರವೃತ್ತವಾಗಿದೆ.

ಗೂಬೆ ಲಕ್ಷ್ಮೀದೇವಿಯ ವಾಹನ ಎನ್ನಲಾಗುತ್ತದೆ. ಈಕೆ ಕುಳಿತು ಸಂಚರಿಸುವ ಗೂಬೆಯನ್ನು ಖರೀದಿಸಿ ಪೋಷಣೆ ಮಾಡಿದರೆ ವಿಜಯಲಕ್ಷ್ಮೀ ಒಲಿವಳು ಎಂಬ ನಂಬಿಕೆಗೆ ಜೋತು ಬಿದ್ದಿದ್ದಾರೆ. ಇದಕ್ಕೆ ಪುರಾವೆ ಎಂಬಂತೆ ಕೊಳ್ಳೆಗಾಲದಲ್ಲಿ ಅದೃಷ್ಟದ ಗೂಬೆ ಎಂದು ಮಾರಟ ಮಾಡುತ್ತಿದ್ದಿಬ್ಬರನ್ನು ಜಿಲ್ಲಾ ತಡೆ ಪೊಲೀಸರು ಅಪರಾಧ ತಡೆ ಪೊಲೀಸರು ಬಂಧಿಸಿದ್ದಾರೆ.
ಇವರು ರಾಜಕೀಯ ಮುಖಂಡರಿಗೆ ಗೂಬೆಗಳನ್ನು ಮಾರಾಟ ಮಾಡಲು ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಬಂಧಿತರಿಂದ 2.5 ಕೆಜಿ ತೂಕದ ಗೂಬೆಯನ್ನು ವಶಪಡಿಸಿಕೊಂಡಿದ್ದಾರೆ.
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್











Click it and Unblock the Notifications