ಕಾಂಗ್ರೆಸ್ ಗೂಂಡಾ ಸರ್ಕಾರವನ್ನು ಕಿತ್ತೊಗೆಯಿರಿ: ನೌಹೀರಾ ಶೇಖ್
ಬೆಂಗಳೂರು, ಮೇ 4: ರಾಜ್ಯದಲ್ಲಿ ಪ್ರವರ್ದನಮಾನಕ್ಕೆ ಬರುತ್ತಿರುವ ಎಂಇಪಿ ಪಕ್ಷವನ್ನು ರಾಜಕೀಯವಾಗಿ ಮುಗಿಸಲು ಸರ್ಕಾರಿ ಪ್ರಯೋಜಕತ್ವದ ಹಿಂಸಾಚಾರ ನಡೆಸುತ್ತಿದ್ದು, ಕಾಂಗ್ರೆಸ್ ಗೂಂಡಾಗಿರಿ ಸರ್ಕಾರವನ್ನು ಕಿತ್ತು ಹಾಕಲು ಜನತೆ ಸಂಕಲ್ಪ ಮಾಡಬೇಕು ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ನೌಹೀರಾ ಶೇಕ್ ಗಂಭೀರ ಆರೋಪಿಸಿದ್ದಾರೆ.
ನಗರದ ಲೀಲಾ ಪ್ಯಾಲೇಸ್ ಹೊಟೇಲ್ ನಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ಸರ್ವಜ್ಞನಗರದ ವಿಧಾನಸಭಾ ಕ್ಷೇತ್ರದಲ್ಲಿ ಎಂಇಪಿ ರ್ಯಾಲಿ ಮೇಲೆ ಕೆಲವು ಸ್ಥಳೀಯ ಕಾಂಗ್ರೆಸ್ ಗೂಂಡಾಗಳು ಕಲ್ಲು ತೂರಾಟ ಮಾಡಿ, ಕಾರ್ಯಕರ್ತರ ಹಾಗೂ ಕೆಲವು ಖಾಸಗಿ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿ ಕ್ಯಾಮೆರಾ ಮತ್ತು ಓಬಿ ವ್ಯಾನ್ ದ್ವಂಸ ಮಾಡಿದ್ದಾರೆ.
20ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಪೆಟ್ಟುಬಿದ್ದಿದ್ದು, ಕೆಲವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದು ಪೂರ್ವ ನಿಯೋಜಿತ ಕೃತ್ಯ ಹೆಣ್ಣುಮಕ್ಕಳ ಮೇಲೆ ನಡುಬೀದಿಯಲ್ಲಿ ಅದು ಹಗಲು ಹೊತ್ತಿನಲ್ಲಿ ಕಲ್ಲು ಹೊಡಿತ್ತಾರೆಂದರೇ ಜನರ ರಕ್ಷಣೆ ಎಲ್ಲಿದೆ? ಗೂಂಡಾಗಿರಿಗೆ ಕುಮ್ಮಕ್ಕು ಕೊಡುತ್ತಿರುವ ಸರ್ಕಾರಕ್ಕೆ ನಾಚೀಕೆ ಆಗಬೇಕು ಎಂದು ವಾಗ್ದಾಳಿ ಮಾಡಿದರು.

ಎಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲಾಗಿದೆಯೋ ಅದೇ ಸ್ಥಳದಿಂದ ಮತ್ತೆ ರೋಡ್ ಶೋ ನಡೆಸುತ್ತೇವೆ ಇಂತಹ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ, ಜಗ್ಗುವುದಿಲ್ಲ ಎಂದರು. ಈ ಕೃತ್ಯಕ್ಕೆ ಕಾರಣರಾದ ಸ್ಥಳೀಯ ಗೂಂಡಾಗಳನ್ನು ಕೂಡಲೇ ಬಂಧಿಸಬೇಕು, ಅವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಇತಂಹ ಘಟನೆಗಳನ್ನು ನೋಡಿದರೆ ರಾಜಕೀಯಕ್ಕೆ ಶುದ್ದ ಹಸ್ತರು, ಪ್ರಾಮಾಣಿಕರು ಬರಲಾಗದಂತಹ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ ಈಗಾಲಾದರೂ ಸರ್ಕಾರ ಎಚ್ಚೆತ್ತುಕೊಂಡು ಮುಕ್ತ ಮತ್ತು ನ್ಯಾಯಮ್ಮತ ಚುನಾವಣೆಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ನರ್ಸ್ ಜಯಲಕ್ಷ್ಮೀ ಗುಡುಗು : ಬೀದಿಯಲ್ಲಿ ಹೋಗುವ ಹೆಣ್ಣುಮಕ್ಕಳ, ಮುಗ್ಧರ ಮೇಲೆ ಹಲ್ಲೆ ನಡೆಸಿ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಹೇಳಿದಾರಾ? ಸಿದ್ದರಾಮಯ್ಯ ಸರ್ಕಾರಕ್ಕೆ ನಾಚೀಕೆಯಾಗಬೇಕು, ಈ ಕೂಡಲೇ ಅವರು ಇದಕ್ಕೆ ಉತ್ತರ ಕೊಡಬೇಕು ಇಂತಹ ಬೆದರಿಕೆಗೆ ಎಂಇಪಿ ಕಾರ್ಯಕರ್ತರು, ಮುಖಂಡರು ಹೆದರುವುದಿಲ್ಲ ಎಂದು ಸವಾಲ್ ಹಾಕಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications