ಕಾಂಗ್ರೆಸ್ ಗೂಂಡಾ ಸರ್ಕಾರವನ್ನು ಕಿತ್ತೊಗೆಯಿರಿ: ನೌಹೀರಾ ಶೇಖ್
ಬೆಂಗಳೂರು, ಮೇ 4: ರಾಜ್ಯದಲ್ಲಿ ಪ್ರವರ್ದನಮಾನಕ್ಕೆ ಬರುತ್ತಿರುವ ಎಂಇಪಿ ಪಕ್ಷವನ್ನು ರಾಜಕೀಯವಾಗಿ ಮುಗಿಸಲು ಸರ್ಕಾರಿ ಪ್ರಯೋಜಕತ್ವದ ಹಿಂಸಾಚಾರ ನಡೆಸುತ್ತಿದ್ದು, ಕಾಂಗ್ರೆಸ್ ಗೂಂಡಾಗಿರಿ ಸರ್ಕಾರವನ್ನು ಕಿತ್ತು ಹಾಕಲು ಜನತೆ ಸಂಕಲ್ಪ ಮಾಡಬೇಕು ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ನೌಹೀರಾ ಶೇಕ್ ಗಂಭೀರ ಆರೋಪಿಸಿದ್ದಾರೆ.
ನಗರದ ಲೀಲಾ ಪ್ಯಾಲೇಸ್ ಹೊಟೇಲ್ ನಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ಸರ್ವಜ್ಞನಗರದ ವಿಧಾನಸಭಾ ಕ್ಷೇತ್ರದಲ್ಲಿ ಎಂಇಪಿ ರ್ಯಾಲಿ ಮೇಲೆ ಕೆಲವು ಸ್ಥಳೀಯ ಕಾಂಗ್ರೆಸ್ ಗೂಂಡಾಗಳು ಕಲ್ಲು ತೂರಾಟ ಮಾಡಿ, ಕಾರ್ಯಕರ್ತರ ಹಾಗೂ ಕೆಲವು ಖಾಸಗಿ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿ ಕ್ಯಾಮೆರಾ ಮತ್ತು ಓಬಿ ವ್ಯಾನ್ ದ್ವಂಸ ಮಾಡಿದ್ದಾರೆ.
20ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಪೆಟ್ಟುಬಿದ್ದಿದ್ದು, ಕೆಲವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದು ಪೂರ್ವ ನಿಯೋಜಿತ ಕೃತ್ಯ ಹೆಣ್ಣುಮಕ್ಕಳ ಮೇಲೆ ನಡುಬೀದಿಯಲ್ಲಿ ಅದು ಹಗಲು ಹೊತ್ತಿನಲ್ಲಿ ಕಲ್ಲು ಹೊಡಿತ್ತಾರೆಂದರೇ ಜನರ ರಕ್ಷಣೆ ಎಲ್ಲಿದೆ? ಗೂಂಡಾಗಿರಿಗೆ ಕುಮ್ಮಕ್ಕು ಕೊಡುತ್ತಿರುವ ಸರ್ಕಾರಕ್ಕೆ ನಾಚೀಕೆ ಆಗಬೇಕು ಎಂದು ವಾಗ್ದಾಳಿ ಮಾಡಿದರು.

ಎಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲಾಗಿದೆಯೋ ಅದೇ ಸ್ಥಳದಿಂದ ಮತ್ತೆ ರೋಡ್ ಶೋ ನಡೆಸುತ್ತೇವೆ ಇಂತಹ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ, ಜಗ್ಗುವುದಿಲ್ಲ ಎಂದರು. ಈ ಕೃತ್ಯಕ್ಕೆ ಕಾರಣರಾದ ಸ್ಥಳೀಯ ಗೂಂಡಾಗಳನ್ನು ಕೂಡಲೇ ಬಂಧಿಸಬೇಕು, ಅವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಇತಂಹ ಘಟನೆಗಳನ್ನು ನೋಡಿದರೆ ರಾಜಕೀಯಕ್ಕೆ ಶುದ್ದ ಹಸ್ತರು, ಪ್ರಾಮಾಣಿಕರು ಬರಲಾಗದಂತಹ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ ಈಗಾಲಾದರೂ ಸರ್ಕಾರ ಎಚ್ಚೆತ್ತುಕೊಂಡು ಮುಕ್ತ ಮತ್ತು ನ್ಯಾಯಮ್ಮತ ಚುನಾವಣೆಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ನರ್ಸ್ ಜಯಲಕ್ಷ್ಮೀ ಗುಡುಗು : ಬೀದಿಯಲ್ಲಿ ಹೋಗುವ ಹೆಣ್ಣುಮಕ್ಕಳ, ಮುಗ್ಧರ ಮೇಲೆ ಹಲ್ಲೆ ನಡೆಸಿ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಹೇಳಿದಾರಾ? ಸಿದ್ದರಾಮಯ್ಯ ಸರ್ಕಾರಕ್ಕೆ ನಾಚೀಕೆಯಾಗಬೇಕು, ಈ ಕೂಡಲೇ ಅವರು ಇದಕ್ಕೆ ಉತ್ತರ ಕೊಡಬೇಕು ಇಂತಹ ಬೆದರಿಕೆಗೆ ಎಂಇಪಿ ಕಾರ್ಯಕರ್ತರು, ಮುಖಂಡರು ಹೆದರುವುದಿಲ್ಲ ಎಂದು ಸವಾಲ್ ಹಾಕಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications