ಕೋಮುವಾದಕ್ಕೆ ಬ್ರೇಕ್ ಅಭಿವೃದ್ಧಿಗೆ ಒತ್ತು: ನೌಹೀರಾ ಶೇಖ್
ಬೆಂಗಳೂರು, ಮೇ 7: ಕೋಮುವಾದ ದೂರಮಾಡಿ ಸುಂದರ ಕರ್ನಾಟಕ, ಸುಂದರ ಭಾರತ ನಿರ್ಮಾಣ ಮಾಡಲು ಎಂಇಪಿಗೆ ಬೆಂಬಲ ಕೊಡಿ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಡಾ.ನೌಹೀರಾ ಶೇಖ್ ಮನವಿ ಮಾಡಿದ್ದಾರೆ.
ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಆರ್ ನಂದಕುಮಾರ್ ಪರವಾಗಿ ಇಂದು(ಸೋಮವಾರ) ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದ್ವೇಷ ಬಿತ್ತಿ, ಜನರನ್ನು ಎತ್ತಿಕಟ್ಟಿ ಒಡೆದು ಆಳುವುದು ನಮ್ಮ ನೀತಿಯಲ್ಲ, ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಜನರ ಆರ್ಶಿರ್ವಾದದಿಂದ ಎಂಇಪಿ ಅಧಿಕಾರಕ್ಕೆ ಬರಲಿದೆ ನಮ್ಮ ಆಂತರಿಕ ಸಮೀಕ್ಷೆಗಳು ಕೂಡ ಇದನ್ನೆ ಪುಷ್ಟಿಕರಿಸುತ್ತಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಯಾರ ವಿರುದ್ಧವೂ ಟಕ್ಕರ್ ನೀಡಲು ನಾನು ಬಂದಿಲ್ಲ. ಯಾವುದೇ ರಾಜಕೀಯ ಪಕ್ಷ ಮತ್ತು ನಾಯಕರ ವಿರುದ್ಧ ಹೋರಾಟ ನನ್ನ ಗುರಿಯಲ್ಲ. ಅನ್ಯಾಯದ ವಿರುದ್ಧ ಸಿಡಿದೆಳುವುದು, ಮಾನವಿಯತೆಗಾಗಿ ಹೋರಾಡುವುದು, ನೊಂದವರಿಗೆ ನೆಮ್ಮದಿ, ಬದಕು ಕಟ್ಟಿಕೊಡುವುದು ನನ್ನ ರಾಜಕೀಯ ಜೀವನದ ಹೋರಾಟವಾಗಿದೆ.
ದೇಶವನ್ನು ಅತಿ ಹೆಚ್ಚು ವರ್ಷ ಆಡಳಿತ ಮಾಡಿದ ಪಕ್ಷ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲಿಲ್ಲ. ಹಾಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ ಸಮಸ್ಯೆ ಪರಿಹರಿಸುವತ್ತ ಗಮನ ಕೊಡುತ್ತಿಲ್ಲ. ಏಕೆಂದರೆ ಅವರು ಬಹುಪಾಲು ಸಮಯವನ್ನು ವಿದೇಶದಲ್ಲಿ ಕಳೆಯುತ್ತ ಬಂದಿದ್ದಾರೆ ಎಂದು ಟಾಂಗ್ ನೀಡಿದರು.
ಎಂಇಪಿ ಅಧಿಕಾರಕ್ಕೆ ಬಂದಲ್ಲಿ ಪಕ್ಷ ಪ್ರಣಾಳಿಕೆ ಮೂಲಕ ನೀಡಿರುವ ಭರವಸೆಯಂತೆ ರೈತರ ಸಾಲ, ಬಡ್ಡಿ ಮನ್ನಾ ಮಾಡಲಾಗುವುದು. ಇದಲ್ಲದೆ ರೈತರು ಬೆಳೆದ ಬೆಳೆಗಳನ್ನು ಸಂರಕ್ಷಣೆ ಮಾಡಿ ಒಳ್ಳೆಯ ಬೆಲೆ ಬಂದಾಗ ಮಾರಾಟ ಮಾಡಲು ಅನುಕೂಲವಾಗುವಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಶೀತಲ ಗೃಹಗಳನ್ನು, ಆಹಾರ ಧಾನ್ಯಗಳ ಗೋದಾಮುಗಳನ್ನು ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಮಹಿಳೆಯರು ನೆಮ್ಮದಿ ಮತ್ತು ಸ್ವಾಭಿಮಾನದಿಂದ ಬದುಕುವಂತಹ ನಿರ್ಮಲ ವಾತಾವರಣ ಕಲ್ಪಿಸಿ ಕೊಡಲಾಗುವುದು. ತಾಲೂಕು ಮಟ್ಟದಲ್ಲಿ ದೊಡ್ಡ ದೊಡ್ಡ ಆಸ್ಪತ್ರೆಗಳನ್ನು ನಿರ್ಮಿಸಿ ಬಡವರಿಗೆ ಉಚಿತ ಚಿಕಿತ್ಸಾ ಸೌಲಭ್ಯ ಒದಗಿಸಲಾಗುವುದು. ಶಾಸನಸಭೆ, ಸ್ಥಳೀಯ ಸಂಸ್ಥೆ ಸೇರಿದಂತೆ ಎಲ್ಲ ಚುನಾಯಿತ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಸ್ಥಾನಗಳನ್ನು ಮೀಸಲಿಡಲಾಗುವುದು ಎಂದರು.
ದೊಡ್ಡ ದೊಡ್ಡ ನಗರಗಳಲ್ಲಿ ಆಟೋ ಚಾಲಕರಿಗೆ ಬಡ್ಡಿರಹಿರವಾಗಿ ಆಟೋ ಸಾಲ ನೀಡಿ ಸ್ವತಂತ್ರವಾಗಿ ಬದುಕು ಕಟ್ಟಿಕೊಳ್ಳಲು ಅನುಕೂಲ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications